ಜಿಲ್ಲೆಗಳು

30ರಂದು ಅಮಿತ್ ಶಾ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಡಿ.30ರಂದು ನಗರದಲ್ಲಿ ಜನಸಂಕಲ್ಪಯಾತ್ರೆ ಮತ್ತು ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಎಂಟತ್ತು ದಿನಗಳ ಹಿಂದೆ ಮದ್ದೂರು ಮತ್ತು ಪಾಂಡವಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮೊದಲ ಹಂತದ ಜನಸಂಕಲ್ಪ ಯಾತ್ರೆ ನಡೆದಿತ್ತು. ಇದೀಗ 2ನೇ ಹಂತದ ಯಾತ್ರೆಗೆ ಅಮಿತ್ ಶಾ ಅವರೇ ಆಗಮಿಸುತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.

ನಗರದ ವಿಶ್ವವಿದ್ಯಾನಿಲಯದ ಆವರಣದಲ್ಲಿ ಅಂದು ಮಧ್ಯಾಹ್ನ 1 ಗಂಟೆಗೆ ಆರಂಭಗೊಳ್ಳಲಿರುವ ಸಮಾವೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲು, ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ ಸೇರಿದಂತೆ ಸಂಪುಟದ ಹಲವು ಸಚಿವರು ಆಗಮಿಸುವರು ಎಂದು ತಿಳಿಸಿದರು.

ಒಂದು ಲಕ್ಷಕ್ಕೂ ಹೆಚ್ಚು ಮಂದಿ ಬಿಜೆಪಿ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ. ಹಳೇ ಮೈಸೂರು ಭಾಗದ ಎಲ್ಲ ಜಿಲ್ಲೆಗಳಿಂದಲೂ ಪಕ್ಷದ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸುವರು. ಯಾತ್ರೆಯನ್ನು ಯಶಸ್ವಿಗೊಳಿಸಲು ಬಿಜೆಪಿ ವಿವಿಧ ಮೋರ್ಚಾಗಳು, ಮಂಡಲಗಳ ಪದಾಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.
ಜನಸಂಕಲ್ಪ ಯಾತ್ರೆಯ  ಜತೆಗೆ ಮದ್ದೂರು ತಾಲ್ಲೂಕು ಗೆಜ್ಜಲಗೆರೆ ಮನ್‌ಮುಲ್ ಆವರಣದಲ್ಲಿ ನಿರ್ಮಿಸಿರುವ ಮೆಗಾ ಡೇರಿಯನ್ನು ಕೇಂದ್ರದ ಸಹಕಾರ ಸಚಿವ ಅಮಿತ್ ಶಾ ಅವರು ಲೋಕಾರ್ಪಣೆ ಮಾಡುವರು. ಇದಕ್ಕೂ ಎಲ್ಲ ತಯಾರಿ ನಡೆಯುತ್ತಿದೆ ಎಂದು ಹೇಳಿದರು

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

2 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

2 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

2 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago