ಜಿಲ್ಲೆಗಳು

ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಒತ್ತಾಯ

ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ 

ಮೈಸೂರು: ಬಲವಂತ ಭೂಸ್ವಾಧೀನ ನಿಲ್ಲಬೇಕು, ಉದ್ಯೋಗ ಖಾತ್ರಿ ಕೂಲಿಯನ್ನು ಹೆಚ್ಚಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.

ಶನಿವಾರ ನಗರದ ದೊಡ್ಡ ಗಡಿಯಾರ ವೃತ್ತದ ಬಳಿಯಿರುವ ಗಾಂಧಿ ಪ್ರತಿಮೆ ಮುಂದೆ ಜಮಾವಣೆಗೊಂಡ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ  ಘೋಷಣೆಗಳನ್ನು ಕೂಗಿದರು.ರೈತರು, ಕೂಲಿಕಾರರು, ಮಹಿಳೆಯರ ಖಾಸಗಿ ಸಾಲವೂ ಸೇರಿದಂತೆ ಎಲ್ಲ ಸಾಲವನ್ನೂ ಮನ್ನಾ ಮಾಡಬೇಕು ಮತ್ತು ಋಣ ಮುಕ್ತ ಕಾ್ಂದೆು ಜಾರಿಗೊಳಿಸಬೇಕು. ರೈತರ ಬೆಳೆಗೆ ಬೆಂಬಲ ಬೆಲೆ ಖಾತರಿ ಕಾ್ಂದೆು ಜಾರಿಗೊಳಿಸಬೇಕು. ನಿವೇಶನ ಹಾಗೂ ಮನೆ ರಹಿತ ಬಡವರಿಗೆ ಹಿತ್ತಲು ಹಾಗೂ ನಿವೇಶನ ಸಹಿತ ಪಕ್ಕಾ ಮನೆ ಒದಗಿಸಬೇಕು ಎಂದು ಆಗ್ರಹಿಸಿದರು.

ದಲಿತರು ಮತ್ತು ಉಳುವವರಿಗೆ ಭೂಮಿ ನೀಡುವಂತೆ ಭೂ ಸುಧಾರಣಾ ಕಾ್ಂದೆು ಜಾರಿಯಾಗಬೇಕು. ಬಗರ್ ಹುಕುಂ ಹಾಗೂ ಅರಣ್ಯ ಭೂಮಿ ಸಾಗುವಳಿದಾರರಾದ ಬಡವರಿಗೆ ಹಕ್ಕುಪತ್ರ ನೀಡಬೇಕು. ಭೂ ಸ್ವಾಧೀನ ಮಾಡಿ ಕೈಗಾರಿಕೆ ಸ್ಥಾಪಿಸದ ಜಮೀನುಗಳನ್ನು ರೈತರಿಗೆ ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು. ಪ್ರತಿ ಭೂ ಸಂತ್ರಸ್ತರಿಗೆ ಮಾಸಿಕ ತಲಾ ೨೦ ಸಾವಿರ ರೂ. ಉದ್ಯೋಗ ಪರಿಹಾರ ಒದಗಿಸಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಿ ಕೂಲಿಯನ್ನು ೪೭೫ ರೂ. ಗಳಿಗೆ ಹೆಚ್ಚಿಸಿ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.  ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ್ಯ, ಜಿಲ್ಲಾ ಸಮಿತಿ ಸದಸ್ಯ ಕೆ.ಬಸವರಾಜ್, ಎನ್.ವಿಜಯ್ ಕುಮಾರ್, ಜಿ.ಜಯರಾಂ, ಸ್ಥಳೀಯ ಸಮಿತಿ ಕಾರ್ಯದರ್ಶಿ ಜಿ.ರಾಜೇಂದ್ರ, ಸದಸ್ಯರಾದ ಅಣ್ಣಪ್ಪ, ಸುಬ್ರಹ್ಮಣ್ಯ, ಬಸವಯ್ಯ, ಕೃಷ್ಣ ಮೂರ್ತಿ, ಬಲರಾಂ ವಿದ್ಯಾರ್ಥಿ ಮುಖಂಡರಾದ ವಿಜಯ್, ಕವಿತ, ಶಿವು, ಯತೀಶ್, ದರ್ಶನ್, ರೈತ ಮುಖಂಡರಾದ ಚಂದ್ರಶೇಖರ್, ಸಿದ್ದಯ್ಯ, ಶಾಕುಂತಲ, ಈಶ್ವರ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

2 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

4 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

12 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

14 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

15 hours ago