ಜಿಲ್ಲೆಗಳು

ಸೆಸ್ಕ್‌ನವರ ನಿರ್ಲಕ್ಷ್ಯವಿದ್ದರೆ ಕ್ರಮ: ಎಂಡಿ ಜಯವಿಭಯಸ್ವಾಮಿ

ಮೈಸೂರು:ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಪರಿಹಾರ ನೀಡಲು ಸೂಚಿಸಲಾಗಿದ್ದು. ವಿದ್ಯುತ್ ಮಾರ್ಗ ನಿರ್ವಹಣೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಲ್ಲೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ( ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ ಜಯವಿಭಯಸ್ವಾಮಿ ತಿಳಿಸಿದ್ದಾರೆ.

ಬೆಳಗಿನ ಜಾವ ೪ರಿಂದ ಬೆಳಗ್ಗೆ ೧೧ರವರೆಗೆ ಪಂಪ್‌ಸೆಟ್‌ಗೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಈ ವೇಳೆ ರೈತರು ಸಹಜವಾಗಿ ಜಮೀನು ಕಡೆ ಬರುತ್ತಾರೆ. ಈ ರೀತಿ ಬಂದಾಗಲೇ ತಿ.ನರಸೀಪುರ ತಾಲ್ಲೂಕಿನ ನಿಲಸೋಗೆಯಲ್ಲಿ ದುರಂತ ನಡೆದಿದೆ. ಇದು ಎಲ್‌ಟಿ ಮಾರ್ಗವಾಗಿರುವುದರಿಂದ ಅಷ್ಟಾಗಿ ವಿದ್ಯುತ್ ಪ್ರವಾಹ ಇರುವುದಿಲ್ಲ. ಆದರೂ ದುರಂತ ಸಂಭವಿಸಿರುವುದು ವಿಷಾದನೀಯ.ಎಲೆಕ್ಟ್ರಿಕಲ್ ವಿಭಾಗದವರು ತನಿಖೆ ನಡೆಸಿ ನೀಡುವ ವರದಿ ಆಧರಿಸಿ ನಮ್ಮವರ ತಪ್ಪಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ವರ್ಷಕ್ಕೆ ಸೆಸ್ಕ್ ವ್ಯಾಪ್ತಿಯಲ್ಲೇ ೭೦ರಿಂದ ೮೦ ಮಂದಿ ವಿದ್ಯುತ್ ಶಾಕ್‌ನಿಂದ ಮೃತಪಡುತ್ತಿದ್ದಾರೆ. ಗಾಯಗೊಳ್ಳುವ ಪ್ರಕರಣಗಳ ಸಂಖ್ಯೆ ೧೫೦ಕ್ಕೂ ಹೆಚ್ಚಿದೆ. ಮುನ್ನೆಚ್ಚರಿಕೆ ವಹಿಸಿ ಜಾಗೃತಿ ಮೂಡಿಸಿದರೂ ಘಟನೆಗಳು ನಡೆಯುತ್ತಿವೆ. ಆದರೆ ಸೆಸ್ಕ್‌ನ ೧೭ ವರ್ಷದ ಇತಿಹಾಸದಲ್ಲಿ ಈವರೆಗೂ ಒಂದೇ ಕಡೆ ವಿದ್ಯುತ್ ದುರಂತಕ್ಕೆ ಮೂವರು ಮೃತಪಟ್ಟಿದ್ದು ಇದೇ ಮೊದಲು. ಸೆಸ್ಕ್ ಇದನ್ನು ಗಂಭೀರವಾಗಿ ಸ್ವೀಕರಿಸಿದೆ. ೫ ಲಕ್ಷ ರೂ.ವರೆಗೂ ಪರಿಹಾರ ನೀಡಲು ನಮ್ಮ ವ್ಯಾಪ್ತಿಯಲ್ಲಿ ಅವಕಾಶವಿದೆ. ಹೆಚ್ಚಿನ ಪರಿಹಾರ ನೀಡಬೇಕೆಂದರೆ ಮಂಡಳಿ ಸಭೆಯಲ್ಲಿ ತೀರ್ಮಾನ ಆಗಬೇಕಾಗುತ್ತದೆ. ಈ ಕುರಿತು ಮಂಡಳಿ ಸಭೆಯಲ್ಲೂ ಚರ್ಚಿಸಿ ಹೆಚ್ಚಿನ ಪರಿಹಾರ ಕೊಡಿಸಲು ಪ್ರಯತ್ನಿಸುತ್ತೇವೆ. ಕೆಲವರು ನ್ಯಾಯಾಲಯಕ್ಕೆ ಹೋಗಿ ಪರಿಹಾರ ಹೆಚ್ಚಿಸಿಕೊಂಡ ಪ್ರಕರಣಗಳೂ ಇದ್ದು, ಅದನ್ನು ಸೆಸ್ಕ್ ಮಾನ್ಯ ಮಾಡಿದೆ ಎಂದು ತಿಳಿಸಿದ್ದಾರೆ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

13 mins ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

34 mins ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

37 mins ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

3 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

3 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

3 hours ago