ಹನೂರು: ಮಲೆಮಹದೇಶ್ವರ ಬೆಟ್ಟದ ವಿಷಜಂತು ನಿವಾರಕನಿಗೆ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ. ವೆಂಕಟೇಶ್ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ಮಲೆ ಮಾದೇಶ್ವರ ಬೆಟ್ಟದ ಕಾಡು ಹೊಲದ ನಿವಾಸಿ ಪುಟ್ಟ ತಂಬಡಿ ರವರು ಕಳೆದ 40 ವರ್ಷಗಳಿಂದ ವಿಷಜಂತುಗಳ ಕಡಿತಕ್ಕೆ ಉಚಿತ ಔಷಧ, ರೋಗಿಗಳಿಗೆ ಹೊಟ್ಟೆ ತುಂಬಾ ಊಟ ಹಾಕಿಸುತ್ತಿದ್ದರು. ಇದುವರೆಗೂ 270 ಮಂದಿಗೆ ಹಾವು ಚೇಳಿನ ಕಡಿತಕ್ಕೆ ಉಚಿತ ಚಿಕಿತ್ಸೆ ಕೊಟ್ಟಿದ್ದು ಎಲ್ಲರೂ ಗುಣಮುಖರಾಗಿ ತೆರಳಿದ್ದಾರೆ. ಇವರು ಅಗತ್ಯ ನೆರವಿಗೆ ಮೊರೆ ಇಟ್ಟಿದ್ದರು.
ಈ ಸಂಬಂಧ, ಆಗಸ್ಟ್ 13ರಂದು ಆಂದೋಲನ ಪತ್ರಿಕೆಯಲ್ಲಿ “ವಿಷಜಂತು ನಿವಾರಕನಿಗೆ ಬೇಕಿದೆ ನೆರವು ಎಂಬ” ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು.
ಆಂದೋಲನ ಪತ್ರಿಕಾ ವರದಿಗೆ ಸ್ಪಂದಿಸಿದ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ವೆಂಕಟೇಶ್ ಅವರು ಮಲೆಮಹದೇಶ್ವರ ಬೆಟ್ಟದ ಪುಟ್ಟ ತಂಬಡಿ ರವರಿಗೆ 50 ಸಾವಿರ ಮೌಲ್ಯದ ಎರಡು ಮಂಚ, ಎರಡು ಹಾಸಿಗೆ 10 ಚೇರ್, ನೆಲಕ್ಕೆ ಟೈಲ್ಸ್ ಗಳನ್ನು ಕೊಡಿಸುವ ಮೂಲಕ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಮನೆಮಾತಾಗಿದ್ದಾರೆ.
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು :…
ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ…
ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…
ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…
ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…
ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು…