ಹನೂರು : ತಾಲೂಕಿನ ದೊಡ್ಡಲತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಒಬಿಸಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ದೊಡ್ಡಲತ್ತೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಬಸಮ್ಮರವರು ಮಾತನಾಡಿ ಜನದ್ವನಿ ಬಿ ವೆಂಕಟೇಶ್ ರವರು ಹಿಂದುಳಿದ ವರ್ಗದವರಾಗಿದ್ದರು ಸಹ ಕ್ಷೇತ್ರದ ಎಲ್ಲ ಸಮಾಜದವರನ್ನು ಒಂದೇ ರೀತಿ ನೋಡುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ಅವರ ಸೇವೆ ನಿರಂತರವಾಗಿದೆ. ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ, ನೂರಾರು ಕಣ್ಣಿನ ತಪಾಸಣಾ ಶಿಬಿರಗಳು, ಋಣ ಸಂದಾಯ ಆಂಬುಲೆನ್ಸ್ ಸೇವೆ ಒದಗಿಸಿದ್ದಾರೆ ಇದಲ್ಲದೆ ಕುಡಿಯುವ ನೀರು ಸಮಸ್ಯೆ ಇರುವ ಕೆಲವು ಗ್ರಾಮಗಳಿಗೆ ಸ್ವಂತ ಹಣದಿಂದ ಅಧಿಕಾರವಿಲ್ಲದಿದ್ದರೂ ಕುಡಿಯುವ ನೀರು ಒದಗಿಸಿದ್ದಾರೆ. ಇಂತಹ ವ್ಯಕ್ತಿಗಳಿಗೆ ಅಧಿಕಾರ ನೀಡಿದರೆ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಆಗಲಿದೆ. ಆದ್ದರಿಂದ ಹನೂರು ಕ್ಷೇತ್ರದ ಮತದಾರರು ಜನದ್ವನಿ ಬಿ ವೆಂಕಟೇಶ್ ರವರನ್ನು ಬೆಂಬಲಿಸಿ ಹನೂರು ಅಭಿವೃದ್ಧಿಗೆ ಶ್ರಮಿಸುವಂತೆ ಮನವಿ ಮಾಡಿದರು.
ಜನದ್ವನಿ ಬಿ ವೆಂಕಟೇಶ್ ಮಾತನಾಡಿ ನಮ್ಮ ಸಮಾಜಮುಖಿ ಸೇವಾ ಕಾರ್ಯಗಳನ್ನು ಮೆಚ್ಚಿ ದೊಡ್ಡಲತ್ತೂರು ಗ್ರಾಮದ ಅಧ್ಯಕ್ಷರು ಉಪಾಧ್ಯಕ್ಷರಾದಿಯಾಗಿ ಸದಸ್ಯರುಗಳು ನನ್ನನ್ನು ಬೆಂಬಲಿಸಿ ಬಿಜೆಪಿ ಪಕ್ಷಕ್ಕೆ ಬಂದಿರುವುದರಿಂದ ನನಗೆ ಆನೆ ಬಲ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಉತ್ತಮವಾಗಿ ಸಂಘಟಿಸಿ ಹನೂರು ಕ್ಷೇತ್ರದಲ್ಲಿ ಬಿಜೆಪಿ ಶಕ್ತಿ ಏನೆಂಬುದನ್ನು ತೋರಿಸಲಿದ್ದೇನೆ ಎಂದು ತಿಳಿಸಿದರು.
ಉಪಾಧ್ಯಕ್ಷರಾದ ಶೋಭಾ, ಸದಸ್ಯರುಗಳಾದ ರವಿ, ಕುಮಾರ್, ಪ್ರೇಮ ಮುಖಂಡರುಗಳಾದ ವೆಂಕಟಾಚಲ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.
ಈ ವೇಳೆ ಗ್ರಾಪಂ ಸದಸ್ಯರಾದ ರಾಜಪ್ಪ, ವರಪ್ರಸಾದ್, ಮುಖಂಡರುಗಳಾದ ಚಿನ್ನರಾಜು, ಮಲ್ಲಣ್ಣ, ಮನು, ಅರವಿಂದ್, ಲೋಕೇಶ್ ಜತ್ತಿ, ಪ್ರವೀಣ್ ಕುಮಾರ್ ಹಾಜರಿದ್ದರು.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…