ಜಿಲ್ಲೆಗಳು

ಜೇನುಕುರುಬ ವ್ಯಕ್ತಿ ಕರಿಯಪ್ಪ ಲಾಕಪ್ ಡೆತ್ ಪ್ರಕರಣದ ಬಗ್ಗೆ ಸಿಪಿಐ(ಎಂ) ತೀವ್ರ ಖಂಡನೆ

ಮೈಸೂರು : ಹೆಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ನಿವಾಸಿ, ಕರಿಯಪ್ಪ ಚಂದ್ರು ಎನ್ನುವ ವ್ಯಕ್ತಿಯನ್ನು ಜಿಂಕೆ ಮಾಂಸ ಮಾರಾಟ ಆರೋಪಕ್ಕೆ ಸಂಬಂಧಿಸಿದಂತೆ  ಅರಣ್ಯ ಅಧಿಕಾರಿಗಳು ಬಂಧಿಸಿ ಆತನಿಗೆ ಕಿರುಕುಳ ಕೊಟ್ಟು, ಕೊಲೆ ಮಾಡಲಾಗಿದೆ ಎಂದು ಇದು ಅಮಾನವೀಯ ಘಟನೆಯಾಗಿದ್ದು  ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಿಪಿಐ(ಎಂ), ಮೈಸೂರು ಜಿಲ್ಲಾ ಸಮಿತಿ ಹೇಳಿದೆ.

ಘಟನೆಯ ಕುರಿತು ಕಾರ್ಯದರ್ಶಿ ಜಗದೀಶ್ ಸೂರ್ಯ ಅವರು ಹೇಳಿಕೆ ನೀಡಿದ್ದು,   ಜಮೀನಿನಲ್ಲಿ ಕೃಷಿಯಲ್ಲಿ ನಿರತರಾಗಿದ್ದ ಕರಿಯಪ್ಪ ಚಂದ್ರು, ಜಿಂಕೆ ಕೊಂದು ಮಾರಾಟ ಮಾಡಿದ್ದ ಎಂಬ ಆಪಾಧನೆ ಹೊಡೆಸಿ, ಆತ ನಿಪರಾಧಿ ಎಂದು ಅಲವತ್ತುಕೊಂಡರೂ ಬಿಡದೇ, ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಆದಿವಾಸಿ ಜೇನು ಕುರುಬ ಸಮುದಾಯಕ್ಕೆ ಸೇರಿದ ಕೊಲೆ ಮಾಡಲಾದ ವ್ಯಕ್ತಿಯನ್ನು ಸುಮಾರು 13 ದಿನಗಳ ಕಾಲ ವಿಚಾರಣೆ ನೆಪದಲ್ಲಿ ತಮ್ಮ ಸುಪರ್ಧಿಯಲ್ಲಿ ಇಟ್ಟುಕೊಂಡಿದ್ದ. ಗುಂಡೇ ಅರಣ್ಯ ವ್ಯಾಪ್ತಿಯ ಅರಣ್ಯ ಅಧಿಕಾರಿಗಳು ಆತನ ಮೇಲೆ ದೈಹಿಕವಾಗಿ ತೀವ್ರ ಹಲ್ಲೆಯನ್ನು ನಡೆಸಿದ್ದಾರೆ. ತನಿಖೆ ಮಾಡಲು ಬೇರೆ ಹಲವಾರು ವಿಧಾನಗಳಿದ್ದರೂ ದೈಹಿಕ ಹಿಂಸೆಯಂತಹ ಅಮಾನುಷ ಕೃತ್ಯಕ್ಕೆ ಸಿಬ್ಬಂದಿ ಮುಂದಾಗಿರುವುದನ್ನು ಪಕ್ಷವು ಖಂಡಿಸುತ್ತದೆ. ಮೃತ ವ್ಯಕ್ತಿಯ ತಾಯಿ ಮಗನನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾಳೆ. ಕಾಡಿನ ಮೇಲಿನ ತಮ್ಮ ಹಕ್ಕನ್ನು ಅವಕಾಶ ನೀಡುವ ಅರಣ್ಯ ಹಕ್ಕುಗಳ ಕಾಯ್ದೆ-2006 ಬಂದ ಮೇಲೂ ಕಾಡಿನ ಹಕ್ಕನ್ನು ಚಲಾಯಿಸುವಲ್ಲಿ ಅಸಮರ್ಥರಾಗಿದ್ದು, ನಮ್ಮ ರಾಜ್ಯದ ಯಾವ ಸರ್ಕಾರವೂ ಈ ಕಾಯ್ದೆಯ ಜಾರಿಗೆ ಗಂಭೀರ ಪ್ರಯತ್ನವನ್ನು ಮಾಡಿಲ್ಲ ಎಂದು ಪಕ್ಷವು ಆಪಾದಿಸುತ್ತದೆ. ಅರಣ್ಯ ಪ್ರದೆಶವನ್ನು ಪ್ರವೇಶಿಸುವ ಕೃಷಿ ಉತ್ಪನ್ನಗಳನ್ನು ಸಂಗ್ರಹಿಸುವ ಅವಕಾಶವನ್ನು ಅರಣ್ಯ ಹಕ್ಕು ಕಾಯ್ದೆ ನೀಡಿದ್ದು, ಗಿರಿಜನರಿಗೆ ಅರಣ್ಯ ಸಿಬ್ಬಂದಿಯು ಕಿರುಕುಳ ನೀಡುವ ಹಲ್ಲೆ ಮಾಡುವ ಪ್ರಕರಣಗಳು ವರದಿಯಾಗುತ್ತಲೇ ಇರುವುದು ಖಂಡನೀಯವಾಗಿದೆ. ಈಗಲೂ ಕೊಲೆಯಂತಹ ಕೃತ್ಯಕ್ಕೆ ಅರಣ್ಯ ಸಿಬ್ಬಂದಿ ಮುಂದಾಗಿರುವುದು ಯಾವ ಕಾರಣಕ್ಕೂ ಸಹಿಸಲು ಅಸಾಧ್ಯವಾಗಿದೆ. ಯಾವ ದೂರು ಬಂದಿಲ್ಲ ಎಂದು ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಳ್ಳಲು ಮುಂದಾಗದಿರುವುದು ಸರಿಯಲ್ಲ. ಗಿರಿಜನ ವ್ಯಕ್ತಿಯನ್ನು ಕೊಲೆ ಮಾಡಿರುವ ಅರಣ್ಯ ಅಧಿಕಾರಿ ಸಿಬ್ಬಂದಿಗಳನ್ನು ತಕ್ಷನ ಬಂಧಿಸಿ, ನ್ಯಾಯ ದೊರಕಿಸಬೇಕು ಮತ್ತು ಮೃತ ವ್ಯಕ್ತಿಯ ಕುಟುಂಬಕ್ಕೆ ಜೀವನಾಧಾರವನ್ನು ಕಲ್ಪಿಸಬೇಕೆಂದು ಎಂದು  ಸಿ.ಪಿ.ಐ.(ಎಂ) ಪಕ್ಷವು ಆಗ್ರಹಿಸುತ್ತದೆ ಎಂದು ಹೇಳಿದ್ದಾರೆ.

 

andolanait

Recent Posts

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

8 mins ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

2 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

2 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

3 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

6 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

6 hours ago