ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ
ಮೈಸೂರು: ಬಲವಂತ ಭೂಸ್ವಾಧೀನ ನಿಲ್ಲಬೇಕು, ಉದ್ಯೋಗ ಖಾತ್ರಿ ಕೂಲಿಯನ್ನು ಹೆಚ್ಚಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.
ಶನಿವಾರ ನಗರದ ದೊಡ್ಡ ಗಡಿಯಾರ ವೃತ್ತದ ಬಳಿಯಿರುವ ಗಾಂಧಿ ಪ್ರತಿಮೆ ಮುಂದೆ ಜಮಾವಣೆಗೊಂಡ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.ರೈತರು, ಕೂಲಿಕಾರರು, ಮಹಿಳೆಯರ ಖಾಸಗಿ ಸಾಲವೂ ಸೇರಿದಂತೆ ಎಲ್ಲ ಸಾಲವನ್ನೂ ಮನ್ನಾ ಮಾಡಬೇಕು ಮತ್ತು ಋಣ ಮುಕ್ತ ಕಾ್ಂದೆು ಜಾರಿಗೊಳಿಸಬೇಕು. ರೈತರ ಬೆಳೆಗೆ ಬೆಂಬಲ ಬೆಲೆ ಖಾತರಿ ಕಾ್ಂದೆು ಜಾರಿಗೊಳಿಸಬೇಕು. ನಿವೇಶನ ಹಾಗೂ ಮನೆ ರಹಿತ ಬಡವರಿಗೆ ಹಿತ್ತಲು ಹಾಗೂ ನಿವೇಶನ ಸಹಿತ ಪಕ್ಕಾ ಮನೆ ಒದಗಿಸಬೇಕು ಎಂದು ಆಗ್ರಹಿಸಿದರು.
ದಲಿತರು ಮತ್ತು ಉಳುವವರಿಗೆ ಭೂಮಿ ನೀಡುವಂತೆ ಭೂ ಸುಧಾರಣಾ ಕಾ್ಂದೆು ಜಾರಿಯಾಗಬೇಕು. ಬಗರ್ ಹುಕುಂ ಹಾಗೂ ಅರಣ್ಯ ಭೂಮಿ ಸಾಗುವಳಿದಾರರಾದ ಬಡವರಿಗೆ ಹಕ್ಕುಪತ್ರ ನೀಡಬೇಕು. ಭೂ ಸ್ವಾಧೀನ ಮಾಡಿ ಕೈಗಾರಿಕೆ ಸ್ಥಾಪಿಸದ ಜಮೀನುಗಳನ್ನು ರೈತರಿಗೆ ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು. ಪ್ರತಿ ಭೂ ಸಂತ್ರಸ್ತರಿಗೆ ಮಾಸಿಕ ತಲಾ ೨೦ ಸಾವಿರ ರೂ. ಉದ್ಯೋಗ ಪರಿಹಾರ ಒದಗಿಸಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ಕೂಲಿಯನ್ನು ೪೭೫ ರೂ. ಗಳಿಗೆ ಹೆಚ್ಚಿಸಿ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ಜಿಲ್ಲಾ ಸಮಿತಿ ಸದಸ್ಯ ಕೆ.ಬಸವರಾಜ್, ಎನ್.ವಿಜಯ್ ಕುಮಾರ್, ಜಿ.ಜಯರಾಂ, ಸ್ಥಳೀಯ ಸಮಿತಿ ಕಾರ್ಯದರ್ಶಿ ಜಿ.ರಾಜೇಂದ್ರ, ಸದಸ್ಯರಾದ ಅಣ್ಣಪ್ಪ, ಸುಬ್ರಹ್ಮಣ್ಯ, ಬಸವಯ್ಯ, ಕೃಷ್ಣ ಮೂರ್ತಿ, ಬಲರಾಂ ವಿದ್ಯಾರ್ಥಿ ಮುಖಂಡರಾದ ವಿಜಯ್, ಕವಿತ, ಶಿವು, ಯತೀಶ್, ದರ್ಶನ್, ರೈತ ಮುಖಂಡರಾದ ಚಂದ್ರಶೇಖರ್, ಸಿದ್ದಯ್ಯ, ಶಾಕುಂತಲ, ಈಶ್ವರ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…