ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾತುರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗವನ್ನು ಕಣ್ತುಂಬಿಕೊಂಡಿದ್ದು 15 ಸೆಕೆಂಡ್ ಮಾತ್ರ !
ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟದ ಕತ್ತಿಗೆ ಪೂಜೆ ಸಲ್ಲಿಸಿದ ಕೂಡಲೇ ಕಾಳಗ ಪ್ರಾರಂಭಗೊಂಡಿತು.
ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಜ್ ಜಟ್ಟಿ ದುರಾಳಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿಯ ತಲೆಭಾಗಕ್ಕೆ ವಜ್ರನಖ ದಿಂದ ಹೊಡೆದು ಕ್ಷಣಾರ್ಧದಲ್ಲೇ ರಕ್ತ ಚಿಮ್ಮಿಸುವ ಮೂಲಕ ಮುಕ್ತಾಯಗೊಂಡಿತು.
ಈ ಬಾರಿ ಮೈಸೂರಿನ ಉಸ್ತಾದ್ ಟೈಗರ್ ಬಾಲಾಜಿ ಅವರ ಮಗ ಮೈಸೂರಿನ ವಿಷ್ಣು ಜಟ್ಟಿ ಮತ್ತು ಬೆಂಗಳೂರಿನ ಉಸ್ತಾದ್ ಕೃಷ್ಣ ಶೆಟ್ಟಿ ಶಿಷ್ಯ ತಾರಾನಾಥ ಜೆಟ್ಟಿ ನಡುವೆ ಕಾಳಗ ನಡೆಯಿತು. ಎರಡನೇ ಜೋಡಿಯಾಗಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿ ಮತ್ತು ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಹರ ಜಟ್ಟಿ ನಡುವೆ ಕಾಳಗ ಜರುಗಿತು.ಇದಕ್ಕೂ ಮೊದಲು ನಿಂಬುಜಾದೇವಿ ದೇವಸ್ಥಾನದ ಬಳಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಜಟ್ಟಿಗಳನ್ನು ಕರೆ ತರಲಾಯಿತು. ಜಟ್ಟಿ ಕಾಳಗ ನಡೆಯುವಾಗ ರಾಜಮನೆತನದ ಕುಟುಂಬದವರು ಹಾಜರಿದ್ದು ವೀಕ್ಷಿಸಿದರು.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ…