ಮೈಸೂರು : ಹೆಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ನಿವಾಸಿ, ಕರಿಯಪ್ಪ ಚಂದ್ರು ಎನ್ನುವ ವ್ಯಕ್ತಿಯನ್ನು ಜಿಂಕೆ ಮಾಂಸ ಮಾರಾಟ ಆರೋಪಕ್ಕೆ ಸಂಬಂಧಿಸಿದಂತೆ ಅರಣ್ಯ ಅಧಿಕಾರಿಗಳು ಬಂಧಿಸಿ ಆತನಿಗೆ ಕಿರುಕುಳ ಕೊಟ್ಟು, ಕೊಲೆ ಮಾಡಲಾಗಿದೆ ಎಂದು ಇದು ಅಮಾನವೀಯ ಘಟನೆಯಾಗಿದ್ದು ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಿಪಿಐ(ಎಂ), ಮೈಸೂರು ಜಿಲ್ಲಾ ಸಮಿತಿ ಹೇಳಿದೆ.
ಘಟನೆಯ ಕುರಿತು ಕಾರ್ಯದರ್ಶಿ ಜಗದೀಶ್ ಸೂರ್ಯ ಅವರು ಹೇಳಿಕೆ ನೀಡಿದ್ದು, ಜಮೀನಿನಲ್ಲಿ ಕೃಷಿಯಲ್ಲಿ ನಿರತರಾಗಿದ್ದ ಕರಿಯಪ್ಪ ಚಂದ್ರು, ಜಿಂಕೆ ಕೊಂದು ಮಾರಾಟ ಮಾಡಿದ್ದ ಎಂಬ ಆಪಾಧನೆ ಹೊಡೆಸಿ, ಆತ ನಿಪರಾಧಿ ಎಂದು ಅಲವತ್ತುಕೊಂಡರೂ ಬಿಡದೇ, ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಆದಿವಾಸಿ ಜೇನು ಕುರುಬ ಸಮುದಾಯಕ್ಕೆ ಸೇರಿದ ಕೊಲೆ ಮಾಡಲಾದ ವ್ಯಕ್ತಿಯನ್ನು ಸುಮಾರು 13 ದಿನಗಳ ಕಾಲ ವಿಚಾರಣೆ ನೆಪದಲ್ಲಿ ತಮ್ಮ ಸುಪರ್ಧಿಯಲ್ಲಿ ಇಟ್ಟುಕೊಂಡಿದ್ದ. ಗುಂಡೇ ಅರಣ್ಯ ವ್ಯಾಪ್ತಿಯ ಅರಣ್ಯ ಅಧಿಕಾರಿಗಳು ಆತನ ಮೇಲೆ ದೈಹಿಕವಾಗಿ ತೀವ್ರ ಹಲ್ಲೆಯನ್ನು ನಡೆಸಿದ್ದಾರೆ. ತನಿಖೆ ಮಾಡಲು ಬೇರೆ ಹಲವಾರು ವಿಧಾನಗಳಿದ್ದರೂ ದೈಹಿಕ ಹಿಂಸೆಯಂತಹ ಅಮಾನುಷ ಕೃತ್ಯಕ್ಕೆ ಸಿಬ್ಬಂದಿ ಮುಂದಾಗಿರುವುದನ್ನು ಪಕ್ಷವು ಖಂಡಿಸುತ್ತದೆ. ಮೃತ ವ್ಯಕ್ತಿಯ ತಾಯಿ ಮಗನನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾಳೆ. ಕಾಡಿನ ಮೇಲಿನ ತಮ್ಮ ಹಕ್ಕನ್ನು ಅವಕಾಶ ನೀಡುವ ಅರಣ್ಯ ಹಕ್ಕುಗಳ ಕಾಯ್ದೆ-2006 ಬಂದ ಮೇಲೂ ಕಾಡಿನ ಹಕ್ಕನ್ನು ಚಲಾಯಿಸುವಲ್ಲಿ ಅಸಮರ್ಥರಾಗಿದ್ದು, ನಮ್ಮ ರಾಜ್ಯದ ಯಾವ ಸರ್ಕಾರವೂ ಈ ಕಾಯ್ದೆಯ ಜಾರಿಗೆ ಗಂಭೀರ ಪ್ರಯತ್ನವನ್ನು ಮಾಡಿಲ್ಲ ಎಂದು ಪಕ್ಷವು ಆಪಾದಿಸುತ್ತದೆ. ಅರಣ್ಯ ಪ್ರದೆಶವನ್ನು ಪ್ರವೇಶಿಸುವ ಕೃಷಿ ಉತ್ಪನ್ನಗಳನ್ನು ಸಂಗ್ರಹಿಸುವ ಅವಕಾಶವನ್ನು ಅರಣ್ಯ ಹಕ್ಕು ಕಾಯ್ದೆ ನೀಡಿದ್ದು, ಗಿರಿಜನರಿಗೆ ಅರಣ್ಯ ಸಿಬ್ಬಂದಿಯು ಕಿರುಕುಳ ನೀಡುವ ಹಲ್ಲೆ ಮಾಡುವ ಪ್ರಕರಣಗಳು ವರದಿಯಾಗುತ್ತಲೇ ಇರುವುದು ಖಂಡನೀಯವಾಗಿದೆ. ಈಗಲೂ ಕೊಲೆಯಂತಹ ಕೃತ್ಯಕ್ಕೆ ಅರಣ್ಯ ಸಿಬ್ಬಂದಿ ಮುಂದಾಗಿರುವುದು ಯಾವ ಕಾರಣಕ್ಕೂ ಸಹಿಸಲು ಅಸಾಧ್ಯವಾಗಿದೆ. ಯಾವ ದೂರು ಬಂದಿಲ್ಲ ಎಂದು ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಳ್ಳಲು ಮುಂದಾಗದಿರುವುದು ಸರಿಯಲ್ಲ. ಗಿರಿಜನ ವ್ಯಕ್ತಿಯನ್ನು ಕೊಲೆ ಮಾಡಿರುವ ಅರಣ್ಯ ಅಧಿಕಾರಿ ಸಿಬ್ಬಂದಿಗಳನ್ನು ತಕ್ಷನ ಬಂಧಿಸಿ, ನ್ಯಾಯ ದೊರಕಿಸಬೇಕು ಮತ್ತು ಮೃತ ವ್ಯಕ್ತಿಯ ಕುಟುಂಬಕ್ಕೆ ಜೀವನಾಧಾರವನ್ನು ಕಲ್ಪಿಸಬೇಕೆಂದು ಎಂದು ಸಿ.ಪಿ.ಐ.(ಎಂ) ಪಕ್ಷವು ಆಗ್ರಹಿಸುತ್ತದೆ ಎಂದು ಹೇಳಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…