ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ
ಮೈಸೂರು: ಬಲವಂತ ಭೂಸ್ವಾಧೀನ ನಿಲ್ಲಬೇಕು, ಉದ್ಯೋಗ ಖಾತ್ರಿ ಕೂಲಿಯನ್ನು ಹೆಚ್ಚಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.
ಶನಿವಾರ ನಗರದ ದೊಡ್ಡ ಗಡಿಯಾರ ವೃತ್ತದ ಬಳಿಯಿರುವ ಗಾಂಧಿ ಪ್ರತಿಮೆ ಮುಂದೆ ಜಮಾವಣೆಗೊಂಡ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.ರೈತರು, ಕೂಲಿಕಾರರು, ಮಹಿಳೆಯರ ಖಾಸಗಿ ಸಾಲವೂ ಸೇರಿದಂತೆ ಎಲ್ಲ ಸಾಲವನ್ನೂ ಮನ್ನಾ ಮಾಡಬೇಕು ಮತ್ತು ಋಣ ಮುಕ್ತ ಕಾ್ಂದೆು ಜಾರಿಗೊಳಿಸಬೇಕು. ರೈತರ ಬೆಳೆಗೆ ಬೆಂಬಲ ಬೆಲೆ ಖಾತರಿ ಕಾ್ಂದೆು ಜಾರಿಗೊಳಿಸಬೇಕು. ನಿವೇಶನ ಹಾಗೂ ಮನೆ ರಹಿತ ಬಡವರಿಗೆ ಹಿತ್ತಲು ಹಾಗೂ ನಿವೇಶನ ಸಹಿತ ಪಕ್ಕಾ ಮನೆ ಒದಗಿಸಬೇಕು ಎಂದು ಆಗ್ರಹಿಸಿದರು.
ದಲಿತರು ಮತ್ತು ಉಳುವವರಿಗೆ ಭೂಮಿ ನೀಡುವಂತೆ ಭೂ ಸುಧಾರಣಾ ಕಾ್ಂದೆು ಜಾರಿಯಾಗಬೇಕು. ಬಗರ್ ಹುಕುಂ ಹಾಗೂ ಅರಣ್ಯ ಭೂಮಿ ಸಾಗುವಳಿದಾರರಾದ ಬಡವರಿಗೆ ಹಕ್ಕುಪತ್ರ ನೀಡಬೇಕು. ಭೂ ಸ್ವಾಧೀನ ಮಾಡಿ ಕೈಗಾರಿಕೆ ಸ್ಥಾಪಿಸದ ಜಮೀನುಗಳನ್ನು ರೈತರಿಗೆ ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು. ಪ್ರತಿ ಭೂ ಸಂತ್ರಸ್ತರಿಗೆ ಮಾಸಿಕ ತಲಾ ೨೦ ಸಾವಿರ ರೂ. ಉದ್ಯೋಗ ಪರಿಹಾರ ಒದಗಿಸಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ಕೂಲಿಯನ್ನು ೪೭೫ ರೂ. ಗಳಿಗೆ ಹೆಚ್ಚಿಸಿ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ಜಿಲ್ಲಾ ಸಮಿತಿ ಸದಸ್ಯ ಕೆ.ಬಸವರಾಜ್, ಎನ್.ವಿಜಯ್ ಕುಮಾರ್, ಜಿ.ಜಯರಾಂ, ಸ್ಥಳೀಯ ಸಮಿತಿ ಕಾರ್ಯದರ್ಶಿ ಜಿ.ರಾಜೇಂದ್ರ, ಸದಸ್ಯರಾದ ಅಣ್ಣಪ್ಪ, ಸುಬ್ರಹ್ಮಣ್ಯ, ಬಸವಯ್ಯ, ಕೃಷ್ಣ ಮೂರ್ತಿ, ಬಲರಾಂ ವಿದ್ಯಾರ್ಥಿ ಮುಖಂಡರಾದ ವಿಜಯ್, ಕವಿತ, ಶಿವು, ಯತೀಶ್, ದರ್ಶನ್, ರೈತ ಮುಖಂಡರಾದ ಚಂದ್ರಶೇಖರ್, ಸಿದ್ದಯ್ಯ, ಶಾಕುಂತಲ, ಈಶ್ವರ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.…
ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್ಮಹಲ್ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…
ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…