ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ
ಮೈಸೂರು: ಬಲವಂತ ಭೂಸ್ವಾಧೀನ ನಿಲ್ಲಬೇಕು, ಉದ್ಯೋಗ ಖಾತ್ರಿ ಕೂಲಿಯನ್ನು ಹೆಚ್ಚಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.
ಶನಿವಾರ ನಗರದ ದೊಡ್ಡ ಗಡಿಯಾರ ವೃತ್ತದ ಬಳಿಯಿರುವ ಗಾಂಧಿ ಪ್ರತಿಮೆ ಮುಂದೆ ಜಮಾವಣೆಗೊಂಡ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.ರೈತರು, ಕೂಲಿಕಾರರು, ಮಹಿಳೆಯರ ಖಾಸಗಿ ಸಾಲವೂ ಸೇರಿದಂತೆ ಎಲ್ಲ ಸಾಲವನ್ನೂ ಮನ್ನಾ ಮಾಡಬೇಕು ಮತ್ತು ಋಣ ಮುಕ್ತ ಕಾ್ಂದೆು ಜಾರಿಗೊಳಿಸಬೇಕು. ರೈತರ ಬೆಳೆಗೆ ಬೆಂಬಲ ಬೆಲೆ ಖಾತರಿ ಕಾ್ಂದೆು ಜಾರಿಗೊಳಿಸಬೇಕು. ನಿವೇಶನ ಹಾಗೂ ಮನೆ ರಹಿತ ಬಡವರಿಗೆ ಹಿತ್ತಲು ಹಾಗೂ ನಿವೇಶನ ಸಹಿತ ಪಕ್ಕಾ ಮನೆ ಒದಗಿಸಬೇಕು ಎಂದು ಆಗ್ರಹಿಸಿದರು.
ದಲಿತರು ಮತ್ತು ಉಳುವವರಿಗೆ ಭೂಮಿ ನೀಡುವಂತೆ ಭೂ ಸುಧಾರಣಾ ಕಾ್ಂದೆು ಜಾರಿಯಾಗಬೇಕು. ಬಗರ್ ಹುಕುಂ ಹಾಗೂ ಅರಣ್ಯ ಭೂಮಿ ಸಾಗುವಳಿದಾರರಾದ ಬಡವರಿಗೆ ಹಕ್ಕುಪತ್ರ ನೀಡಬೇಕು. ಭೂ ಸ್ವಾಧೀನ ಮಾಡಿ ಕೈಗಾರಿಕೆ ಸ್ಥಾಪಿಸದ ಜಮೀನುಗಳನ್ನು ರೈತರಿಗೆ ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು. ಪ್ರತಿ ಭೂ ಸಂತ್ರಸ್ತರಿಗೆ ಮಾಸಿಕ ತಲಾ ೨೦ ಸಾವಿರ ರೂ. ಉದ್ಯೋಗ ಪರಿಹಾರ ಒದಗಿಸಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ಕೂಲಿಯನ್ನು ೪೭೫ ರೂ. ಗಳಿಗೆ ಹೆಚ್ಚಿಸಿ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ಜಿಲ್ಲಾ ಸಮಿತಿ ಸದಸ್ಯ ಕೆ.ಬಸವರಾಜ್, ಎನ್.ವಿಜಯ್ ಕುಮಾರ್, ಜಿ.ಜಯರಾಂ, ಸ್ಥಳೀಯ ಸಮಿತಿ ಕಾರ್ಯದರ್ಶಿ ಜಿ.ರಾಜೇಂದ್ರ, ಸದಸ್ಯರಾದ ಅಣ್ಣಪ್ಪ, ಸುಬ್ರಹ್ಮಣ್ಯ, ಬಸವಯ್ಯ, ಕೃಷ್ಣ ಮೂರ್ತಿ, ಬಲರಾಂ ವಿದ್ಯಾರ್ಥಿ ಮುಖಂಡರಾದ ವಿಜಯ್, ಕವಿತ, ಶಿವು, ಯತೀಶ್, ದರ್ಶನ್, ರೈತ ಮುಖಂಡರಾದ ಚಂದ್ರಶೇಖರ್, ಸಿದ್ದಯ್ಯ, ಶಾಕುಂತಲ, ಈಶ್ವರ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…