ಜಿಲ್ಲೆಗಳು

ಜನಧ್ವನಿ ವೆಂಕಟೇಶ್ ರನ್ನು ಬೆಂಬಲಿಸಿ ಬಿಜೆಪಿಗೆ ಹಲವರ ಸೇರ್ಪಡೆ

ಹನೂರು : ತಾಲೂಕಿನ ದೊಡ್ಡಲತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಒಬಿಸಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ದೊಡ್ಡಲತ್ತೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಬಸಮ್ಮರವರು ಮಾತನಾಡಿ ಜನದ್ವನಿ ಬಿ ವೆಂಕಟೇಶ್ ರವರು ಹಿಂದುಳಿದ ವರ್ಗದವರಾಗಿದ್ದರು ಸಹ ಕ್ಷೇತ್ರದ ಎಲ್ಲ ಸಮಾಜದವರನ್ನು ಒಂದೇ ರೀತಿ ನೋಡುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ಅವರ ಸೇವೆ ನಿರಂತರವಾಗಿದೆ. ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ, ನೂರಾರು ಕಣ್ಣಿನ ತಪಾಸಣಾ ಶಿಬಿರಗಳು, ಋಣ ಸಂದಾಯ ಆಂಬುಲೆನ್ಸ್ ಸೇವೆ ಒದಗಿಸಿದ್ದಾರೆ ಇದಲ್ಲದೆ ಕುಡಿಯುವ ನೀರು ಸಮಸ್ಯೆ ಇರುವ ಕೆಲವು ಗ್ರಾಮಗಳಿಗೆ ಸ್ವಂತ ಹಣದಿಂದ ಅಧಿಕಾರವಿಲ್ಲದಿದ್ದರೂ ಕುಡಿಯುವ ನೀರು ಒದಗಿಸಿದ್ದಾರೆ. ಇಂತಹ ವ್ಯಕ್ತಿಗಳಿಗೆ ಅಧಿಕಾರ ನೀಡಿದರೆ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಆಗಲಿದೆ. ಆದ್ದರಿಂದ ಹನೂರು ಕ್ಷೇತ್ರದ ಮತದಾರರು ಜನದ್ವನಿ ಬಿ ವೆಂಕಟೇಶ್ ರವರನ್ನು ಬೆಂಬಲಿಸಿ ಹನೂರು ಅಭಿವೃದ್ಧಿಗೆ ಶ್ರಮಿಸುವಂತೆ ಮನವಿ ಮಾಡಿದರು.

ಜನದ್ವನಿ ಬಿ ವೆಂಕಟೇಶ್ ಮಾತನಾಡಿ ನಮ್ಮ ಸಮಾಜಮುಖಿ ಸೇವಾ ಕಾರ್ಯಗಳನ್ನು ಮೆಚ್ಚಿ ದೊಡ್ಡಲತ್ತೂರು ಗ್ರಾಮದ ಅಧ್ಯಕ್ಷರು ಉಪಾಧ್ಯಕ್ಷರಾದಿಯಾಗಿ ಸದಸ್ಯರುಗಳು ನನ್ನನ್ನು ಬೆಂಬಲಿಸಿ ಬಿಜೆಪಿ ಪಕ್ಷಕ್ಕೆ ಬಂದಿರುವುದರಿಂದ ನನಗೆ ಆನೆ ಬಲ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಉತ್ತಮವಾಗಿ ಸಂಘಟಿಸಿ ಹನೂರು ಕ್ಷೇತ್ರದಲ್ಲಿ ಬಿಜೆಪಿ ಶಕ್ತಿ ಏನೆಂಬುದನ್ನು ತೋರಿಸಲಿದ್ದೇನೆ ಎಂದು ತಿಳಿಸಿದರು.

ಉಪಾಧ್ಯಕ್ಷರಾದ ಶೋಭಾ, ಸದಸ್ಯರುಗಳಾದ ರವಿ, ಕುಮಾರ್, ಪ್ರೇಮ ಮುಖಂಡರುಗಳಾದ ವೆಂಕಟಾಚಲ ಜನದ್ವನಿ ಬಿ ವೆಂಕಟೇಶ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.

ಈ ವೇಳೆ ಗ್ರಾಪಂ ಸದಸ್ಯರಾದ ರಾಜಪ್ಪ, ವರಪ್ರಸಾದ್, ಮುಖಂಡರುಗಳಾದ ಚಿನ್ನರಾಜು, ಮಲ್ಲಣ್ಣ, ಮನು, ಅರವಿಂದ್, ಲೋಕೇಶ್ ಜತ್ತಿ, ಪ್ರವೀಣ್ ಕುಮಾರ್ ಹಾಜರಿದ್ದರು.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

3 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

4 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

4 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

5 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

5 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

5 hours ago