ಜಿಲ್ಲೆಗಳು

ವಿಷಜಂತು ನಿವಾರಕನ ನೆರವಿಗೆ ನಿಂತ ಜನಧ್ವನಿ ಬಿ.ವೆಂಕಟೇಶ್

ಹನೂರು: ಮಲೆಮಹದೇಶ್ವರ ಬೆಟ್ಟದ ವಿಷಜಂತು ನಿವಾರಕನಿಗೆ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ. ವೆಂಕಟೇಶ್ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ.

ಮಲೆ ಮಾದೇಶ್ವರ ಬೆಟ್ಟದ ಕಾಡು ಹೊಲದ ನಿವಾಸಿ ಪುಟ್ಟ ತಂಬಡಿ ರವರು ಕಳೆದ 40 ವರ್ಷಗಳಿಂದ ವಿಷಜಂತುಗಳ ಕಡಿತಕ್ಕೆ ಉಚಿತ ಔಷಧ, ರೋಗಿಗಳಿಗೆ ಹೊಟ್ಟೆ ತುಂಬಾ ಊಟ ಹಾಕಿಸುತ್ತಿದ್ದರು. ಇದುವರೆಗೂ 270 ಮಂದಿಗೆ ಹಾವು ಚೇಳಿನ ಕಡಿತಕ್ಕೆ ಉಚಿತ ಚಿಕಿತ್ಸೆ ಕೊಟ್ಟಿದ್ದು ಎಲ್ಲರೂ ಗುಣಮುಖರಾಗಿ ತೆರಳಿದ್ದಾರೆ.  ಇವರು ಅಗತ್ಯ ನೆರವಿಗೆ ಮೊರೆ ಇಟ್ಟಿದ್ದರು.

ಈ ಸಂಬಂಧ, ಆಗಸ್ಟ್ 13ರಂದು ಆಂದೋಲನ ಪತ್ರಿಕೆಯಲ್ಲಿ “ವಿಷಜಂತು ನಿವಾರಕನಿಗೆ ಬೇಕಿದೆ ನೆರವು ಎಂಬ” ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು.

ಆಂದೋಲನ ಪತ್ರಿಕಾ ವರದಿಗೆ ಸ್ಪಂದಿಸಿದ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ವೆಂಕಟೇಶ್ ಅವರು ಮಲೆಮಹದೇಶ್ವರ ಬೆಟ್ಟದ ಪುಟ್ಟ ತಂಬಡಿ ರವರಿಗೆ  50 ಸಾವಿರ ಮೌಲ್ಯದ ಎರಡು ಮಂಚ, ಎರಡು ಹಾಸಿಗೆ  10 ಚೇರ್, ನೆಲಕ್ಕೆ ಟೈಲ್ಸ್ ಗಳನ್ನು ಕೊಡಿಸುವ ಮೂಲಕ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಮನೆಮಾತಾಗಿದ್ದಾರೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago