ಜಿಲ್ಲೆಗಳು

ಜೆಡಿಎಸ್‌ ಪಂಚರತ್ನ ಯಾತ್ರೆ ಪುನರಾರಂಭ

ನಂಜನಗೂಡು, ಚಾಮುಂಡಿ ಬೆಟ್ಟದಲ್ಲಿ ಎಚ್‌ ಡಿಕೆ ವಿಶೇಷ ಪೂಜೆ

ಮೈಸೂರು: ಜೆಡಿಎಸ್‌ನ ಪಂಚರತ್ನ ಯಾತ್ರೆ ಕೋಲಾರ ಜಿಲ್ಲೆಯ ಮುಳಬಾಗಲು ಪಟ್ಟಣದಿಂದ ಶುಕ್ರವಾರದಿಂದ ಮತ್ತೆ ಚಾಲನೆ ಪಡೆದಿದೆ. ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್‌. ಡಿ ಕುಮಾರಸ್ವಾಮಿ ಅವರು ನಂಜನಗೂಡಿನ ಶ್ರೀಕಂಠೇಶ್ವರ ಮತ್ತು ಮೈಸೂರಿನ ಚಾಮುಂಡೇಶ್ವರಿ ದೇಗುಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಜೆಡಿಎಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಯಾವಾಗ ಬಿಡುಗಡೆ ಮಾಡುತ್ತೀರಿ ಎಂಬ ಪ್ರಶ್ನೆಗೆ “” ನಮ್ಮ ಪಕ್ಷದಲ್ಲಿಯೇ ಒಬ್ಬರು ಜ್ಯೋತಿಷಿಗಳಿದ್ದಾರೆ. ಸನ್ಮಾನ್ಯ ರೇವಣ್ಣ ಅವರು. ಇವತ್ತು ಸಮಯ ಪ್ರಸಕ್ತವಾಗಿಲ್ಲ ಎಂದು ತಕರಾರು ತೆಗೆದಿದ್ದಾರೆ. ಈಗಾಗಲೇ 100 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಬೆಂಗಳೂರಿನಲ್ಲಿ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚಿಸಿ ಸೂಕ್ತ ಸಮಯ ನೋಡಿಕೊಂಡು ಬಿಡುಗಡೆ ಮಾಡುತ್ತೇವೆ. ದೇವೇಗೌಡರ ನೇತೃತ್ವದಲ್ಲೇ ಪಟ್ಟಿ ಬಿಡುಗಡೆಯಾಗುತ್ತದೆʼʼ ಎಂದು ತಿಳಿಸಿದರು.
ಪಂಚರತ್ನ ಯಾತ್ರೆಯನ್ನು ಮಳೆಯ ಸಮಸ್ಯೆಯಿಂದ ಮುಂದೂಡಲಾಗಿತ್ತು. ಮುಂದೆ ಯಾವುದೇ ಸಮಸ್ಯೆಯಾಗದಿರಲಿ ಎಂದು ನಂಜುಡೇಶ್ವರ ಹಾಗೂ ಚಾಮುಂಡಿ ತಾಯಿಯ ಆಶೀರ್ವಾದ ಪಡೆದಿದ್ದೇನೆ. ಇಂದಿನಿಂದ 36 ದಿನಗಳ ಕಾಲ ಮೊದಲ ಹಂತದ ಯಾತ್ರೆ ಆರಂಭವಾಗಲಿದೆ ಎಂದರು. 2018ರ ಚುನಾವಣೆಯಲ್ಲೂ ಎಚ್‌ಡಿಕೆ ಚಾಮುಂಡಿ ಬೆಟ್ಟದಿಂದಲೇ ಕುಮಾರ ಪರ್ವಕ್ಕೆ ಚಾಲನೆ ನೀಡಿದ್ದರು.

ನಾಡಿನ ಜನತೆಗೆ ತಿಳಿವಳಿಕೆ ಮೂಡಿಸಲು ಯಾತ್ರೆ ಆರಂಭಿಸಿದ್ದೇವೆ. ಪಿನಾಕಿನ ನದಿಯ ವಿಚಾರವಾಗಿ ತಕರಾರು ಆರಂಭವಾಗಿದೆ. ಕೇಂದ್ರ ಸರ್ಕಾರ ನಮ್ಮ ರಾಜ್ಯದ ಮೇಲೆ ನಿರ್ಲಕ್ಷ್ಯ ತೋರಿದೆ. ಇದರಿಂದಾಗಿ
ನೀರಾವರಿ ವಿಚಾರವಾಗಿ ತೊಂದರೆಯಾಗಿದೆ ಎಂದರು.
ಮೇಕೆದಾಟು ಯೋಜನೆಗೆ ಮೂರುವರೆ ವರ್ಷದ ಹಿಂದೆಯೇ ಡಿಪಿಆರ್ ಕಳುಹಿಸಲಾಗಿದೆ. ಕೇಂದ್ರ ಸರ್ಕಾರ ಈವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ತುಂಗಭದ್ರ, ಕೃಷ್ಣ ನೀರಾವರಿ ಯೋಜನೆಗಳನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಗೆ ಶೀಘ್ರದಲ್ಲೇ ಚಾಲನೆ ಕೊಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಬಂದಿದೆ. ಆದರೆ, ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದರು.


ಚಾಮುಂಡೇಶ್ವರಿಯಲ್ಲೇ ಸಮಾರೋಪ

ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭ ಮಾಡುತ್ತೇವೆ. ಮಾರ್ಚ್‌ನಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡುತ್ತೇವೆ.123 ಸ್ಥಾನ ಗೆಲುವಿನ ಗುರಿ ಇಟ್ಟುಕೊಂಡು ನಾವು ಹೊರಟಿದ್ದೇವೆ ಎಂದು ಹೇಳಿದರು.
ರಾಜಕಾರಣದಲ್ಲಿ ಏನೂ ಹೇಳಲಾಗದು. ಮುಂದಿನ ದಿನಗಳಲ್ಲಿ ರಾಜಕೀಯ ಸಮೀಕರಣ ಆಗಬಹುದು. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಜನತಾ ಪರಿವಾರದಿಂದ ಹೋದವರೇ ಹೆಚ್ಚು ಇದ್ದಾರೆ. ಅವರ ಮನಪರಿವರ್ತನೆಯಾಗಿ ಮತ್ತೆ ಪಕ್ಷಕ್ಕೆ ಬರಬಹುದು. ಬಂದಾಗ ಏನು ತೀರ್ಮಾನ ಮಾಡಬೇಕು ನೋಡೋಣ ಎಂದು ನುಡಿದರು.
ಖಾಸಗಿ ಕಂಪನಿ ಮುಂದಿಟ್ಟುಕೊಂಡು ಮತದಾರರ ಡೇಟಾ ಕಳವು ಆರೋಪಕ್ಕೆ ಉತ್ತರಿಸಿದ ಸಂಗ್ರಹ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿ ಮಾತನಾಡಿದ ಅವರು, ಇದರಲ್ಲಿ ಕೆಲವು ತಪ್ಪುಗಳು ಆಗಿವೆ. ಸರ್ಕಾರದ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಡೇಟಾ ಸಂಗ್ರಹ ಮಾಡುವ ಸಿಬ್ಬಂದಿಗಳು ಸರ್ಕಾರಿ ನೌಕರರು ಎಂದು ಹೇಳಿಕೊಂಡು ಮನೆಗಳಿಗೆ ಭೇಟಿ ಕೊಟ್ಟಿರುವ ಮಾಹಿತಿ ಇದೆ ಎಂದರು.
ಸರ್ಕಾರದ ನಡವಳಿಕೆ ಪ್ರತಿಯೊಬ್ಬರಿಗೂ ಸಂಶಯ ಮೂಡುತ್ತದೆ. ಇದರಿಂದ ಬಿಜೆಪಿಯವರು ದೊಡ್ಡ ಸಾಧನೆ ಮಾಡುತ್ತಾರೆ ಎಂಬ ಗಾಬರಿ ನನಗೆ ಇಲ್ಲ. ಈ ಬಾರಿ ಬಿಜೆಪಿ ಏನೇ ಮಾಡಿದರೂ ಪ್ರಯೋಜನವಾಗುವುದಿಲ್ಲ. ನಾಡಿನ ಜನರು ಬೇಸತ್ತು ಹೋಗಿದ್ದಾರೆ. ಈ ಬಾರಿ ಕುತಂತ್ರದಿಂದ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದರು.

ಪೂಜೆ ಸಲ್ಲಿಕೆ ವೇಳೆ ಮಾಜಿ ಸಚಿವರಾದ ಜಿ.ಟಿ.ದೇವೇಗೌಡ, ಬಂಡೆಪ್ಪ ಕಾಶಂಪುರ್, ಸಿ.ಎಸ್.ಪುಟ್ಟರಾಜು, ಎಂಎಲ್‌ಸಿ ಸಿಎನ್. ಮಂಜೇಗೌಡ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.


ಏನನ್ನಾದರೂ ಕಟ್ಟಲಿ, ನೆರಳು ನೀಡಲಿ..

ಮೈಸೂರಿನ ಬಸ್ ನಿಲ್ದಾಣ ವಿವಾದ ಕುರಿತು ಮಾತನಾಡಿದ ಅವರು, ನನಗೆ ಕಿರುಕುಳವಾಗುತ್ತಿದೆ ಎಂದು ಬಿಜೆಪಿ ಶಾಸಕರೇ ಕಣ್ಣೀರಿಟ್ಟರೆ ಅವರಿಗೆ ಮತ ಕೊಟ್ಟ ಜನರ ಗತಿ ಏನು?, ಗುಂಬಜ್‌ ಆದರೂ ಮಸೀದಿಯನ್ನಾದರೂ ಮಾಡಿ, ಗೋಪುರವನ್ನಾದರೂ ಮಾಡಿ. ಜನರಿಗೆ ನೆರಳು ಕೊಡಿ. ಕೆಡಹುವ ಕೆಲಸ ಮಾಡಬೇಡಿ ಎಂದು ಸಲಹೆ ನೀಡಿದರು.

andolanait

Recent Posts

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

13 mins ago

ಓದುಗರ ಪತ್ರ: ಐಪಿಎಲ್ ಟಿಕೆಟ್‌ಗೆ ಗೋಗರೆಯುತ್ತಿರುವ ಶಾಸಕರು

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…

16 mins ago

ಓದುಗರ ಪತ್ರ: ಹಿಂದಿ ಭಾಷೆ ಬಗ್ಗೆ ತಾತ್ಸಾರ ಸಲ್ಲದು

ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…

19 mins ago

ಓದುಗರ ಪತ್ರ: ಶಾಸಕ ದರ್ಶನ್ ಮಾದರಿ ನಡೆ

ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…

22 mins ago

‘ಮೋದಿ ವಿದೇಶ ನೀತಿ ದೇಶದ ಹಿತಕ್ಕೆ ಮಾರಕ’

‘ಸಾಮ್ರಾಜ್ಯಶಾಹಿ ದಾಳಿ ಹಾಗೂ ಅದರ ಪರಿಣಾಮಗಳು’ ಕುರಿತ ವಿಚಾರಸಂಕಿರಣ  ಹೊಸದಿಲ್ಲಿ: ಪಶ್ಚಿಮ ಏಷ್ಯದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಬದಲಾದ…

31 mins ago

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…

3 hours ago