ಜಿಲ್ಲೆಗಳು

ಜಿಮ್ ಟ್ರೈನರ್ ಪತ್ನಿ ಅನುಮಾನಾಸ್ಪದ ಸಾವು

ಕೊಲೆ ಆರೋಪ; ಪತಿ ವಿರುದ್ಧ ದೂರು

ಮೈಸೂರು: ಜಿಮ್ ಟ್ರೈನರ್ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಆರೋಪದಲ್ಲಿ ಅವರ ಪತಿ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉದಯಗಿರಿಯ ರೆಹಮಾನ್ ರಸ್ತೆಯ ನಿವಾಸಿ ತರನುಮ್ ಖಾನಂ(೨೨) ಅವರೇ ಮೃತಪಟ್ಟವರು. ಇವರ ಪತಿ ಸೈಯದ್ ಉಮರ್ ಮತ್ತು ಅಮೀನ್ ಬಾನು (ಉಮರ್ ಅವರ ಅಕ್ಕ) ವಿರುದ್ಧ ತರನುಮ್ ತಾಯಿ ನಾಜೀಮಾ ದೂರು ನೀಡಿದ್ದಾರೆ.

ತರನುಮ್ ಖಾನಂ ಅವರನ್ನು ೨೦೧೯ರಲ್ಲಿ ಸೈಯದ್ ಉಮರ್ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಮಯದಲ್ಲಿ ೭ ಲಕ್ಷ ರೂ.ಗಳನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. ಚಿನ್ನ ಕೊಡುವಂತೆ ಕೇಳಿದಾಗ ಇದಕ್ಕೆ ೬.೫೦ ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿ, ಮದುವೆಗೂ ಎರಡು ತಿಂಗಳ ಮುಂಚೆ ೫ ಲಕ್ಷ ರೂ. ನೀಡಲಾಗಿತ್ತು. ಈಗ ಈ ದಂಪತಿಗೆ ೧೧ ತಿಂಗಳ ಗಂಡು ಮಗು ಇದೆ.

ಒಂದು ವರ್ಷದ ಹಿಂದೆ ಜಿಮ್ ಆರಂಭಿಸಿದ್ದ ಸೈಯದ್ ಉಮರ್ ಅದರ ನಿರ್ವಹಣೆಗೆ ಹಣ ತರುವಂತೆ ಪತ್ನಿಗೆ ದೈಹಿಕ ಹಲ್ಲೆ ಮಾಡಿ ಕಿರುಕುಳ ನೀಡುತ್ತಿದ್ದರು. ಈ ಸಂಬಂಧ ಹಿರಿಯರ ಸಮ್ಮುಖದಲ್ಲಿ ನ್ಯಾಯ ಮಾಡಿ ಉಮರ್‌ಗೆ ಬುದ್ಧಿವಾದ ಹೇಳಿ, ಪತ್ನಿಯನ್ನು ಮನೆಗೆ ಕಳುಹಿಸಲಾಗಿತ್ತು. ಆ ನಂತರವೂ ಕಿರುಕುಳ ನೀಡುವುದನ್ನು ನಿಲ್ಲಿಸದ ಉಮರ್ ನ.೧೦ರಂದು ತಡರಾತ್ರಿ ಕೊಲೆ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನನ್ವಯ ಉದಯಗಿರಿ ಠಾಣೆಯಲ್ಲಿ ವರದಕ್ಷಿಣೆ ನಿಷೇಧ ಕಾಯಿದೆ ೧೯೬೨ ಮತ್ತು ಸೆಕ್ಷನ್ ೩೦೨ ಅಡಿ ಪ್ರಕರಣ ದಾಖಲಾಗಿದೆ.

andolanait

Recent Posts

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಬಂದ್‌

ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು…

13 mins ago

ಟ್ರೆಂಡ್‌ ಸೃಷ್ಟಿಸಿದ ಕಾಕ್ರೋಚ್‌ ಜನತಾ ಪಾರ್ಟಿ ; ಚಳವಳಿಯಾಗಿ ಬದಲಾದ ಸಿಜೆಪಿ

ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…

1 hour ago

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

6 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

8 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

16 hours ago