ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾತುರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗವನ್ನು ಕಣ್ತುಂಬಿಕೊಂಡಿದ್ದು 15 ಸೆಕೆಂಡ್ ಮಾತ್ರ !
ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟದ ಕತ್ತಿಗೆ ಪೂಜೆ ಸಲ್ಲಿಸಿದ ಕೂಡಲೇ ಕಾಳಗ ಪ್ರಾರಂಭಗೊಂಡಿತು.
ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಜ್ ಜಟ್ಟಿ ದುರಾಳಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿಯ ತಲೆಭಾಗಕ್ಕೆ ವಜ್ರನಖ ದಿಂದ ಹೊಡೆದು ಕ್ಷಣಾರ್ಧದಲ್ಲೇ ರಕ್ತ ಚಿಮ್ಮಿಸುವ ಮೂಲಕ ಮುಕ್ತಾಯಗೊಂಡಿತು.
ಈ ಬಾರಿ ಮೈಸೂರಿನ ಉಸ್ತಾದ್ ಟೈಗರ್ ಬಾಲಾಜಿ ಅವರ ಮಗ ಮೈಸೂರಿನ ವಿಷ್ಣು ಜಟ್ಟಿ ಮತ್ತು ಬೆಂಗಳೂರಿನ ಉಸ್ತಾದ್ ಕೃಷ್ಣ ಶೆಟ್ಟಿ ಶಿಷ್ಯ ತಾರಾನಾಥ ಜೆಟ್ಟಿ ನಡುವೆ ಕಾಳಗ ನಡೆಯಿತು. ಎರಡನೇ ಜೋಡಿಯಾಗಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿ ಮತ್ತು ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಹರ ಜಟ್ಟಿ ನಡುವೆ ಕಾಳಗ ಜರುಗಿತು.ಇದಕ್ಕೂ ಮೊದಲು ನಿಂಬುಜಾದೇವಿ ದೇವಸ್ಥಾನದ ಬಳಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಜಟ್ಟಿಗಳನ್ನು ಕರೆ ತರಲಾಯಿತು. ಜಟ್ಟಿ ಕಾಳಗ ನಡೆಯುವಾಗ ರಾಜಮನೆತನದ ಕುಟುಂಬದವರು ಹಾಜರಿದ್ದು ವೀಕ್ಷಿಸಿದರು.
ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…
ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…
ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…