ಜಿಲ್ಲೆಗಳು

ಜಿಮ್ ಟ್ರೈನರ್ ಪತ್ನಿ ಅನುಮಾನಾಸ್ಪದ ಸಾವು

ಕೊಲೆ ಆರೋಪ; ಪತಿ ವಿರುದ್ಧ ದೂರು

ಮೈಸೂರು: ಜಿಮ್ ಟ್ರೈನರ್ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಆರೋಪದಲ್ಲಿ ಅವರ ಪತಿ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉದಯಗಿರಿಯ ರೆಹಮಾನ್ ರಸ್ತೆಯ ನಿವಾಸಿ ತರನುಮ್ ಖಾನಂ(೨೨) ಅವರೇ ಮೃತಪಟ್ಟವರು. ಇವರ ಪತಿ ಸೈಯದ್ ಉಮರ್ ಮತ್ತು ಅಮೀನ್ ಬಾನು (ಉಮರ್ ಅವರ ಅಕ್ಕ) ವಿರುದ್ಧ ತರನುಮ್ ತಾಯಿ ನಾಜೀಮಾ ದೂರು ನೀಡಿದ್ದಾರೆ.

ತರನುಮ್ ಖಾನಂ ಅವರನ್ನು ೨೦೧೯ರಲ್ಲಿ ಸೈಯದ್ ಉಮರ್ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಮಯದಲ್ಲಿ ೭ ಲಕ್ಷ ರೂ.ಗಳನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. ಚಿನ್ನ ಕೊಡುವಂತೆ ಕೇಳಿದಾಗ ಇದಕ್ಕೆ ೬.೫೦ ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿ, ಮದುವೆಗೂ ಎರಡು ತಿಂಗಳ ಮುಂಚೆ ೫ ಲಕ್ಷ ರೂ. ನೀಡಲಾಗಿತ್ತು. ಈಗ ಈ ದಂಪತಿಗೆ ೧೧ ತಿಂಗಳ ಗಂಡು ಮಗು ಇದೆ.

ಒಂದು ವರ್ಷದ ಹಿಂದೆ ಜಿಮ್ ಆರಂಭಿಸಿದ್ದ ಸೈಯದ್ ಉಮರ್ ಅದರ ನಿರ್ವಹಣೆಗೆ ಹಣ ತರುವಂತೆ ಪತ್ನಿಗೆ ದೈಹಿಕ ಹಲ್ಲೆ ಮಾಡಿ ಕಿರುಕುಳ ನೀಡುತ್ತಿದ್ದರು. ಈ ಸಂಬಂಧ ಹಿರಿಯರ ಸಮ್ಮುಖದಲ್ಲಿ ನ್ಯಾಯ ಮಾಡಿ ಉಮರ್‌ಗೆ ಬುದ್ಧಿವಾದ ಹೇಳಿ, ಪತ್ನಿಯನ್ನು ಮನೆಗೆ ಕಳುಹಿಸಲಾಗಿತ್ತು. ಆ ನಂತರವೂ ಕಿರುಕುಳ ನೀಡುವುದನ್ನು ನಿಲ್ಲಿಸದ ಉಮರ್ ನ.೧೦ರಂದು ತಡರಾತ್ರಿ ಕೊಲೆ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನನ್ವಯ ಉದಯಗಿರಿ ಠಾಣೆಯಲ್ಲಿ ವರದಕ್ಷಿಣೆ ನಿಷೇಧ ಕಾಯಿದೆ ೧೯೬೨ ಮತ್ತು ಸೆಕ್ಷನ್ ೩೦೨ ಅಡಿ ಪ್ರಕರಣ ದಾಖಲಾಗಿದೆ.

andolanait

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

5 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

18 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

18 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

18 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

18 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

18 hours ago