ಕೊಲೆ ಆರೋಪ; ಪತಿ ವಿರುದ್ಧ ದೂರು
ಮೈಸೂರು: ಜಿಮ್ ಟ್ರೈನರ್ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಆರೋಪದಲ್ಲಿ ಅವರ ಪತಿ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದಯಗಿರಿಯ ರೆಹಮಾನ್ ರಸ್ತೆಯ ನಿವಾಸಿ ತರನುಮ್ ಖಾನಂ(೨೨) ಅವರೇ ಮೃತಪಟ್ಟವರು. ಇವರ ಪತಿ ಸೈಯದ್ ಉಮರ್ ಮತ್ತು ಅಮೀನ್ ಬಾನು (ಉಮರ್ ಅವರ ಅಕ್ಕ) ವಿರುದ್ಧ ತರನುಮ್ ತಾಯಿ ನಾಜೀಮಾ ದೂರು ನೀಡಿದ್ದಾರೆ.
ತರನುಮ್ ಖಾನಂ ಅವರನ್ನು ೨೦೧೯ರಲ್ಲಿ ಸೈಯದ್ ಉಮರ್ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಮಯದಲ್ಲಿ ೭ ಲಕ್ಷ ರೂ.ಗಳನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. ಚಿನ್ನ ಕೊಡುವಂತೆ ಕೇಳಿದಾಗ ಇದಕ್ಕೆ ೬.೫೦ ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿ, ಮದುವೆಗೂ ಎರಡು ತಿಂಗಳ ಮುಂಚೆ ೫ ಲಕ್ಷ ರೂ. ನೀಡಲಾಗಿತ್ತು. ಈಗ ಈ ದಂಪತಿಗೆ ೧೧ ತಿಂಗಳ ಗಂಡು ಮಗು ಇದೆ.
ಒಂದು ವರ್ಷದ ಹಿಂದೆ ಜಿಮ್ ಆರಂಭಿಸಿದ್ದ ಸೈಯದ್ ಉಮರ್ ಅದರ ನಿರ್ವಹಣೆಗೆ ಹಣ ತರುವಂತೆ ಪತ್ನಿಗೆ ದೈಹಿಕ ಹಲ್ಲೆ ಮಾಡಿ ಕಿರುಕುಳ ನೀಡುತ್ತಿದ್ದರು. ಈ ಸಂಬಂಧ ಹಿರಿಯರ ಸಮ್ಮುಖದಲ್ಲಿ ನ್ಯಾಯ ಮಾಡಿ ಉಮರ್ಗೆ ಬುದ್ಧಿವಾದ ಹೇಳಿ, ಪತ್ನಿಯನ್ನು ಮನೆಗೆ ಕಳುಹಿಸಲಾಗಿತ್ತು. ಆ ನಂತರವೂ ಕಿರುಕುಳ ನೀಡುವುದನ್ನು ನಿಲ್ಲಿಸದ ಉಮರ್ ನ.೧೦ರಂದು ತಡರಾತ್ರಿ ಕೊಲೆ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನನ್ವಯ ಉದಯಗಿರಿ ಠಾಣೆಯಲ್ಲಿ ವರದಕ್ಷಿಣೆ ನಿಷೇಧ ಕಾಯಿದೆ ೧೯೬೨ ಮತ್ತು ಸೆಕ್ಷನ್ ೩೦೨ ಅಡಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…