ಜಿಲ್ಲೆಗಳು

ಜೇನುಕುರುಬ ವ್ಯಕ್ತಿ ಕರಿಯಪ್ಪ ಲಾಕಪ್ ಡೆತ್ ಪ್ರಕರಣದ ಬಗ್ಗೆ ಸಿಪಿಐ(ಎಂ) ತೀವ್ರ ಖಂಡನೆ

ಮೈಸೂರು : ಹೆಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ನಿವಾಸಿ, ಕರಿಯಪ್ಪ ಚಂದ್ರು ಎನ್ನುವ ವ್ಯಕ್ತಿಯನ್ನು ಜಿಂಕೆ ಮಾಂಸ ಮಾರಾಟ ಆರೋಪಕ್ಕೆ ಸಂಬಂಧಿಸಿದಂತೆ  ಅರಣ್ಯ ಅಧಿಕಾರಿಗಳು ಬಂಧಿಸಿ ಆತನಿಗೆ ಕಿರುಕುಳ ಕೊಟ್ಟು, ಕೊಲೆ ಮಾಡಲಾಗಿದೆ ಎಂದು ಇದು ಅಮಾನವೀಯ ಘಟನೆಯಾಗಿದ್ದು  ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಿಪಿಐ(ಎಂ), ಮೈಸೂರು ಜಿಲ್ಲಾ ಸಮಿತಿ ಹೇಳಿದೆ.

ಘಟನೆಯ ಕುರಿತು ಕಾರ್ಯದರ್ಶಿ ಜಗದೀಶ್ ಸೂರ್ಯ ಅವರು ಹೇಳಿಕೆ ನೀಡಿದ್ದು,   ಜಮೀನಿನಲ್ಲಿ ಕೃಷಿಯಲ್ಲಿ ನಿರತರಾಗಿದ್ದ ಕರಿಯಪ್ಪ ಚಂದ್ರು, ಜಿಂಕೆ ಕೊಂದು ಮಾರಾಟ ಮಾಡಿದ್ದ ಎಂಬ ಆಪಾಧನೆ ಹೊಡೆಸಿ, ಆತ ನಿಪರಾಧಿ ಎಂದು ಅಲವತ್ತುಕೊಂಡರೂ ಬಿಡದೇ, ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಆದಿವಾಸಿ ಜೇನು ಕುರುಬ ಸಮುದಾಯಕ್ಕೆ ಸೇರಿದ ಕೊಲೆ ಮಾಡಲಾದ ವ್ಯಕ್ತಿಯನ್ನು ಸುಮಾರು 13 ದಿನಗಳ ಕಾಲ ವಿಚಾರಣೆ ನೆಪದಲ್ಲಿ ತಮ್ಮ ಸುಪರ್ಧಿಯಲ್ಲಿ ಇಟ್ಟುಕೊಂಡಿದ್ದ. ಗುಂಡೇ ಅರಣ್ಯ ವ್ಯಾಪ್ತಿಯ ಅರಣ್ಯ ಅಧಿಕಾರಿಗಳು ಆತನ ಮೇಲೆ ದೈಹಿಕವಾಗಿ ತೀವ್ರ ಹಲ್ಲೆಯನ್ನು ನಡೆಸಿದ್ದಾರೆ. ತನಿಖೆ ಮಾಡಲು ಬೇರೆ ಹಲವಾರು ವಿಧಾನಗಳಿದ್ದರೂ ದೈಹಿಕ ಹಿಂಸೆಯಂತಹ ಅಮಾನುಷ ಕೃತ್ಯಕ್ಕೆ ಸಿಬ್ಬಂದಿ ಮುಂದಾಗಿರುವುದನ್ನು ಪಕ್ಷವು ಖಂಡಿಸುತ್ತದೆ. ಮೃತ ವ್ಯಕ್ತಿಯ ತಾಯಿ ಮಗನನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾಳೆ. ಕಾಡಿನ ಮೇಲಿನ ತಮ್ಮ ಹಕ್ಕನ್ನು ಅವಕಾಶ ನೀಡುವ ಅರಣ್ಯ ಹಕ್ಕುಗಳ ಕಾಯ್ದೆ-2006 ಬಂದ ಮೇಲೂ ಕಾಡಿನ ಹಕ್ಕನ್ನು ಚಲಾಯಿಸುವಲ್ಲಿ ಅಸಮರ್ಥರಾಗಿದ್ದು, ನಮ್ಮ ರಾಜ್ಯದ ಯಾವ ಸರ್ಕಾರವೂ ಈ ಕಾಯ್ದೆಯ ಜಾರಿಗೆ ಗಂಭೀರ ಪ್ರಯತ್ನವನ್ನು ಮಾಡಿಲ್ಲ ಎಂದು ಪಕ್ಷವು ಆಪಾದಿಸುತ್ತದೆ. ಅರಣ್ಯ ಪ್ರದೆಶವನ್ನು ಪ್ರವೇಶಿಸುವ ಕೃಷಿ ಉತ್ಪನ್ನಗಳನ್ನು ಸಂಗ್ರಹಿಸುವ ಅವಕಾಶವನ್ನು ಅರಣ್ಯ ಹಕ್ಕು ಕಾಯ್ದೆ ನೀಡಿದ್ದು, ಗಿರಿಜನರಿಗೆ ಅರಣ್ಯ ಸಿಬ್ಬಂದಿಯು ಕಿರುಕುಳ ನೀಡುವ ಹಲ್ಲೆ ಮಾಡುವ ಪ್ರಕರಣಗಳು ವರದಿಯಾಗುತ್ತಲೇ ಇರುವುದು ಖಂಡನೀಯವಾಗಿದೆ. ಈಗಲೂ ಕೊಲೆಯಂತಹ ಕೃತ್ಯಕ್ಕೆ ಅರಣ್ಯ ಸಿಬ್ಬಂದಿ ಮುಂದಾಗಿರುವುದು ಯಾವ ಕಾರಣಕ್ಕೂ ಸಹಿಸಲು ಅಸಾಧ್ಯವಾಗಿದೆ. ಯಾವ ದೂರು ಬಂದಿಲ್ಲ ಎಂದು ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಳ್ಳಲು ಮುಂದಾಗದಿರುವುದು ಸರಿಯಲ್ಲ. ಗಿರಿಜನ ವ್ಯಕ್ತಿಯನ್ನು ಕೊಲೆ ಮಾಡಿರುವ ಅರಣ್ಯ ಅಧಿಕಾರಿ ಸಿಬ್ಬಂದಿಗಳನ್ನು ತಕ್ಷನ ಬಂಧಿಸಿ, ನ್ಯಾಯ ದೊರಕಿಸಬೇಕು ಮತ್ತು ಮೃತ ವ್ಯಕ್ತಿಯ ಕುಟುಂಬಕ್ಕೆ ಜೀವನಾಧಾರವನ್ನು ಕಲ್ಪಿಸಬೇಕೆಂದು ಎಂದು  ಸಿ.ಪಿ.ಐ.(ಎಂ) ಪಕ್ಷವು ಆಗ್ರಹಿಸುತ್ತದೆ ಎಂದು ಹೇಳಿದ್ದಾರೆ.

 

andolanait

Recent Posts

ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ದೇವರಾಜ ಅರಸು ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ ಎಂದು ಮಾಜಿ…

18 mins ago

ಪಿರಿಯಾಪಟ್ಟಣ| 10 ಲಕ್ಷ ಮೌಲ್ಯದ ಅಡಿಕೆ ದೋಚಿದ ಖದೀಮರು

ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್‌ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ…

45 mins ago

ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ರಶ್ಮಿಕಾ ಮಂದಣ್ಣ ನಂಬರ್.‌1

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ. ಕಿರಿಕ್‌ ಪಾರ್ಟಿ ಮೂಲಕ…

53 mins ago

ಸಾಕ್ಷ್ಯ ಸಿಗಬಾರದೆಂದು ಮೃತ ರಾಜಶೇಖರ್‌ ದೇಹ ಸುಟ್ಟಿದ್ದಾರೆ: ಶ್ರೀರಾಮುಲು ಗಂಭೀರ ಆರೋಪ

ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮಾಜಿ…

1 hour ago

ಬಸ್-ಲಾರಿ ಡಿಕ್ಕಿ: ಚಾಲಕ ಸಾವು, ಹಲವು ಪ್ರಯಾಣಿಕರಿಗೆ ಗಾಯ

ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…

5 hours ago

ಓದುಗರ ಪತ್ರ: ಕುಂಭೇಶ್ವರ ಕಾಲೋನಿ ರೈತರ ಜಮೀನು ವಿವಾದ ಪರಿಹರಿಸಿ

ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…

5 hours ago