ಜಿಲ್ಲೆಗಳು

ಜನಮನದಲ್ಲಿ ನೆಲೆಯಾದ ಜ್ಞಾನಯೋಗಿ : ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಂಡಿದ್ದೇ ಕೊನೆ ಕಾರ್ಯಕ್ರಮ

ಕೆ.ಬಿ.ರಮೇಶನಾಯಕ

ಮೈಸೂರು: ದೂರದ ವಿಜಯಪುರ(ಹಿಂದಿನ ಬಿಜಾಪುರ)ಜ್ಞಾನ ಯೋಗಾಶ್ರಮಕ್ಕೂ-ಕಪಿಲ ತಟದಲ್ಲಿರುವ ಸುತ್ತೂರು ಮಠಕ್ಕೂ ಬಿಡಿಸಲಾರದ ನಂಟು. ಶ್ರೀರಾಜೇಂದ್ರ ಸ್ವಾಮೀಜಿಗಳ ಕಾಲದಿಂದಲೂ ಸುತ್ತೂರು ಮಠದೊಂದಿಗೆ ಇದ್ದ ಉತ್ತಮ ಬಾಂಧವ್ಯ ಈತನಕ ಮುಂದುವರಿದ ಪರಿಣಾಮವಾಗಿ ೪೫ ದಿನಗಳ ಆಧ್ಯಾತ್ಮಿಕ ಶಿಬಿರ ಸೇರಿದಂತೆ ಒಂದು ವರ್ಷದಲ್ಲಿ ಹತ್ತಾರು ಕಾರ್ಯಕ್ರಮಗಳಲ್ಲಿ ಸಿದ್ಧೇಶ್ವರ ಸ್ವಾಮೀಜಿ ಪಾಲ್ಗೊಂಡಿದ್ದು ಇನ್ನು ನೆನಪು ಮಾತ್ರ.

೧೯೮೬ ರಿಂದಲೂ ಮೈಸೂರಿನಲ್ಲಿ ನಡೆದ ಹಲವಾರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಜೂ.೨೦ರಂದು ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಮಠದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದೇ ಕೊನೆಯ ಸಾರ್ವಜನಿಕ ಕಾರ್ಯಕ್ರಮವಾಗಿದೆ.

೧೯೯೬ರಲ್ಲಿ ಮೊದಲ ಪ್ರವಚನ: ಜೆಎಸ್‌ಎಸ್ ಆಸ್ಪತ್ರೆಯ ಹಳೆಯ ಕಟ್ಟಡದಲ್ಲಿ ೧೯೯೬ರಲ್ಲಿ ಮೊದಲ ಬಾರಿಗೆ ಆಯೋಜಿಸಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಆಧ್ಯಾತ್ಮಿಕತೆ ಕುರಿತು ಉಪನ್ಯಾಸ ನೀಡಿದ್ದರು. ಅಲ್ಲಿಂದ ಶುರುವಾದ ಇವರ ಪ್ರವಚನ ಯಾತ್ರೆಯು ಸುತ್ತೂರು ಮಠ, ಊಟಿಯ ಜೆಎಸ್‌ಎಸ್ ಫಾರ್ಮಾಸಿ ಕಾಲೇಜು, ಜೆ.ಪಿ.ನಗರ ಪಬ್ಲಿಕ್ ಶಾಲೆ, ಎಸ್‌ಜೆಸಿಇ ಕ್ಯಾಂಪಸ್, ಗುಂಡ್ಲುಪೇಟೆಯಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಪ್ರತಿ ವರ್ಷ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಆಯೋಜಿಸುತ್ತಿದ್ದ ಶಿಬಿರದಲ್ಲಿ ಪಾಲ್ಗೊಳ್ಳಲು ಬಂದಾಗ ಸುಮಾರು ೫೦ರಿಂದ ೬೦ ದಿನಗಳ ಕಾಲ ಉಳಿಯುತ್ತಿದ್ದರು. ನಿತ್ಯ ಪ್ರವಚನ ನೀಡುತ್ತಿದ್ದರೂ ಕೂಡ ಶನಿವಾರ ಮತ್ತು ಭಾನುವಾರ ಆಂಗ್ಲಭಾಷೆಯಲ್ಲೂ ಉಪನ್ಯಾಸ ನೀಡಿ ಎಲ್ಲರನ್ನೂ ಮೂಕವಿಸ್ಮಿತರನ್ನಾಗಿಸುತ್ತಿದ್ದರು.

ಮೋದಿ ಜತೆ ಕೊನೆಯ ಕಾರ್ಯಕ್ರಮ: ರಾಷ್ಟ್ರಪತಿ, ಪ್ರಧಾನಿ, ರಾಜ್ಯಪಾಲರು,ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿದ್ದ ಹಲವು ಕಾರ್ಯಕ್ರಮಗಳಲ್ಲಿ ಸಾನ್ನಿಧ್ಯವಹಿಸಲು ಆಗಮಿಸುತ್ತಿದ್ದ ಶ್ರೀಗಳು ಜೂ.೨೦ರಂದು ನರೇಂದ್ರ ಮೋದಿ ಅವರೊಂದಿಗಿನ ವೇದಿಕೆ ಕಾರ್ಯಕ್ರಮವೇ ಕೊನೆಯಾಗಿದೆ. ಮೋದಿ ಅವರು ಶ್ರೀಗಳಿಗೆ ಎರಡು ಕೈಗಳನ್ನು ಜೋಡಿಸಿ ನಮಿಸಿದಾಗ ಅಷ್ಟೇ ಕೃತಜ್ಞತೆಯಿಂದ ಕೈಮುಗಿದು ಹಾರೈಸಿದ್ದರು. ಈ ಕಾರ್ಯಕ್ರಮ ಮುಗಿಸಿ ವಾಪಸ್ ಆಶ್ರಮಕ್ಕೆ ತೆರಳಿದ್ದ ಶ್ರೀಗಳು ಎಡವಿ ಬಿದ್ದಿದ್ದರಿಂದ ಕಾಲಿಗೆ ಸಣ್ಣ ಗಾಯವಾಗಿತ್ತು. ನಂತರ ಅವರು ಆಶ್ರಮದಲ್ಲೇ ಹೆಚ್ಚು ಕಾಲ ಕಳೆಯುತ್ತಾ ಹೊರಗಿನ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು.ಇದರಿಂದಾಗಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ೨೦ ದಿನಗಳಿಂದ ಮೂರು ಬಾರಿ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿ ಬಂದಿದ್ದರು ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್ ನೆನಪಿಸಿಕೊಳ್ಳುತ್ತಾರೆ.


ಪ್ರವಚನಕ್ಕಾಗಿ ಕಾಯುತ್ತಿದ್ದ ಜನರು

ಸುತ್ತೂರು ಶ್ರೀ ಕ್ಷೇತ್ರದಲ್ಲಿ ಆಯೋಜಿಸುತ್ತಿದ್ದ ಶಿಬಿರದಲ್ಲಿ ಶ್ರೀಸಿದ್ಧೇಶ್ವರ ಸ್ವಾಮೀಜಿ ಪ್ರವಚನ ನೀಡುತ್ತಿದ್ದರಿಂದ ಮುಂಜಾನೆಯೇ ಜನರು ಕಾದು ಕುಳಿತುಕೊಳ್ಳುತ್ತಿದ್ದರು. ಮುಂಜಾನೆ ನಾಲ್ಕು ಗಂಟೆಗೆ ಮೈಸೂರಿನಿಂದ ಜೆಎಸ್‌ಎಸ್ ಕಾಲೇಜು ಬಸ್,ಖಾಸಗಿ ವಾಹನಗಳಿಂದ ಸುತ್ತೂರು ತಲುಪಿ ಒಂದು ಗಂಟೆ ಕಾಲ ಅವರ ಮಾತುಗಳನ್ನು ಆಲಿಸುತ್ತಿದ್ದರು. ವಿಶೇಷವಾಗಿ ಸಾರ್ವಜನಿಕರು ಅವರ ಮಾತುಗಳಿಂದ ಮನಸ್ಸು ಬದಲಾಗಿ ಇತರರನ್ನು ಕರೆತರುತ್ತಿದ್ದರು. ಇದರಿಂದಾಗಿ ಶಿಬಿರದ ಕೊನೆಯ ದಿನಗಳಲ್ಲಿ ನಿರೀಕ್ಷೆಗೂ ಮೀರಿದ ಜನರು ಅವರ ಪ್ರವಚನ ಕೇಳಲು ಬರುತ್ತಿದ್ದರೆಂದು ತೆರಕಣಾಂಬಿ ಜೆಎಸ್‌ಎಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರೊಬ್ಬರು ಹೇಳಿದರು.

 

 

 

 

andolanait

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

53 mins ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

56 mins ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

1 hour ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

1 hour ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

1 hour ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

1 hour ago