ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ
ಮೈಸೂರು: ಬಲವಂತ ಭೂಸ್ವಾಧೀನ ನಿಲ್ಲಬೇಕು, ಉದ್ಯೋಗ ಖಾತ್ರಿ ಕೂಲಿಯನ್ನು ಹೆಚ್ಚಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.
ಶನಿವಾರ ನಗರದ ದೊಡ್ಡ ಗಡಿಯಾರ ವೃತ್ತದ ಬಳಿಯಿರುವ ಗಾಂಧಿ ಪ್ರತಿಮೆ ಮುಂದೆ ಜಮಾವಣೆಗೊಂಡ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.ರೈತರು, ಕೂಲಿಕಾರರು, ಮಹಿಳೆಯರ ಖಾಸಗಿ ಸಾಲವೂ ಸೇರಿದಂತೆ ಎಲ್ಲ ಸಾಲವನ್ನೂ ಮನ್ನಾ ಮಾಡಬೇಕು ಮತ್ತು ಋಣ ಮುಕ್ತ ಕಾ್ಂದೆು ಜಾರಿಗೊಳಿಸಬೇಕು. ರೈತರ ಬೆಳೆಗೆ ಬೆಂಬಲ ಬೆಲೆ ಖಾತರಿ ಕಾ್ಂದೆು ಜಾರಿಗೊಳಿಸಬೇಕು. ನಿವೇಶನ ಹಾಗೂ ಮನೆ ರಹಿತ ಬಡವರಿಗೆ ಹಿತ್ತಲು ಹಾಗೂ ನಿವೇಶನ ಸಹಿತ ಪಕ್ಕಾ ಮನೆ ಒದಗಿಸಬೇಕು ಎಂದು ಆಗ್ರಹಿಸಿದರು.
ದಲಿತರು ಮತ್ತು ಉಳುವವರಿಗೆ ಭೂಮಿ ನೀಡುವಂತೆ ಭೂ ಸುಧಾರಣಾ ಕಾ್ಂದೆು ಜಾರಿಯಾಗಬೇಕು. ಬಗರ್ ಹುಕುಂ ಹಾಗೂ ಅರಣ್ಯ ಭೂಮಿ ಸಾಗುವಳಿದಾರರಾದ ಬಡವರಿಗೆ ಹಕ್ಕುಪತ್ರ ನೀಡಬೇಕು. ಭೂ ಸ್ವಾಧೀನ ಮಾಡಿ ಕೈಗಾರಿಕೆ ಸ್ಥಾಪಿಸದ ಜಮೀನುಗಳನ್ನು ರೈತರಿಗೆ ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು. ಪ್ರತಿ ಭೂ ಸಂತ್ರಸ್ತರಿಗೆ ಮಾಸಿಕ ತಲಾ ೨೦ ಸಾವಿರ ರೂ. ಉದ್ಯೋಗ ಪರಿಹಾರ ಒದಗಿಸಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ಕೂಲಿಯನ್ನು ೪೭೫ ರೂ. ಗಳಿಗೆ ಹೆಚ್ಚಿಸಿ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ಜಿಲ್ಲಾ ಸಮಿತಿ ಸದಸ್ಯ ಕೆ.ಬಸವರಾಜ್, ಎನ್.ವಿಜಯ್ ಕುಮಾರ್, ಜಿ.ಜಯರಾಂ, ಸ್ಥಳೀಯ ಸಮಿತಿ ಕಾರ್ಯದರ್ಶಿ ಜಿ.ರಾಜೇಂದ್ರ, ಸದಸ್ಯರಾದ ಅಣ್ಣಪ್ಪ, ಸುಬ್ರಹ್ಮಣ್ಯ, ಬಸವಯ್ಯ, ಕೃಷ್ಣ ಮೂರ್ತಿ, ಬಲರಾಂ ವಿದ್ಯಾರ್ಥಿ ಮುಖಂಡರಾದ ವಿಜಯ್, ಕವಿತ, ಶಿವು, ಯತೀಶ್, ದರ್ಶನ್, ರೈತ ಮುಖಂಡರಾದ ಚಂದ್ರಶೇಖರ್, ಸಿದ್ದಯ್ಯ, ಶಾಕುಂತಲ, ಈಶ್ವರ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…