ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾತುರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗವನ್ನು ಕಣ್ತುಂಬಿಕೊಂಡಿದ್ದು 15 ಸೆಕೆಂಡ್ ಮಾತ್ರ !
ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟದ ಕತ್ತಿಗೆ ಪೂಜೆ ಸಲ್ಲಿಸಿದ ಕೂಡಲೇ ಕಾಳಗ ಪ್ರಾರಂಭಗೊಂಡಿತು.
ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಜ್ ಜಟ್ಟಿ ದುರಾಳಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿಯ ತಲೆಭಾಗಕ್ಕೆ ವಜ್ರನಖ ದಿಂದ ಹೊಡೆದು ಕ್ಷಣಾರ್ಧದಲ್ಲೇ ರಕ್ತ ಚಿಮ್ಮಿಸುವ ಮೂಲಕ ಮುಕ್ತಾಯಗೊಂಡಿತು.
ಈ ಬಾರಿ ಮೈಸೂರಿನ ಉಸ್ತಾದ್ ಟೈಗರ್ ಬಾಲಾಜಿ ಅವರ ಮಗ ಮೈಸೂರಿನ ವಿಷ್ಣು ಜಟ್ಟಿ ಮತ್ತು ಬೆಂಗಳೂರಿನ ಉಸ್ತಾದ್ ಕೃಷ್ಣ ಶೆಟ್ಟಿ ಶಿಷ್ಯ ತಾರಾನಾಥ ಜೆಟ್ಟಿ ನಡುವೆ ಕಾಳಗ ನಡೆಯಿತು. ಎರಡನೇ ಜೋಡಿಯಾಗಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿ ಮತ್ತು ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಹರ ಜಟ್ಟಿ ನಡುವೆ ಕಾಳಗ ಜರುಗಿತು.ಇದಕ್ಕೂ ಮೊದಲು ನಿಂಬುಜಾದೇವಿ ದೇವಸ್ಥಾನದ ಬಳಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಜಟ್ಟಿಗಳನ್ನು ಕರೆ ತರಲಾಯಿತು. ಜಟ್ಟಿ ಕಾಳಗ ನಡೆಯುವಾಗ ರಾಜಮನೆತನದ ಕುಟುಂಬದವರು ಹಾಜರಿದ್ದು ವೀಕ್ಷಿಸಿದರು.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…