ಮೈಸೂರು:ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಪರಿಹಾರ ನೀಡಲು ಸೂಚಿಸಲಾಗಿದ್ದು. ವಿದ್ಯುತ್ ಮಾರ್ಗ ನಿರ್ವಹಣೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಲ್ಲೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ( ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ ಜಯವಿಭಯಸ್ವಾಮಿ ತಿಳಿಸಿದ್ದಾರೆ.
ಬೆಳಗಿನ ಜಾವ ೪ರಿಂದ ಬೆಳಗ್ಗೆ ೧೧ರವರೆಗೆ ಪಂಪ್ಸೆಟ್ಗೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಈ ವೇಳೆ ರೈತರು ಸಹಜವಾಗಿ ಜಮೀನು ಕಡೆ ಬರುತ್ತಾರೆ. ಈ ರೀತಿ ಬಂದಾಗಲೇ ತಿ.ನರಸೀಪುರ ತಾಲ್ಲೂಕಿನ ನಿಲಸೋಗೆಯಲ್ಲಿ ದುರಂತ ನಡೆದಿದೆ. ಇದು ಎಲ್ಟಿ ಮಾರ್ಗವಾಗಿರುವುದರಿಂದ ಅಷ್ಟಾಗಿ ವಿದ್ಯುತ್ ಪ್ರವಾಹ ಇರುವುದಿಲ್ಲ. ಆದರೂ ದುರಂತ ಸಂಭವಿಸಿರುವುದು ವಿಷಾದನೀಯ.ಎಲೆಕ್ಟ್ರಿಕಲ್ ವಿಭಾಗದವರು ತನಿಖೆ ನಡೆಸಿ ನೀಡುವ ವರದಿ ಆಧರಿಸಿ ನಮ್ಮವರ ತಪ್ಪಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ವರ್ಷಕ್ಕೆ ಸೆಸ್ಕ್ ವ್ಯಾಪ್ತಿಯಲ್ಲೇ ೭೦ರಿಂದ ೮೦ ಮಂದಿ ವಿದ್ಯುತ್ ಶಾಕ್ನಿಂದ ಮೃತಪಡುತ್ತಿದ್ದಾರೆ. ಗಾಯಗೊಳ್ಳುವ ಪ್ರಕರಣಗಳ ಸಂಖ್ಯೆ ೧೫೦ಕ್ಕೂ ಹೆಚ್ಚಿದೆ. ಮುನ್ನೆಚ್ಚರಿಕೆ ವಹಿಸಿ ಜಾಗೃತಿ ಮೂಡಿಸಿದರೂ ಘಟನೆಗಳು ನಡೆಯುತ್ತಿವೆ. ಆದರೆ ಸೆಸ್ಕ್ನ ೧೭ ವರ್ಷದ ಇತಿಹಾಸದಲ್ಲಿ ಈವರೆಗೂ ಒಂದೇ ಕಡೆ ವಿದ್ಯುತ್ ದುರಂತಕ್ಕೆ ಮೂವರು ಮೃತಪಟ್ಟಿದ್ದು ಇದೇ ಮೊದಲು. ಸೆಸ್ಕ್ ಇದನ್ನು ಗಂಭೀರವಾಗಿ ಸ್ವೀಕರಿಸಿದೆ. ೫ ಲಕ್ಷ ರೂ.ವರೆಗೂ ಪರಿಹಾರ ನೀಡಲು ನಮ್ಮ ವ್ಯಾಪ್ತಿಯಲ್ಲಿ ಅವಕಾಶವಿದೆ. ಹೆಚ್ಚಿನ ಪರಿಹಾರ ನೀಡಬೇಕೆಂದರೆ ಮಂಡಳಿ ಸಭೆಯಲ್ಲಿ ತೀರ್ಮಾನ ಆಗಬೇಕಾಗುತ್ತದೆ. ಈ ಕುರಿತು ಮಂಡಳಿ ಸಭೆಯಲ್ಲೂ ಚರ್ಚಿಸಿ ಹೆಚ್ಚಿನ ಪರಿಹಾರ ಕೊಡಿಸಲು ಪ್ರಯತ್ನಿಸುತ್ತೇವೆ. ಕೆಲವರು ನ್ಯಾಯಾಲಯಕ್ಕೆ ಹೋಗಿ ಪರಿಹಾರ ಹೆಚ್ಚಿಸಿಕೊಂಡ ಪ್ರಕರಣಗಳೂ ಇದ್ದು, ಅದನ್ನು ಸೆಸ್ಕ್ ಮಾನ್ಯ ಮಾಡಿದೆ ಎಂದು ತಿಳಿಸಿದ್ದಾರೆ.
ಗುವಹಾಟಿ : ಆರಂಭದಲ್ಲಿ ಬೌಲರ್ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…