ನಂಜನಗೂಡು, ಚಾಮುಂಡಿ ಬೆಟ್ಟದಲ್ಲಿ ಎಚ್ ಡಿಕೆ ವಿಶೇಷ ಪೂಜೆ
ಮೈಸೂರು: ಜೆಡಿಎಸ್ನ ಪಂಚರತ್ನ ಯಾತ್ರೆ ಕೋಲಾರ ಜಿಲ್ಲೆಯ ಮುಳಬಾಗಲು ಪಟ್ಟಣದಿಂದ ಶುಕ್ರವಾರದಿಂದ ಮತ್ತೆ ಚಾಲನೆ ಪಡೆದಿದೆ. ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ನಂಜನಗೂಡಿನ ಶ್ರೀಕಂಠೇಶ್ವರ ಮತ್ತು ಮೈಸೂರಿನ ಚಾಮುಂಡೇಶ್ವರಿ ದೇಗುಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ನೀರಾವರಿ ವಿಚಾರವಾಗಿ ತೊಂದರೆಯಾಗಿದೆ ಎಂದರು.
ಮೇಕೆದಾಟು ಯೋಜನೆಗೆ ಮೂರುವರೆ ವರ್ಷದ ಹಿಂದೆಯೇ ಡಿಪಿಆರ್ ಕಳುಹಿಸಲಾಗಿದೆ. ಕೇಂದ್ರ ಸರ್ಕಾರ ಈವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ತುಂಗಭದ್ರ, ಕೃಷ್ಣ ನೀರಾವರಿ ಯೋಜನೆಗಳನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಗೆ ಶೀಘ್ರದಲ್ಲೇ ಚಾಲನೆ ಕೊಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಬಂದಿದೆ. ಆದರೆ, ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದರು.
ಚಾಮುಂಡೇಶ್ವರಿಯಲ್ಲೇ ಸಮಾರೋಪ
ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭ ಮಾಡುತ್ತೇವೆ. ಮಾರ್ಚ್ನಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡುತ್ತೇವೆ.123 ಸ್ಥಾನ ಗೆಲುವಿನ ಗುರಿ ಇಟ್ಟುಕೊಂಡು ನಾವು ಹೊರಟಿದ್ದೇವೆ ಎಂದು ಹೇಳಿದರು.
ರಾಜಕಾರಣದಲ್ಲಿ ಏನೂ ಹೇಳಲಾಗದು. ಮುಂದಿನ ದಿನಗಳಲ್ಲಿ ರಾಜಕೀಯ ಸಮೀಕರಣ ಆಗಬಹುದು. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಜನತಾ ಪರಿವಾರದಿಂದ ಹೋದವರೇ ಹೆಚ್ಚು ಇದ್ದಾರೆ. ಅವರ ಮನಪರಿವರ್ತನೆಯಾಗಿ ಮತ್ತೆ ಪಕ್ಷಕ್ಕೆ ಬರಬಹುದು. ಬಂದಾಗ ಏನು ತೀರ್ಮಾನ ಮಾಡಬೇಕು ನೋಡೋಣ ಎಂದು ನುಡಿದರು.
ಖಾಸಗಿ ಕಂಪನಿ ಮುಂದಿಟ್ಟುಕೊಂಡು ಮತದಾರರ ಡೇಟಾ ಕಳವು ಆರೋಪಕ್ಕೆ ಉತ್ತರಿಸಿದ ಸಂಗ್ರಹ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿ ಮಾತನಾಡಿದ ಅವರು, ಇದರಲ್ಲಿ ಕೆಲವು ತಪ್ಪುಗಳು ಆಗಿವೆ. ಸರ್ಕಾರದ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಡೇಟಾ ಸಂಗ್ರಹ ಮಾಡುವ ಸಿಬ್ಬಂದಿಗಳು ಸರ್ಕಾರಿ ನೌಕರರು ಎಂದು ಹೇಳಿಕೊಂಡು ಮನೆಗಳಿಗೆ ಭೇಟಿ ಕೊಟ್ಟಿರುವ ಮಾಹಿತಿ ಇದೆ ಎಂದರು.
ಸರ್ಕಾರದ ನಡವಳಿಕೆ ಪ್ರತಿಯೊಬ್ಬರಿಗೂ ಸಂಶಯ ಮೂಡುತ್ತದೆ. ಇದರಿಂದ ಬಿಜೆಪಿಯವರು ದೊಡ್ಡ ಸಾಧನೆ ಮಾಡುತ್ತಾರೆ ಎಂಬ ಗಾಬರಿ ನನಗೆ ಇಲ್ಲ. ಈ ಬಾರಿ ಬಿಜೆಪಿ ಏನೇ ಮಾಡಿದರೂ ಪ್ರಯೋಜನವಾಗುವುದಿಲ್ಲ. ನಾಡಿನ ಜನರು ಬೇಸತ್ತು ಹೋಗಿದ್ದಾರೆ. ಈ ಬಾರಿ ಕುತಂತ್ರದಿಂದ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದರು.
ಪೂಜೆ ಸಲ್ಲಿಕೆ ವೇಳೆ ಮಾಜಿ ಸಚಿವರಾದ ಜಿ.ಟಿ.ದೇವೇಗೌಡ, ಬಂಡೆಪ್ಪ ಕಾಶಂಪುರ್, ಸಿ.ಎಸ್.ಪುಟ್ಟರಾಜು, ಎಂಎಲ್ಸಿ ಸಿಎನ್. ಮಂಜೇಗೌಡ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಏನನ್ನಾದರೂ ಕಟ್ಟಲಿ, ನೆರಳು ನೀಡಲಿ..
ಮೈಸೂರಿನ ಬಸ್ ನಿಲ್ದಾಣ ವಿವಾದ ಕುರಿತು ಮಾತನಾಡಿದ ಅವರು, ನನಗೆ ಕಿರುಕುಳವಾಗುತ್ತಿದೆ ಎಂದು ಬಿಜೆಪಿ ಶಾಸಕರೇ ಕಣ್ಣೀರಿಟ್ಟರೆ ಅವರಿಗೆ ಮತ ಕೊಟ್ಟ ಜನರ ಗತಿ ಏನು?, ಗುಂಬಜ್ ಆದರೂ ಮಸೀದಿಯನ್ನಾದರೂ ಮಾಡಿ, ಗೋಪುರವನ್ನಾದರೂ ಮಾಡಿ. ಜನರಿಗೆ ನೆರಳು ಕೊಡಿ. ಕೆಡಹುವ ಕೆಲಸ ಮಾಡಬೇಡಿ ಎಂದು ಸಲಹೆ ನೀಡಿದರು.
ನವೀನ್ ಕುಮಾರ್ ಕೆಲವು ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ರೈತರಲ್ಲಿ ಮಂದಹಾಸ ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ಪ್ರಮುಖ ಬೆಳೆಯಾದ…
ಎಸ್.ಎ.ಹುಸೇನ್ ಡಿ.ಚೆನ್ನಮ್ಮ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಕಣ್ಣಾಲಿಗಳನ್ನು ಒದ್ದೆಯಾಗಿಸಿದ ಗುರು-ಶಿಷ್ಯರ ಬಾಂಧವ್ಯ ಮಡಿಕೇರಿ: ಕಾಲ ಚಕ್ರ ಉರುಳುತ್ತಾ ಸಾಗುತ್ತದೆ, ತಲೆಗೂದಲು…
ಭೇರ್ಯ ಮಹೇಶ್ ಕೆ.ಆರ್.ನಗರದಿಂದ ಭೇರ್ಯ ಗ್ರಾಮದವರೆಗೆ ಅಲ್ಲಲ್ಲಿ ಮೇ ಫ್ಲವರ್ ಮರಗಳ ಆಕರ್ಷಣೆ ಕೆ.ಆರ್.ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಪಾರಂಪರಿಕ ಕಟ್ಟಡಗಳೂ ಪ್ರಮುಖವಾದವು. ಪ್ರವಾಸಿಗರಿಗೂ ಇವುಗಳ ಸೆಳೆತ ಇದ್ದೇ ಇದೆ. ಇಂತಹ ಕಟ್ಟಡಗಳ…
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…