ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾತುರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗವನ್ನು ಕಣ್ತುಂಬಿಕೊಂಡಿದ್ದು 15 ಸೆಕೆಂಡ್ ಮಾತ್ರ !
ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟದ ಕತ್ತಿಗೆ ಪೂಜೆ ಸಲ್ಲಿಸಿದ ಕೂಡಲೇ ಕಾಳಗ ಪ್ರಾರಂಭಗೊಂಡಿತು.
ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಜ್ ಜಟ್ಟಿ ದುರಾಳಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿಯ ತಲೆಭಾಗಕ್ಕೆ ವಜ್ರನಖ ದಿಂದ ಹೊಡೆದು ಕ್ಷಣಾರ್ಧದಲ್ಲೇ ರಕ್ತ ಚಿಮ್ಮಿಸುವ ಮೂಲಕ ಮುಕ್ತಾಯಗೊಂಡಿತು.
ಈ ಬಾರಿ ಮೈಸೂರಿನ ಉಸ್ತಾದ್ ಟೈಗರ್ ಬಾಲಾಜಿ ಅವರ ಮಗ ಮೈಸೂರಿನ ವಿಷ್ಣು ಜಟ್ಟಿ ಮತ್ತು ಬೆಂಗಳೂರಿನ ಉಸ್ತಾದ್ ಕೃಷ್ಣ ಶೆಟ್ಟಿ ಶಿಷ್ಯ ತಾರಾನಾಥ ಜೆಟ್ಟಿ ನಡುವೆ ಕಾಳಗ ನಡೆಯಿತು. ಎರಡನೇ ಜೋಡಿಯಾಗಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿ ಮತ್ತು ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಹರ ಜಟ್ಟಿ ನಡುವೆ ಕಾಳಗ ಜರುಗಿತು.ಇದಕ್ಕೂ ಮೊದಲು ನಿಂಬುಜಾದೇವಿ ದೇವಸ್ಥಾನದ ಬಳಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಜಟ್ಟಿಗಳನ್ನು ಕರೆ ತರಲಾಯಿತು. ಜಟ್ಟಿ ಕಾಳಗ ನಡೆಯುವಾಗ ರಾಜಮನೆತನದ ಕುಟುಂಬದವರು ಹಾಜರಿದ್ದು ವೀಕ್ಷಿಸಿದರು.
ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…