ಹನೂರು : ತಾಲೂಕಿನ ದೊಡ್ಡಲತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಒಬಿಸಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ದೊಡ್ಡಲತ್ತೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಬಸಮ್ಮರವರು ಮಾತನಾಡಿ ಜನದ್ವನಿ ಬಿ ವೆಂಕಟೇಶ್ ರವರು ಹಿಂದುಳಿದ ವರ್ಗದವರಾಗಿದ್ದರು ಸಹ ಕ್ಷೇತ್ರದ ಎಲ್ಲ ಸಮಾಜದವರನ್ನು ಒಂದೇ ರೀತಿ ನೋಡುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ಅವರ ಸೇವೆ ನಿರಂತರವಾಗಿದೆ. ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ, ನೂರಾರು ಕಣ್ಣಿನ ತಪಾಸಣಾ ಶಿಬಿರಗಳು, ಋಣ ಸಂದಾಯ ಆಂಬುಲೆನ್ಸ್ ಸೇವೆ ಒದಗಿಸಿದ್ದಾರೆ ಇದಲ್ಲದೆ ಕುಡಿಯುವ ನೀರು ಸಮಸ್ಯೆ ಇರುವ ಕೆಲವು ಗ್ರಾಮಗಳಿಗೆ ಸ್ವಂತ ಹಣದಿಂದ ಅಧಿಕಾರವಿಲ್ಲದಿದ್ದರೂ ಕುಡಿಯುವ ನೀರು ಒದಗಿಸಿದ್ದಾರೆ. ಇಂತಹ ವ್ಯಕ್ತಿಗಳಿಗೆ ಅಧಿಕಾರ ನೀಡಿದರೆ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಆಗಲಿದೆ. ಆದ್ದರಿಂದ ಹನೂರು ಕ್ಷೇತ್ರದ ಮತದಾರರು ಜನದ್ವನಿ ಬಿ ವೆಂಕಟೇಶ್ ರವರನ್ನು ಬೆಂಬಲಿಸಿ ಹನೂರು ಅಭಿವೃದ್ಧಿಗೆ ಶ್ರಮಿಸುವಂತೆ ಮನವಿ ಮಾಡಿದರು.
ಜನದ್ವನಿ ಬಿ ವೆಂಕಟೇಶ್ ಮಾತನಾಡಿ ನಮ್ಮ ಸಮಾಜಮುಖಿ ಸೇವಾ ಕಾರ್ಯಗಳನ್ನು ಮೆಚ್ಚಿ ದೊಡ್ಡಲತ್ತೂರು ಗ್ರಾಮದ ಅಧ್ಯಕ್ಷರು ಉಪಾಧ್ಯಕ್ಷರಾದಿಯಾಗಿ ಸದಸ್ಯರುಗಳು ನನ್ನನ್ನು ಬೆಂಬಲಿಸಿ ಬಿಜೆಪಿ ಪಕ್ಷಕ್ಕೆ ಬಂದಿರುವುದರಿಂದ ನನಗೆ ಆನೆ ಬಲ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಉತ್ತಮವಾಗಿ ಸಂಘಟಿಸಿ ಹನೂರು ಕ್ಷೇತ್ರದಲ್ಲಿ ಬಿಜೆಪಿ ಶಕ್ತಿ ಏನೆಂಬುದನ್ನು ತೋರಿಸಲಿದ್ದೇನೆ ಎಂದು ತಿಳಿಸಿದರು.
ಉಪಾಧ್ಯಕ್ಷರಾದ ಶೋಭಾ, ಸದಸ್ಯರುಗಳಾದ ರವಿ, ಕುಮಾರ್, ಪ್ರೇಮ ಮುಖಂಡರುಗಳಾದ ವೆಂಕಟಾಚಲ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.
ಈ ವೇಳೆ ಗ್ರಾಪಂ ಸದಸ್ಯರಾದ ರಾಜಪ್ಪ, ವರಪ್ರಸಾದ್, ಮುಖಂಡರುಗಳಾದ ಚಿನ್ನರಾಜು, ಮಲ್ಲಣ್ಣ, ಮನು, ಅರವಿಂದ್, ಲೋಕೇಶ್ ಜತ್ತಿ, ಪ್ರವೀಣ್ ಕುಮಾರ್ ಹಾಜರಿದ್ದರು.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…