ಜಿಲ್ಲೆಗಳು

ಸೆಸ್ಕ್‌ನವರ ನಿರ್ಲಕ್ಷ್ಯವಿದ್ದರೆ ಕ್ರಮ: ಎಂಡಿ ಜಯವಿಭಯಸ್ವಾಮಿ

ಮೈಸೂರು:ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಪರಿಹಾರ ನೀಡಲು ಸೂಚಿಸಲಾಗಿದ್ದು. ವಿದ್ಯುತ್ ಮಾರ್ಗ ನಿರ್ವಹಣೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಲ್ಲೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ( ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ ಜಯವಿಭಯಸ್ವಾಮಿ ತಿಳಿಸಿದ್ದಾರೆ.

ಬೆಳಗಿನ ಜಾವ ೪ರಿಂದ ಬೆಳಗ್ಗೆ ೧೧ರವರೆಗೆ ಪಂಪ್‌ಸೆಟ್‌ಗೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಈ ವೇಳೆ ರೈತರು ಸಹಜವಾಗಿ ಜಮೀನು ಕಡೆ ಬರುತ್ತಾರೆ. ಈ ರೀತಿ ಬಂದಾಗಲೇ ತಿ.ನರಸೀಪುರ ತಾಲ್ಲೂಕಿನ ನಿಲಸೋಗೆಯಲ್ಲಿ ದುರಂತ ನಡೆದಿದೆ. ಇದು ಎಲ್‌ಟಿ ಮಾರ್ಗವಾಗಿರುವುದರಿಂದ ಅಷ್ಟಾಗಿ ವಿದ್ಯುತ್ ಪ್ರವಾಹ ಇರುವುದಿಲ್ಲ. ಆದರೂ ದುರಂತ ಸಂಭವಿಸಿರುವುದು ವಿಷಾದನೀಯ.ಎಲೆಕ್ಟ್ರಿಕಲ್ ವಿಭಾಗದವರು ತನಿಖೆ ನಡೆಸಿ ನೀಡುವ ವರದಿ ಆಧರಿಸಿ ನಮ್ಮವರ ತಪ್ಪಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ವರ್ಷಕ್ಕೆ ಸೆಸ್ಕ್ ವ್ಯಾಪ್ತಿಯಲ್ಲೇ ೭೦ರಿಂದ ೮೦ ಮಂದಿ ವಿದ್ಯುತ್ ಶಾಕ್‌ನಿಂದ ಮೃತಪಡುತ್ತಿದ್ದಾರೆ. ಗಾಯಗೊಳ್ಳುವ ಪ್ರಕರಣಗಳ ಸಂಖ್ಯೆ ೧೫೦ಕ್ಕೂ ಹೆಚ್ಚಿದೆ. ಮುನ್ನೆಚ್ಚರಿಕೆ ವಹಿಸಿ ಜಾಗೃತಿ ಮೂಡಿಸಿದರೂ ಘಟನೆಗಳು ನಡೆಯುತ್ತಿವೆ. ಆದರೆ ಸೆಸ್ಕ್‌ನ ೧೭ ವರ್ಷದ ಇತಿಹಾಸದಲ್ಲಿ ಈವರೆಗೂ ಒಂದೇ ಕಡೆ ವಿದ್ಯುತ್ ದುರಂತಕ್ಕೆ ಮೂವರು ಮೃತಪಟ್ಟಿದ್ದು ಇದೇ ಮೊದಲು. ಸೆಸ್ಕ್ ಇದನ್ನು ಗಂಭೀರವಾಗಿ ಸ್ವೀಕರಿಸಿದೆ. ೫ ಲಕ್ಷ ರೂ.ವರೆಗೂ ಪರಿಹಾರ ನೀಡಲು ನಮ್ಮ ವ್ಯಾಪ್ತಿಯಲ್ಲಿ ಅವಕಾಶವಿದೆ. ಹೆಚ್ಚಿನ ಪರಿಹಾರ ನೀಡಬೇಕೆಂದರೆ ಮಂಡಳಿ ಸಭೆಯಲ್ಲಿ ತೀರ್ಮಾನ ಆಗಬೇಕಾಗುತ್ತದೆ. ಈ ಕುರಿತು ಮಂಡಳಿ ಸಭೆಯಲ್ಲೂ ಚರ್ಚಿಸಿ ಹೆಚ್ಚಿನ ಪರಿಹಾರ ಕೊಡಿಸಲು ಪ್ರಯತ್ನಿಸುತ್ತೇವೆ. ಕೆಲವರು ನ್ಯಾಯಾಲಯಕ್ಕೆ ಹೋಗಿ ಪರಿಹಾರ ಹೆಚ್ಚಿಸಿಕೊಂಡ ಪ್ರಕರಣಗಳೂ ಇದ್ದು, ಅದನ್ನು ಸೆಸ್ಕ್ ಮಾನ್ಯ ಮಾಡಿದೆ ಎಂದು ತಿಳಿಸಿದ್ದಾರೆ.

andolanait

Recent Posts

ರಾಜ್ಯ ರಾಜಕೀಯಕ್ಕೆ ಎಚ್‌ಡಿಕೆ ಎಂಟ್ರಿ?: ಸಂಕ್ರಾಂತಿ ಅಂದೇ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು ಎಂದು ತೀರ್ಮಾನ ಮಾಡುವುದು ರಾಜ್ಯದ…

3 mins ago

ದರ್ಶನ್‌ ನೆನೆದು ಫಾರ್ಮ್‌ ಹೌಸ್‌ನಲ್ಲಿ ಸಂಕ್ರಾಂತಿ ಆಚರಿಸಿದ  ವಿಜಯಲಕ್ಷ್ಮಿ: ವಿಡಿಯೋ ನೋಡಿ ಅಭಿಮಾನಿಗಳು ಭಾವುಕ

ಮೈಸೂರು : ನಟ ದರ್ಶನ್‌ ಕುಟುಂಬ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಕರ ಸಂಕ್ರಾಂತಿಯನ್ನು ತಮ್ಮ ಫಾರ್ಮ್‌ ಹೌಸ್‌ನಲ್ಲಿ…

25 mins ago

ಅಕ್ಕಿ ತುಂಬಿದ ಲಾರಿ ಪಲ್ಟಿ : ಇಬ್ಬರ ಸಾವು

ಮಳವಳ್ಳಿ : ತಾಲೂಕಿನ ಕಿರುಗಾವಲು ಸಮೀಪ ಅಕ್ಕಿ ತುಂಬಿದ ಲಾರಿ ಒಂದು ಪಲ್ಟಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ…

53 mins ago

ಸಂಕ್ರಾಂತಿ ಸಂಭ್ರಮ | ನಾಡಿನ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ, ಖರ್ಗೆ, ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ ಮನೆ ಮಾಡಿದೆ. ಹೊಸ ವರ್ಷದ ಮೊದಲ ಹಬ್ಬಕ್ಕೆ ಪ್ರಧಾನಿ ನರೇಂದ್ರ…

5 hours ago

ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಹೃದಯಘಾತದಿಂದ ಸಾವು

ರಾಯಚೂರು : ದೇವದುರ್ಗ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (50) ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ 3:30ರ…

5 hours ago

ಓದುಗರ ಪತ್ರ | ಸುಗ್ಗಿಯ ಹಬ್ಬ ಸಂಕ್ರಾಂತಿ

ಮನೆ ಮಂದಿ ಮಕ್ಕಳು ಕೂಡಿ ಕಣ ಹೊಕ್ಕಿ, ಹೊಲ ಗದ್ದೆಯೆಲ್ಲಾ ಬೆಳೆದ ಬೆಳೆ ಕೈಗೆ ಬಂದೈತಿ ನಗುವಿಂದ ಮಿಂದು ಸುಗ್ಗಿಯ…

5 hours ago