ಜಿಲ್ಲೆಗಳು

ಜೇನುಕುರುಬ ವ್ಯಕ್ತಿ ಕರಿಯಪ್ಪ ಲಾಕಪ್ ಡೆತ್ ಪ್ರಕರಣದ ಬಗ್ಗೆ ಸಿಪಿಐ(ಎಂ) ತೀವ್ರ ಖಂಡನೆ

ಮೈಸೂರು : ಹೆಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ನಿವಾಸಿ, ಕರಿಯಪ್ಪ ಚಂದ್ರು ಎನ್ನುವ ವ್ಯಕ್ತಿಯನ್ನು ಜಿಂಕೆ ಮಾಂಸ ಮಾರಾಟ ಆರೋಪಕ್ಕೆ ಸಂಬಂಧಿಸಿದಂತೆ  ಅರಣ್ಯ ಅಧಿಕಾರಿಗಳು ಬಂಧಿಸಿ ಆತನಿಗೆ ಕಿರುಕುಳ ಕೊಟ್ಟು, ಕೊಲೆ ಮಾಡಲಾಗಿದೆ ಎಂದು ಇದು ಅಮಾನವೀಯ ಘಟನೆಯಾಗಿದ್ದು  ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಿಪಿಐ(ಎಂ), ಮೈಸೂರು ಜಿಲ್ಲಾ ಸಮಿತಿ ಹೇಳಿದೆ.

ಘಟನೆಯ ಕುರಿತು ಕಾರ್ಯದರ್ಶಿ ಜಗದೀಶ್ ಸೂರ್ಯ ಅವರು ಹೇಳಿಕೆ ನೀಡಿದ್ದು,   ಜಮೀನಿನಲ್ಲಿ ಕೃಷಿಯಲ್ಲಿ ನಿರತರಾಗಿದ್ದ ಕರಿಯಪ್ಪ ಚಂದ್ರು, ಜಿಂಕೆ ಕೊಂದು ಮಾರಾಟ ಮಾಡಿದ್ದ ಎಂಬ ಆಪಾಧನೆ ಹೊಡೆಸಿ, ಆತ ನಿಪರಾಧಿ ಎಂದು ಅಲವತ್ತುಕೊಂಡರೂ ಬಿಡದೇ, ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಆದಿವಾಸಿ ಜೇನು ಕುರುಬ ಸಮುದಾಯಕ್ಕೆ ಸೇರಿದ ಕೊಲೆ ಮಾಡಲಾದ ವ್ಯಕ್ತಿಯನ್ನು ಸುಮಾರು 13 ದಿನಗಳ ಕಾಲ ವಿಚಾರಣೆ ನೆಪದಲ್ಲಿ ತಮ್ಮ ಸುಪರ್ಧಿಯಲ್ಲಿ ಇಟ್ಟುಕೊಂಡಿದ್ದ. ಗುಂಡೇ ಅರಣ್ಯ ವ್ಯಾಪ್ತಿಯ ಅರಣ್ಯ ಅಧಿಕಾರಿಗಳು ಆತನ ಮೇಲೆ ದೈಹಿಕವಾಗಿ ತೀವ್ರ ಹಲ್ಲೆಯನ್ನು ನಡೆಸಿದ್ದಾರೆ. ತನಿಖೆ ಮಾಡಲು ಬೇರೆ ಹಲವಾರು ವಿಧಾನಗಳಿದ್ದರೂ ದೈಹಿಕ ಹಿಂಸೆಯಂತಹ ಅಮಾನುಷ ಕೃತ್ಯಕ್ಕೆ ಸಿಬ್ಬಂದಿ ಮುಂದಾಗಿರುವುದನ್ನು ಪಕ್ಷವು ಖಂಡಿಸುತ್ತದೆ. ಮೃತ ವ್ಯಕ್ತಿಯ ತಾಯಿ ಮಗನನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾಳೆ. ಕಾಡಿನ ಮೇಲಿನ ತಮ್ಮ ಹಕ್ಕನ್ನು ಅವಕಾಶ ನೀಡುವ ಅರಣ್ಯ ಹಕ್ಕುಗಳ ಕಾಯ್ದೆ-2006 ಬಂದ ಮೇಲೂ ಕಾಡಿನ ಹಕ್ಕನ್ನು ಚಲಾಯಿಸುವಲ್ಲಿ ಅಸಮರ್ಥರಾಗಿದ್ದು, ನಮ್ಮ ರಾಜ್ಯದ ಯಾವ ಸರ್ಕಾರವೂ ಈ ಕಾಯ್ದೆಯ ಜಾರಿಗೆ ಗಂಭೀರ ಪ್ರಯತ್ನವನ್ನು ಮಾಡಿಲ್ಲ ಎಂದು ಪಕ್ಷವು ಆಪಾದಿಸುತ್ತದೆ. ಅರಣ್ಯ ಪ್ರದೆಶವನ್ನು ಪ್ರವೇಶಿಸುವ ಕೃಷಿ ಉತ್ಪನ್ನಗಳನ್ನು ಸಂಗ್ರಹಿಸುವ ಅವಕಾಶವನ್ನು ಅರಣ್ಯ ಹಕ್ಕು ಕಾಯ್ದೆ ನೀಡಿದ್ದು, ಗಿರಿಜನರಿಗೆ ಅರಣ್ಯ ಸಿಬ್ಬಂದಿಯು ಕಿರುಕುಳ ನೀಡುವ ಹಲ್ಲೆ ಮಾಡುವ ಪ್ರಕರಣಗಳು ವರದಿಯಾಗುತ್ತಲೇ ಇರುವುದು ಖಂಡನೀಯವಾಗಿದೆ. ಈಗಲೂ ಕೊಲೆಯಂತಹ ಕೃತ್ಯಕ್ಕೆ ಅರಣ್ಯ ಸಿಬ್ಬಂದಿ ಮುಂದಾಗಿರುವುದು ಯಾವ ಕಾರಣಕ್ಕೂ ಸಹಿಸಲು ಅಸಾಧ್ಯವಾಗಿದೆ. ಯಾವ ದೂರು ಬಂದಿಲ್ಲ ಎಂದು ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಳ್ಳಲು ಮುಂದಾಗದಿರುವುದು ಸರಿಯಲ್ಲ. ಗಿರಿಜನ ವ್ಯಕ್ತಿಯನ್ನು ಕೊಲೆ ಮಾಡಿರುವ ಅರಣ್ಯ ಅಧಿಕಾರಿ ಸಿಬ್ಬಂದಿಗಳನ್ನು ತಕ್ಷನ ಬಂಧಿಸಿ, ನ್ಯಾಯ ದೊರಕಿಸಬೇಕು ಮತ್ತು ಮೃತ ವ್ಯಕ್ತಿಯ ಕುಟುಂಬಕ್ಕೆ ಜೀವನಾಧಾರವನ್ನು ಕಲ್ಪಿಸಬೇಕೆಂದು ಎಂದು  ಸಿ.ಪಿ.ಐ.(ಎಂ) ಪಕ್ಷವು ಆಗ್ರಹಿಸುತ್ತದೆ ಎಂದು ಹೇಳಿದ್ದಾರೆ.

 

andolanait

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

5 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

8 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

8 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

9 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

9 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

9 hours ago