ಜಿಲ್ಲೆಗಳು

ಸೆಸ್ಕ್‌ನವರ ನಿರ್ಲಕ್ಷ್ಯವಿದ್ದರೆ ಕ್ರಮ: ಎಂಡಿ ಜಯವಿಭಯಸ್ವಾಮಿ

ಮೈಸೂರು:ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಪರಿಹಾರ ನೀಡಲು ಸೂಚಿಸಲಾಗಿದ್ದು. ವಿದ್ಯುತ್ ಮಾರ್ಗ ನಿರ್ವಹಣೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಲ್ಲೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ( ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ ಜಯವಿಭಯಸ್ವಾಮಿ ತಿಳಿಸಿದ್ದಾರೆ.

ಬೆಳಗಿನ ಜಾವ ೪ರಿಂದ ಬೆಳಗ್ಗೆ ೧೧ರವರೆಗೆ ಪಂಪ್‌ಸೆಟ್‌ಗೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಈ ವೇಳೆ ರೈತರು ಸಹಜವಾಗಿ ಜಮೀನು ಕಡೆ ಬರುತ್ತಾರೆ. ಈ ರೀತಿ ಬಂದಾಗಲೇ ತಿ.ನರಸೀಪುರ ತಾಲ್ಲೂಕಿನ ನಿಲಸೋಗೆಯಲ್ಲಿ ದುರಂತ ನಡೆದಿದೆ. ಇದು ಎಲ್‌ಟಿ ಮಾರ್ಗವಾಗಿರುವುದರಿಂದ ಅಷ್ಟಾಗಿ ವಿದ್ಯುತ್ ಪ್ರವಾಹ ಇರುವುದಿಲ್ಲ. ಆದರೂ ದುರಂತ ಸಂಭವಿಸಿರುವುದು ವಿಷಾದನೀಯ.ಎಲೆಕ್ಟ್ರಿಕಲ್ ವಿಭಾಗದವರು ತನಿಖೆ ನಡೆಸಿ ನೀಡುವ ವರದಿ ಆಧರಿಸಿ ನಮ್ಮವರ ತಪ್ಪಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ವರ್ಷಕ್ಕೆ ಸೆಸ್ಕ್ ವ್ಯಾಪ್ತಿಯಲ್ಲೇ ೭೦ರಿಂದ ೮೦ ಮಂದಿ ವಿದ್ಯುತ್ ಶಾಕ್‌ನಿಂದ ಮೃತಪಡುತ್ತಿದ್ದಾರೆ. ಗಾಯಗೊಳ್ಳುವ ಪ್ರಕರಣಗಳ ಸಂಖ್ಯೆ ೧೫೦ಕ್ಕೂ ಹೆಚ್ಚಿದೆ. ಮುನ್ನೆಚ್ಚರಿಕೆ ವಹಿಸಿ ಜಾಗೃತಿ ಮೂಡಿಸಿದರೂ ಘಟನೆಗಳು ನಡೆಯುತ್ತಿವೆ. ಆದರೆ ಸೆಸ್ಕ್‌ನ ೧೭ ವರ್ಷದ ಇತಿಹಾಸದಲ್ಲಿ ಈವರೆಗೂ ಒಂದೇ ಕಡೆ ವಿದ್ಯುತ್ ದುರಂತಕ್ಕೆ ಮೂವರು ಮೃತಪಟ್ಟಿದ್ದು ಇದೇ ಮೊದಲು. ಸೆಸ್ಕ್ ಇದನ್ನು ಗಂಭೀರವಾಗಿ ಸ್ವೀಕರಿಸಿದೆ. ೫ ಲಕ್ಷ ರೂ.ವರೆಗೂ ಪರಿಹಾರ ನೀಡಲು ನಮ್ಮ ವ್ಯಾಪ್ತಿಯಲ್ಲಿ ಅವಕಾಶವಿದೆ. ಹೆಚ್ಚಿನ ಪರಿಹಾರ ನೀಡಬೇಕೆಂದರೆ ಮಂಡಳಿ ಸಭೆಯಲ್ಲಿ ತೀರ್ಮಾನ ಆಗಬೇಕಾಗುತ್ತದೆ. ಈ ಕುರಿತು ಮಂಡಳಿ ಸಭೆಯಲ್ಲೂ ಚರ್ಚಿಸಿ ಹೆಚ್ಚಿನ ಪರಿಹಾರ ಕೊಡಿಸಲು ಪ್ರಯತ್ನಿಸುತ್ತೇವೆ. ಕೆಲವರು ನ್ಯಾಯಾಲಯಕ್ಕೆ ಹೋಗಿ ಪರಿಹಾರ ಹೆಚ್ಚಿಸಿಕೊಂಡ ಪ್ರಕರಣಗಳೂ ಇದ್ದು, ಅದನ್ನು ಸೆಸ್ಕ್ ಮಾನ್ಯ ಮಾಡಿದೆ ಎಂದು ತಿಳಿಸಿದ್ದಾರೆ.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

3 hours ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

4 hours ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

4 hours ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

4 hours ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

4 hours ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

4 hours ago