ಹನೂರು: ಮಲೆಮಹದೇಶ್ವರ ಬೆಟ್ಟದ ವಿಷಜಂತು ನಿವಾರಕನಿಗೆ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ. ವೆಂಕಟೇಶ್ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ಮಲೆ ಮಾದೇಶ್ವರ ಬೆಟ್ಟದ ಕಾಡು ಹೊಲದ ನಿವಾಸಿ ಪುಟ್ಟ ತಂಬಡಿ ರವರು ಕಳೆದ 40 ವರ್ಷಗಳಿಂದ ವಿಷಜಂತುಗಳ ಕಡಿತಕ್ಕೆ ಉಚಿತ ಔಷಧ, ರೋಗಿಗಳಿಗೆ ಹೊಟ್ಟೆ ತುಂಬಾ ಊಟ ಹಾಕಿಸುತ್ತಿದ್ದರು. ಇದುವರೆಗೂ 270 ಮಂದಿಗೆ ಹಾವು ಚೇಳಿನ ಕಡಿತಕ್ಕೆ ಉಚಿತ ಚಿಕಿತ್ಸೆ ಕೊಟ್ಟಿದ್ದು ಎಲ್ಲರೂ ಗುಣಮುಖರಾಗಿ ತೆರಳಿದ್ದಾರೆ. ಇವರು ಅಗತ್ಯ ನೆರವಿಗೆ ಮೊರೆ ಇಟ್ಟಿದ್ದರು.
ಈ ಸಂಬಂಧ, ಆಗಸ್ಟ್ 13ರಂದು ಆಂದೋಲನ ಪತ್ರಿಕೆಯಲ್ಲಿ “ವಿಷಜಂತು ನಿವಾರಕನಿಗೆ ಬೇಕಿದೆ ನೆರವು ಎಂಬ” ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು.
ಆಂದೋಲನ ಪತ್ರಿಕಾ ವರದಿಗೆ ಸ್ಪಂದಿಸಿದ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ವೆಂಕಟೇಶ್ ಅವರು ಮಲೆಮಹದೇಶ್ವರ ಬೆಟ್ಟದ ಪುಟ್ಟ ತಂಬಡಿ ರವರಿಗೆ 50 ಸಾವಿರ ಮೌಲ್ಯದ ಎರಡು ಮಂಚ, ಎರಡು ಹಾಸಿಗೆ 10 ಚೇರ್, ನೆಲಕ್ಕೆ ಟೈಲ್ಸ್ ಗಳನ್ನು ಕೊಡಿಸುವ ಮೂಲಕ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಮನೆಮಾತಾಗಿದ್ದಾರೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…