ನಂಜನಗೂಡು, ಚಾಮುಂಡಿ ಬೆಟ್ಟದಲ್ಲಿ ಎಚ್ ಡಿಕೆ ವಿಶೇಷ ಪೂಜೆ
ಮೈಸೂರು: ಜೆಡಿಎಸ್ನ ಪಂಚರತ್ನ ಯಾತ್ರೆ ಕೋಲಾರ ಜಿಲ್ಲೆಯ ಮುಳಬಾಗಲು ಪಟ್ಟಣದಿಂದ ಶುಕ್ರವಾರದಿಂದ ಮತ್ತೆ ಚಾಲನೆ ಪಡೆದಿದೆ. ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ನಂಜನಗೂಡಿನ ಶ್ರೀಕಂಠೇಶ್ವರ ಮತ್ತು ಮೈಸೂರಿನ ಚಾಮುಂಡೇಶ್ವರಿ ದೇಗುಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ನೀರಾವರಿ ವಿಚಾರವಾಗಿ ತೊಂದರೆಯಾಗಿದೆ ಎಂದರು.
ಮೇಕೆದಾಟು ಯೋಜನೆಗೆ ಮೂರುವರೆ ವರ್ಷದ ಹಿಂದೆಯೇ ಡಿಪಿಆರ್ ಕಳುಹಿಸಲಾಗಿದೆ. ಕೇಂದ್ರ ಸರ್ಕಾರ ಈವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ತುಂಗಭದ್ರ, ಕೃಷ್ಣ ನೀರಾವರಿ ಯೋಜನೆಗಳನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಗೆ ಶೀಘ್ರದಲ್ಲೇ ಚಾಲನೆ ಕೊಡುತ್ತೇವೆ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಬಂದಿದೆ. ಆದರೆ, ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದರು.
ಚಾಮುಂಡೇಶ್ವರಿಯಲ್ಲೇ ಸಮಾರೋಪ
ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭ ಮಾಡುತ್ತೇವೆ. ಮಾರ್ಚ್ನಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡುತ್ತೇವೆ.123 ಸ್ಥಾನ ಗೆಲುವಿನ ಗುರಿ ಇಟ್ಟುಕೊಂಡು ನಾವು ಹೊರಟಿದ್ದೇವೆ ಎಂದು ಹೇಳಿದರು.
ರಾಜಕಾರಣದಲ್ಲಿ ಏನೂ ಹೇಳಲಾಗದು. ಮುಂದಿನ ದಿನಗಳಲ್ಲಿ ರಾಜಕೀಯ ಸಮೀಕರಣ ಆಗಬಹುದು. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಜನತಾ ಪರಿವಾರದಿಂದ ಹೋದವರೇ ಹೆಚ್ಚು ಇದ್ದಾರೆ. ಅವರ ಮನಪರಿವರ್ತನೆಯಾಗಿ ಮತ್ತೆ ಪಕ್ಷಕ್ಕೆ ಬರಬಹುದು. ಬಂದಾಗ ಏನು ತೀರ್ಮಾನ ಮಾಡಬೇಕು ನೋಡೋಣ ಎಂದು ನುಡಿದರು.
ಖಾಸಗಿ ಕಂಪನಿ ಮುಂದಿಟ್ಟುಕೊಂಡು ಮತದಾರರ ಡೇಟಾ ಕಳವು ಆರೋಪಕ್ಕೆ ಉತ್ತರಿಸಿದ ಸಂಗ್ರಹ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿ ಮಾತನಾಡಿದ ಅವರು, ಇದರಲ್ಲಿ ಕೆಲವು ತಪ್ಪುಗಳು ಆಗಿವೆ. ಸರ್ಕಾರದ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಡೇಟಾ ಸಂಗ್ರಹ ಮಾಡುವ ಸಿಬ್ಬಂದಿಗಳು ಸರ್ಕಾರಿ ನೌಕರರು ಎಂದು ಹೇಳಿಕೊಂಡು ಮನೆಗಳಿಗೆ ಭೇಟಿ ಕೊಟ್ಟಿರುವ ಮಾಹಿತಿ ಇದೆ ಎಂದರು.
ಸರ್ಕಾರದ ನಡವಳಿಕೆ ಪ್ರತಿಯೊಬ್ಬರಿಗೂ ಸಂಶಯ ಮೂಡುತ್ತದೆ. ಇದರಿಂದ ಬಿಜೆಪಿಯವರು ದೊಡ್ಡ ಸಾಧನೆ ಮಾಡುತ್ತಾರೆ ಎಂಬ ಗಾಬರಿ ನನಗೆ ಇಲ್ಲ. ಈ ಬಾರಿ ಬಿಜೆಪಿ ಏನೇ ಮಾಡಿದರೂ ಪ್ರಯೋಜನವಾಗುವುದಿಲ್ಲ. ನಾಡಿನ ಜನರು ಬೇಸತ್ತು ಹೋಗಿದ್ದಾರೆ. ಈ ಬಾರಿ ಕುತಂತ್ರದಿಂದ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದರು.
ಪೂಜೆ ಸಲ್ಲಿಕೆ ವೇಳೆ ಮಾಜಿ ಸಚಿವರಾದ ಜಿ.ಟಿ.ದೇವೇಗೌಡ, ಬಂಡೆಪ್ಪ ಕಾಶಂಪುರ್, ಸಿ.ಎಸ್.ಪುಟ್ಟರಾಜು, ಎಂಎಲ್ಸಿ ಸಿಎನ್. ಮಂಜೇಗೌಡ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಏನನ್ನಾದರೂ ಕಟ್ಟಲಿ, ನೆರಳು ನೀಡಲಿ..
ಮೈಸೂರಿನ ಬಸ್ ನಿಲ್ದಾಣ ವಿವಾದ ಕುರಿತು ಮಾತನಾಡಿದ ಅವರು, ನನಗೆ ಕಿರುಕುಳವಾಗುತ್ತಿದೆ ಎಂದು ಬಿಜೆಪಿ ಶಾಸಕರೇ ಕಣ್ಣೀರಿಟ್ಟರೆ ಅವರಿಗೆ ಮತ ಕೊಟ್ಟ ಜನರ ಗತಿ ಏನು?, ಗುಂಬಜ್ ಆದರೂ ಮಸೀದಿಯನ್ನಾದರೂ ಮಾಡಿ, ಗೋಪುರವನ್ನಾದರೂ ಮಾಡಿ. ಜನರಿಗೆ ನೆರಳು ಕೊಡಿ. ಕೆಡಹುವ ಕೆಲಸ ಮಾಡಬೇಡಿ ಎಂದು ಸಲಹೆ ನೀಡಿದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…