ಜಿಲ್ಲೆಗಳು

ಲೋಕಸಭಾ ಚುನಾವಣೆಗೆ ಅಷ್ಟೇ ಬಿಜೆಪಿ – ಜೆಡಿಎಸ್ ಮೈತ್ರಿ ಸೀಮಿತ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮಾತ್ರ ಜೆಡಿಎಸ್ ಹಾಗೂ ಬಿಜೆಪಿಯು ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದೆ. ಬಿಜೆಪಿಯ ತತ್ವ ಸಿದ್ಧಾಂತವೇ ಬೇರೆ, ನಮ್ಮ ತತ್ವ ಸಿದ್ಧಾಂತವೇ ಬೇರೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ನಗರದಲ್ಲಿ ಫೆ.7 ರಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆ ಹಿತದೃಷ್ಟಿಯಿಂದಷ್ಟೇ ಬಿಜೆಪಿಯೊಂದಿಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ ಹೊರತು ಬಿಜೆಪಿಯ ತತ್ವ ಸಿದ್ಧಾಂತಗಳು ಹಾಗೂ ನಮ್ಮ ಪಕ್ಷದ ಸಿದ್ಧಾಂತಗಳು ಬೇರೆ ಬೇರೆ, ಎರಡೂ ಪಕ್ಷಗಳ ಸಿದ್ದಾಂತಗಳು ಎಂದಿಗೂ ಒಂದಾಗಲು ಸಾಧ್ಯವಿಲ್ಲ ಎಂದರು.

ಜೆಡಿಎಸ್ ಜಯಪ್ರಕಾಶ್ ನಾರಾಯಣ್ ಅವರು ಕಟ್ಟಿದ ಪಕ್ಷವಾಗಿದೆ. ಅದನ್ನು ಹೆಚ್.ಡಿ.ದೇವೇಗೌಡರು ಬೆಳೆಸಿ ಉಳಿಸಿಕೊಂಡಿದ್ದು ಹೋಗಿದ್ದು ಅವರ ಹಾದಿಯಲ್ಲಿ ನಮ್ಮ ಪಕ್ಷದವರೆಲ್ಲರೂ ಸಾಗುತ್ತೇವೆ. ಅದನ್ನು ಹೊರತುಪಡಿಸಿ ನಮ್ಮ ಪಕ್ಷದ ಸಿದ್ಧಾಂತದಲ್ಲಿ ಒಂದಿಷ್ಟೂ ಬದಲಾವಣೆಯಾಗಲು ಸಾಧ್ಯವಿಲ್ಲ. ನಮ್ಮದು ನಮಗೆ, ಬಿಜೆಪಿ ಪಕ್ಷದ ಸಿದ್ಧಾಂತ ಅವರಿಗೆ ರಾಜ್ಯದಲ್ಲಿ ಕೇವಲ ಸೀಟು ಹಂಚಿಕೆಗಾಗಿ ಮಾತ್ರ ಮೈತ್ರಿ ನಡೆದಿದೆ ಎಂದು ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.

andolana

Recent Posts

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

3 mins ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

39 mins ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

3 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

5 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

5 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

5 hours ago