ಜಿಲ್ಲೆಗಳು

ಜನಧ್ವನಿ ವೆಂಕಟೇಶ್ ರನ್ನು ಬೆಂಬಲಿಸಿ ಬಿಜೆಪಿಗೆ ಹಲವರ ಸೇರ್ಪಡೆ

ಹನೂರು : ತಾಲೂಕಿನ ದೊಡ್ಡಲತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಒಬಿಸಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ದೊಡ್ಡಲತ್ತೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಬಸಮ್ಮರವರು ಮಾತನಾಡಿ ಜನದ್ವನಿ ಬಿ ವೆಂಕಟೇಶ್ ರವರು ಹಿಂದುಳಿದ ವರ್ಗದವರಾಗಿದ್ದರು ಸಹ ಕ್ಷೇತ್ರದ ಎಲ್ಲ ಸಮಾಜದವರನ್ನು ಒಂದೇ ರೀತಿ ನೋಡುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ಅವರ ಸೇವೆ ನಿರಂತರವಾಗಿದೆ. ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ, ನೂರಾರು ಕಣ್ಣಿನ ತಪಾಸಣಾ ಶಿಬಿರಗಳು, ಋಣ ಸಂದಾಯ ಆಂಬುಲೆನ್ಸ್ ಸೇವೆ ಒದಗಿಸಿದ್ದಾರೆ ಇದಲ್ಲದೆ ಕುಡಿಯುವ ನೀರು ಸಮಸ್ಯೆ ಇರುವ ಕೆಲವು ಗ್ರಾಮಗಳಿಗೆ ಸ್ವಂತ ಹಣದಿಂದ ಅಧಿಕಾರವಿಲ್ಲದಿದ್ದರೂ ಕುಡಿಯುವ ನೀರು ಒದಗಿಸಿದ್ದಾರೆ. ಇಂತಹ ವ್ಯಕ್ತಿಗಳಿಗೆ ಅಧಿಕಾರ ನೀಡಿದರೆ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಆಗಲಿದೆ. ಆದ್ದರಿಂದ ಹನೂರು ಕ್ಷೇತ್ರದ ಮತದಾರರು ಜನದ್ವನಿ ಬಿ ವೆಂಕಟೇಶ್ ರವರನ್ನು ಬೆಂಬಲಿಸಿ ಹನೂರು ಅಭಿವೃದ್ಧಿಗೆ ಶ್ರಮಿಸುವಂತೆ ಮನವಿ ಮಾಡಿದರು.

ಜನದ್ವನಿ ಬಿ ವೆಂಕಟೇಶ್ ಮಾತನಾಡಿ ನಮ್ಮ ಸಮಾಜಮುಖಿ ಸೇವಾ ಕಾರ್ಯಗಳನ್ನು ಮೆಚ್ಚಿ ದೊಡ್ಡಲತ್ತೂರು ಗ್ರಾಮದ ಅಧ್ಯಕ್ಷರು ಉಪಾಧ್ಯಕ್ಷರಾದಿಯಾಗಿ ಸದಸ್ಯರುಗಳು ನನ್ನನ್ನು ಬೆಂಬಲಿಸಿ ಬಿಜೆಪಿ ಪಕ್ಷಕ್ಕೆ ಬಂದಿರುವುದರಿಂದ ನನಗೆ ಆನೆ ಬಲ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಉತ್ತಮವಾಗಿ ಸಂಘಟಿಸಿ ಹನೂರು ಕ್ಷೇತ್ರದಲ್ಲಿ ಬಿಜೆಪಿ ಶಕ್ತಿ ಏನೆಂಬುದನ್ನು ತೋರಿಸಲಿದ್ದೇನೆ ಎಂದು ತಿಳಿಸಿದರು.

ಉಪಾಧ್ಯಕ್ಷರಾದ ಶೋಭಾ, ಸದಸ್ಯರುಗಳಾದ ರವಿ, ಕುಮಾರ್, ಪ್ರೇಮ ಮುಖಂಡರುಗಳಾದ ವೆಂಕಟಾಚಲ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.

ಈ ವೇಳೆ ಗ್ರಾಪಂ ಸದಸ್ಯರಾದ ರಾಜಪ್ಪ, ವರಪ್ರಸಾದ್, ಮುಖಂಡರುಗಳಾದ ಚಿನ್ನರಾಜು, ಮಲ್ಲಣ್ಣ, ಮನು, ಅರವಿಂದ್, ಲೋಕೇಶ್ ಜತ್ತಿ, ಪ್ರವೀಣ್ ಕುಮಾರ್ ಹಾಜರಿದ್ದರು.

andolanait

Recent Posts

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

4 hours ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

4 hours ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

11 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

11 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

11 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

11 hours ago