ಜಿಲ್ಲೆಗಳು

ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಒತ್ತಾಯ

ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ 

ಮೈಸೂರು: ಬಲವಂತ ಭೂಸ್ವಾಧೀನ ನಿಲ್ಲಬೇಕು, ಉದ್ಯೋಗ ಖಾತ್ರಿ ಕೂಲಿಯನ್ನು ಹೆಚ್ಚಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.

ಶನಿವಾರ ನಗರದ ದೊಡ್ಡ ಗಡಿಯಾರ ವೃತ್ತದ ಬಳಿಯಿರುವ ಗಾಂಧಿ ಪ್ರತಿಮೆ ಮುಂದೆ ಜಮಾವಣೆಗೊಂಡ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ  ಘೋಷಣೆಗಳನ್ನು ಕೂಗಿದರು.ರೈತರು, ಕೂಲಿಕಾರರು, ಮಹಿಳೆಯರ ಖಾಸಗಿ ಸಾಲವೂ ಸೇರಿದಂತೆ ಎಲ್ಲ ಸಾಲವನ್ನೂ ಮನ್ನಾ ಮಾಡಬೇಕು ಮತ್ತು ಋಣ ಮುಕ್ತ ಕಾ್ಂದೆು ಜಾರಿಗೊಳಿಸಬೇಕು. ರೈತರ ಬೆಳೆಗೆ ಬೆಂಬಲ ಬೆಲೆ ಖಾತರಿ ಕಾ್ಂದೆು ಜಾರಿಗೊಳಿಸಬೇಕು. ನಿವೇಶನ ಹಾಗೂ ಮನೆ ರಹಿತ ಬಡವರಿಗೆ ಹಿತ್ತಲು ಹಾಗೂ ನಿವೇಶನ ಸಹಿತ ಪಕ್ಕಾ ಮನೆ ಒದಗಿಸಬೇಕು ಎಂದು ಆಗ್ರಹಿಸಿದರು.

ದಲಿತರು ಮತ್ತು ಉಳುವವರಿಗೆ ಭೂಮಿ ನೀಡುವಂತೆ ಭೂ ಸುಧಾರಣಾ ಕಾ್ಂದೆು ಜಾರಿಯಾಗಬೇಕು. ಬಗರ್ ಹುಕುಂ ಹಾಗೂ ಅರಣ್ಯ ಭೂಮಿ ಸಾಗುವಳಿದಾರರಾದ ಬಡವರಿಗೆ ಹಕ್ಕುಪತ್ರ ನೀಡಬೇಕು. ಭೂ ಸ್ವಾಧೀನ ಮಾಡಿ ಕೈಗಾರಿಕೆ ಸ್ಥಾಪಿಸದ ಜಮೀನುಗಳನ್ನು ರೈತರಿಗೆ ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು. ಪ್ರತಿ ಭೂ ಸಂತ್ರಸ್ತರಿಗೆ ಮಾಸಿಕ ತಲಾ ೨೦ ಸಾವಿರ ರೂ. ಉದ್ಯೋಗ ಪರಿಹಾರ ಒದಗಿಸಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ಕೂಲಿಯನ್ನು ೪೭೫ ರೂ. ಗಳಿಗೆ ಹೆಚ್ಚಿಸಿ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.  ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ಜಿಲ್ಲಾ ಸಮಿತಿ ಸದಸ್ಯ ಕೆ.ಬಸವರಾಜ್, ಎನ್.ವಿಜಯ್ ಕುಮಾರ್, ಜಿ.ಜಯರಾಂ, ಸ್ಥಳೀಯ ಸಮಿತಿ ಕಾರ್ಯದರ್ಶಿ ಜಿ.ರಾಜೇಂದ್ರ, ಸದಸ್ಯರಾದ ಅಣ್ಣಪ್ಪ, ಸುಬ್ರಹ್ಮಣ್ಯ, ಬಸವಯ್ಯ, ಕೃಷ್ಣ ಮೂರ್ತಿ, ಬಲರಾಂ ವಿದ್ಯಾರ್ಥಿ ಮುಖಂಡರಾದ ವಿಜಯ್, ಕವಿತ, ಶಿವು, ಯತೀಶ್, ದರ್ಶನ್, ರೈತ ಮುಖಂಡರಾದ ಚಂದ್ರಶೇಖರ್, ಸಿದ್ದಯ್ಯ, ಶಾಕುಂತಲ, ಈಶ್ವರ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

35 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

40 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

49 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago