ಜಿಲ್ಲೆಗಳು

ಲೋಕಸಭಾ ಚುನಾವಣೆಗೆ ಅಷ್ಟೇ ಬಿಜೆಪಿ – ಜೆಡಿಎಸ್ ಮೈತ್ರಿ ಸೀಮಿತ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮಾತ್ರ ಜೆಡಿಎಸ್ ಹಾಗೂ ಬಿಜೆಪಿಯು ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದೆ. ಬಿಜೆಪಿಯ ತತ್ವ ಸಿದ್ಧಾಂತವೇ ಬೇರೆ, ನಮ್ಮ ತತ್ವ ಸಿದ್ಧಾಂತವೇ ಬೇರೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ನಗರದಲ್ಲಿ ಫೆ.7 ರಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆ ಹಿತದೃಷ್ಟಿಯಿಂದಷ್ಟೇ ಬಿಜೆಪಿಯೊಂದಿಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ ಹೊರತು ಬಿಜೆಪಿಯ ತತ್ವ ಸಿದ್ಧಾಂತಗಳು ಹಾಗೂ ನಮ್ಮ ಪಕ್ಷದ ಸಿದ್ಧಾಂತಗಳು ಬೇರೆ ಬೇರೆ, ಎರಡೂ ಪಕ್ಷಗಳ ಸಿದ್ದಾಂತಗಳು ಎಂದಿಗೂ ಒಂದಾಗಲು ಸಾಧ್ಯವಿಲ್ಲ ಎಂದರು.

ಜೆಡಿಎಸ್ ಜಯಪ್ರಕಾಶ್ ನಾರಾಯಣ್ ಅವರು ಕಟ್ಟಿದ ಪಕ್ಷವಾಗಿದೆ. ಅದನ್ನು ಹೆಚ್.ಡಿ.ದೇವೇಗೌಡರು ಬೆಳೆಸಿ ಉಳಿಸಿಕೊಂಡಿದ್ದು ಹೋಗಿದ್ದು ಅವರ ಹಾದಿಯಲ್ಲಿ ನಮ್ಮ ಪಕ್ಷದವರೆಲ್ಲರೂ ಸಾಗುತ್ತೇವೆ. ಅದನ್ನು ಹೊರತುಪಡಿಸಿ ನಮ್ಮ ಪಕ್ಷದ ಸಿದ್ಧಾಂತದಲ್ಲಿ ಒಂದಿಷ್ಟೂ ಬದಲಾವಣೆಯಾಗಲು ಸಾಧ್ಯವಿಲ್ಲ. ನಮ್ಮದು ನಮಗೆ, ಬಿಜೆಪಿ ಪಕ್ಷದ ಸಿದ್ಧಾಂತ ಅವರಿಗೆ ರಾಜ್ಯದಲ್ಲಿ ಕೇವಲ ಸೀಟು ಹಂಚಿಕೆಗಾಗಿ ಮಾತ್ರ ಮೈತ್ರಿ ನಡೆದಿದೆ ಎಂದು ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.

andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

4 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

4 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

5 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

5 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

5 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

5 hours ago