ಮೈಸೂರು:ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಪರಿಹಾರ ನೀಡಲು ಸೂಚಿಸಲಾಗಿದ್ದು. ವಿದ್ಯುತ್ ಮಾರ್ಗ ನಿರ್ವಹಣೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಲ್ಲೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ( ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ ಜಯವಿಭಯಸ್ವಾಮಿ ತಿಳಿಸಿದ್ದಾರೆ.
ಬೆಳಗಿನ ಜಾವ ೪ರಿಂದ ಬೆಳಗ್ಗೆ ೧೧ರವರೆಗೆ ಪಂಪ್ಸೆಟ್ಗೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಈ ವೇಳೆ ರೈತರು ಸಹಜವಾಗಿ ಜಮೀನು ಕಡೆ ಬರುತ್ತಾರೆ. ಈ ರೀತಿ ಬಂದಾಗಲೇ ತಿ.ನರಸೀಪುರ ತಾಲ್ಲೂಕಿನ ನಿಲಸೋಗೆಯಲ್ಲಿ ದುರಂತ ನಡೆದಿದೆ. ಇದು ಎಲ್ಟಿ ಮಾರ್ಗವಾಗಿರುವುದರಿಂದ ಅಷ್ಟಾಗಿ ವಿದ್ಯುತ್ ಪ್ರವಾಹ ಇರುವುದಿಲ್ಲ. ಆದರೂ ದುರಂತ ಸಂಭವಿಸಿರುವುದು ವಿಷಾದನೀಯ.ಎಲೆಕ್ಟ್ರಿಕಲ್ ವಿಭಾಗದವರು ತನಿಖೆ ನಡೆಸಿ ನೀಡುವ ವರದಿ ಆಧರಿಸಿ ನಮ್ಮವರ ತಪ್ಪಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ವರ್ಷಕ್ಕೆ ಸೆಸ್ಕ್ ವ್ಯಾಪ್ತಿಯಲ್ಲೇ ೭೦ರಿಂದ ೮೦ ಮಂದಿ ವಿದ್ಯುತ್ ಶಾಕ್ನಿಂದ ಮೃತಪಡುತ್ತಿದ್ದಾರೆ. ಗಾಯಗೊಳ್ಳುವ ಪ್ರಕರಣಗಳ ಸಂಖ್ಯೆ ೧೫೦ಕ್ಕೂ ಹೆಚ್ಚಿದೆ. ಮುನ್ನೆಚ್ಚರಿಕೆ ವಹಿಸಿ ಜಾಗೃತಿ ಮೂಡಿಸಿದರೂ ಘಟನೆಗಳು ನಡೆಯುತ್ತಿವೆ. ಆದರೆ ಸೆಸ್ಕ್ನ ೧೭ ವರ್ಷದ ಇತಿಹಾಸದಲ್ಲಿ ಈವರೆಗೂ ಒಂದೇ ಕಡೆ ವಿದ್ಯುತ್ ದುರಂತಕ್ಕೆ ಮೂವರು ಮೃತಪಟ್ಟಿದ್ದು ಇದೇ ಮೊದಲು. ಸೆಸ್ಕ್ ಇದನ್ನು ಗಂಭೀರವಾಗಿ ಸ್ವೀಕರಿಸಿದೆ. ೫ ಲಕ್ಷ ರೂ.ವರೆಗೂ ಪರಿಹಾರ ನೀಡಲು ನಮ್ಮ ವ್ಯಾಪ್ತಿಯಲ್ಲಿ ಅವಕಾಶವಿದೆ. ಹೆಚ್ಚಿನ ಪರಿಹಾರ ನೀಡಬೇಕೆಂದರೆ ಮಂಡಳಿ ಸಭೆಯಲ್ಲಿ ತೀರ್ಮಾನ ಆಗಬೇಕಾಗುತ್ತದೆ. ಈ ಕುರಿತು ಮಂಡಳಿ ಸಭೆಯಲ್ಲೂ ಚರ್ಚಿಸಿ ಹೆಚ್ಚಿನ ಪರಿಹಾರ ಕೊಡಿಸಲು ಪ್ರಯತ್ನಿಸುತ್ತೇವೆ. ಕೆಲವರು ನ್ಯಾಯಾಲಯಕ್ಕೆ ಹೋಗಿ ಪರಿಹಾರ ಹೆಚ್ಚಿಸಿಕೊಂಡ ಪ್ರಕರಣಗಳೂ ಇದ್ದು, ಅದನ್ನು ಸೆಸ್ಕ್ ಮಾನ್ಯ ಮಾಡಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…