ಜಿಲ್ಲೆಗಳು

ಜಿಮ್ ಟ್ರೈನರ್ ಪತ್ನಿ ಅನುಮಾನಾಸ್ಪದ ಸಾವು

ಕೊಲೆ ಆರೋಪ; ಪತಿ ವಿರುದ್ಧ ದೂರು

ಮೈಸೂರು: ಜಿಮ್ ಟ್ರೈನರ್ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಆರೋಪದಲ್ಲಿ ಅವರ ಪತಿ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉದಯಗಿರಿಯ ರೆಹಮಾನ್ ರಸ್ತೆಯ ನಿವಾಸಿ ತರನುಮ್ ಖಾನಂ(೨೨) ಅವರೇ ಮೃತಪಟ್ಟವರು. ಇವರ ಪತಿ ಸೈಯದ್ ಉಮರ್ ಮತ್ತು ಅಮೀನ್ ಬಾನು (ಉಮರ್ ಅವರ ಅಕ್ಕ) ವಿರುದ್ಧ ತರನುಮ್ ತಾಯಿ ನಾಜೀಮಾ ದೂರು ನೀಡಿದ್ದಾರೆ.

ತರನುಮ್ ಖಾನಂ ಅವರನ್ನು ೨೦೧೯ರಲ್ಲಿ ಸೈಯದ್ ಉಮರ್ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಮಯದಲ್ಲಿ ೭ ಲಕ್ಷ ರೂ.ಗಳನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. ಚಿನ್ನ ಕೊಡುವಂತೆ ಕೇಳಿದಾಗ ಇದಕ್ಕೆ ೬.೫೦ ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿ, ಮದುವೆಗೂ ಎರಡು ತಿಂಗಳ ಮುಂಚೆ ೫ ಲಕ್ಷ ರೂ. ನೀಡಲಾಗಿತ್ತು. ಈಗ ಈ ದಂಪತಿಗೆ ೧೧ ತಿಂಗಳ ಗಂಡು ಮಗು ಇದೆ.

ಒಂದು ವರ್ಷದ ಹಿಂದೆ ಜಿಮ್ ಆರಂಭಿಸಿದ್ದ ಸೈಯದ್ ಉಮರ್ ಅದರ ನಿರ್ವಹಣೆಗೆ ಹಣ ತರುವಂತೆ ಪತ್ನಿಗೆ ದೈಹಿಕ ಹಲ್ಲೆ ಮಾಡಿ ಕಿರುಕುಳ ನೀಡುತ್ತಿದ್ದರು. ಈ ಸಂಬಂಧ ಹಿರಿಯರ ಸಮ್ಮುಖದಲ್ಲಿ ನ್ಯಾಯ ಮಾಡಿ ಉಮರ್‌ಗೆ ಬುದ್ಧಿವಾದ ಹೇಳಿ, ಪತ್ನಿಯನ್ನು ಮನೆಗೆ ಕಳುಹಿಸಲಾಗಿತ್ತು. ಆ ನಂತರವೂ ಕಿರುಕುಳ ನೀಡುವುದನ್ನು ನಿಲ್ಲಿಸದ ಉಮರ್ ನ.೧೦ರಂದು ತಡರಾತ್ರಿ ಕೊಲೆ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನನ್ವಯ ಉದಯಗಿರಿ ಠಾಣೆಯಲ್ಲಿ ವರದಕ್ಷಿಣೆ ನಿಷೇಧ ಕಾಯಿದೆ ೧೯೬೨ ಮತ್ತು ಸೆಕ್ಷನ್ ೩೦೨ ಅಡಿ ಪ್ರಕರಣ ದಾಖಲಾಗಿದೆ.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

45 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago