ಹನೂರು: ಮಲೆಮಹದೇಶ್ವರ ಬೆಟ್ಟದ ವಿಷಜಂತು ನಿವಾರಕನಿಗೆ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ. ವೆಂಕಟೇಶ್ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ಮಲೆ ಮಾದೇಶ್ವರ ಬೆಟ್ಟದ ಕಾಡು ಹೊಲದ ನಿವಾಸಿ ಪುಟ್ಟ ತಂಬಡಿ ರವರು ಕಳೆದ 40 ವರ್ಷಗಳಿಂದ ವಿಷಜಂತುಗಳ ಕಡಿತಕ್ಕೆ ಉಚಿತ ಔಷಧ, ರೋಗಿಗಳಿಗೆ ಹೊಟ್ಟೆ ತುಂಬಾ ಊಟ ಹಾಕಿಸುತ್ತಿದ್ದರು. ಇದುವರೆಗೂ 270 ಮಂದಿಗೆ ಹಾವು ಚೇಳಿನ ಕಡಿತಕ್ಕೆ ಉಚಿತ ಚಿಕಿತ್ಸೆ ಕೊಟ್ಟಿದ್ದು ಎಲ್ಲರೂ ಗುಣಮುಖರಾಗಿ ತೆರಳಿದ್ದಾರೆ. ಇವರು ಅಗತ್ಯ ನೆರವಿಗೆ ಮೊರೆ ಇಟ್ಟಿದ್ದರು.
ಈ ಸಂಬಂಧ, ಆಗಸ್ಟ್ 13ರಂದು ಆಂದೋಲನ ಪತ್ರಿಕೆಯಲ್ಲಿ “ವಿಷಜಂತು ನಿವಾರಕನಿಗೆ ಬೇಕಿದೆ ನೆರವು ಎಂಬ” ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು.
ಆಂದೋಲನ ಪತ್ರಿಕಾ ವರದಿಗೆ ಸ್ಪಂದಿಸಿದ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ವೆಂಕಟೇಶ್ ಅವರು ಮಲೆಮಹದೇಶ್ವರ ಬೆಟ್ಟದ ಪುಟ್ಟ ತಂಬಡಿ ರವರಿಗೆ 50 ಸಾವಿರ ಮೌಲ್ಯದ ಎರಡು ಮಂಚ, ಎರಡು ಹಾಸಿಗೆ 10 ಚೇರ್, ನೆಲಕ್ಕೆ ಟೈಲ್ಸ್ ಗಳನ್ನು ಕೊಡಿಸುವ ಮೂಲಕ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಮನೆಮಾತಾಗಿದ್ದಾರೆ.
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…