ಹನೂರು : ತಾಲ್ಲೂಕಿನ ಚಂಗವಾಡಿ ಗ್ರಾಮದ ನಾಯಕ ಜನಾಂಗದ ಯುವ ಮುಖಂಡರುಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಜಿಲ್ಲಾ ಒಬಿಸಿ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಇದೇ ಸಂದರ್ಭದಲ್ಲಿ ಯುವ ಮುಖಂಡ ಮಣಿ ಕಂಠ ಮಾತನಾಡಿ ಈ ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭ್ರಷ್ಟಾಚಾರ ಮುಕ್ತ ಆಡಳಿತ, ಹಾಗೂ ರಾಜ್ಯದಲ್ಲಿ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ದೀನ ದಲಿತರ ಅಲ್ಪಸಂಖ್ಯಾತರ ಏಳಿಗೆಗೆ ಸದಾ ಶ್ರಮಿಸುತ್ತಿದ್ದಾರೆ. ಇದೇ ನಿಟ್ಟಿನಲ್ಲಿ ಜನ ಧ್ವನಿ ಬಿ ವೆಂಕಟೇಶ್ ಅವರು ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಋಣ ಸಂದಾಯ ಕಣ್ಣಿನ ಶಿಬಿರ, ಆರೋಗ್ಯ ಶಿಬಿರ, ಕುಡಿಯುವ ನೀರು, ಪಡಿತರ ಪೂರೈಕೆ ಸೇರಿದಂತೆ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿ ಕೊಂಡಿರುವುದರಿಂದ ಇವರ ಕಾರ್ಯವೈಖರಿಯನ್ನು ಮೆಚ್ಚಿ ಪಕ್ಷ ಸೇರ್ಪಡೆಗೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಬಿಜೆಪಿ ಸಂಘಟನೆಗೆ ಒತ್ತು ನೀಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹತ್ತಕ್ಕೂ ಹೆಚ್ಚು ಯುವ ಮುಖಂಡರುಗಳು ಬಿಜೆಪಿ ಸೇರ್ಪಡೆಗೊಂಡರು.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…