ಜಿಲ್ಲೆಗಳು

ಜಿಪಿ ನಗರ ಲಯನ್ಸ್ ಕ್ಲಬ್ ನಿಂದ ಸಾಧಕರಿಗೆ ಸನ್ಮಾನ

ಮೈಸೂರು: ದೇಶದಲ್ಲಿ‌ ಭ್ರಷ್ಟಾಚಾರ ಹೆಚ್ಚಿರುವ ಕಾರಣ, ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ದೇಶದಲ್ಲಿ ಸಾಕಷ್ಟು ಸಂಪತ್ತಿದ್ದರೂ, ಪರಸ್ಪರ ಕಚ್ಚಾಟದಿಂದ ಸರಿಯಾಗಿ ಬಳಕೆಯಾಗುತ್ತಿಲ್ಲ ಎಂದು ಲಯನ್ಸ್‌ ಕ್ಲಬ್‌ನ ಪಿಎಂಜೆಎಫ್‌ ಡಾ.ನಾಗರಾಜು.ವಿ.ಬೈರಿ ತಿಳಿಸಿದರು.

ನಗರದ ದಿ‌ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಂಸ್ಥೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಲಯನ್ಸ್‌ ಸಂಸ್ಥೆಗಳ ಒಕ್ಕೂಟದ ಮೈಸೂರಿನ ಲಯನ್ಸ್ ಕ್ಲಬ್ ಜೆ.ಪಿ.ನಗರ‌ ಘಟಕ ಹಾಗೂ ಎಸ್ಎಂಪಿ‌ ಡೆವಲಪರ್ಸ್ ಜೆ.ಪಿ.ನಗರ ಘಟಕದಿಂದ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸರ್ವಪಲ್ಲಿ ರಾಧಾಕೃಷ್ಣ ಅವರು ಮಹಾರಾಜ ಕಾಲೇಜಿನಲ್ಲಿ ತತ್ವಶಾಸ್ತ್ರದ ಉಪನ್ಯಾಸಕರಾಗಿ ಬಂದಿದ್ದ ವೇಳೆ ಆ ವಿಷಯ ಕಲಿಯಲು ಯಾರು ಬರುವುದಿಲ್ಲ ಎಂದು ಅಪಹಾಸ್ಯ ಮಾಡಿದ್ದರು. ಇಲ್ಲಿಂದ ಬೀಳ್ಕೊಡುವ ವೇಳೆ, ಸಾರೋಟಿನಲ್ಲಿ ಅವರನ್ನು ಕೂರಿಸಿ ವಿದ್ಯಾರ್ಥಿಗಳೇ ಅದನ್ನು ಎಳೆದೊಯ್ದು, ರೈಲು ನಿಲ್ದಾಣಕ್ಕೆ ಬಿಟ್ಟುಬಂದಿದ್ದರು. ಅಷ್ಟರ ಮಟ್ಟಿಗೆ, ಎಲ್ಲ ವರ್ಗದ ವಿದ್ಯಾರ್ಥಿಗಳಿಂದ ಜನಪ್ರಿಯತೆ ಪಡೆದುಕೊಂಡಿದ್ದರು.

ಸರ್‌ಎಂವಿ ವಿಶ್ವೇಶ್ವರಯ್ಯ ಅವರು ಭಾರತದ ಜೊತೆಗೆ, ಪಾಕಿಸ್ತಾನ, ನೇಪಾಳದಲ್ಲೂ ಅನೇಕ ಜನಪರ ಕಾರ್ಯ ಜಾರಿಗೊಳಿಸಿ, ಅಲ್ಲಿನ ಜನರ ಗೌರವಕ್ಕೆ ಪಾತ್ರರಾಗಿದ್ದರು. ಎಲ್ಲರೂ ಪ್ರಾತ ಸ್ಮರಣೀಯರು’ ಎಂದು ನೆನಪಿಸಿಕೊಂಡರು.

ಕೆಎಎಸ್ ಪರೀಕ್ಷೆಯಲ್ಲಿ ಮೂರನೇ ರ‍್ಯಾಂಕ್‌ ಪಡೆದ ಕಾವ್ಯಾ, ಶಿಕ್ಷಕರಾದ ಕೆಂಪಣ್ಣ, ಗುರುಪಾದಪ್ಪ, ಶಾರದಮ್ಮ, ಆಶಾರಾಣಿ, ಇಂಜಿನಿಯರ್ ಗಳಾದ ಷಣ್ಮಖಪ್ಪ, ವಿ.ಸತ್ಯನಾರಾಯಣ, ಪ್ರಶಾಂತ ಕುಮಾರ್, ವೈದ್ಯರಾದ ಡಾ.ಯೋಗೇಶ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ತೋಂಟದಾರ್ಯ, ರೇಣುಕಪ್ಪ, ಸರೋಜಮ್ಮ, ಮಂಜಯ್ಯ ದಂಪತಿಯನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಂತೀಯ 9ರ ಅಧ್ಯಕ್ಷೆ ಲಯನ್ಸ್‌ ರತ್ನಮ್ಮ, ಜೆ.ಪಿ.ನಗರ ವಾರ್ಡ್‌ನ ನಗರ ಪಾಲಿಕೆ ಸದಸ್ಯೆ ಶಾರದಮ್ಮ ಈಶ್ವರ್‌, ಜೆ.ಪಿ.ನಗರ ಲಯನ್ಸ್‌ ಕ್ಲಬ್‌ನ ಕಾರ್ಯದರ್ಶಿ ಯು.ಎಸ್‌.ಸದಾಶಿವ, ಜೆ.ಪಿ.ನಗರ ಲಯನ್ಸ್‌ ಕ್ಲಬ್‌ನ ಖಜಾಂಚಿ ಬಿ.ಮಲ್ಲಿಕಾರ್ಜುನಪ್ಪ, ಎಸ್‌ಎಂಪಿ ಡೆವಲಪರ್ಸ್‌ನ ಮಾಲೀಕ ಎಸ್‌.ಎಂ.ಶಿವಪ್ರಕಾಶ್‌ ಇದ್ದರು..

andolanait

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

2 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

2 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

2 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

3 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

3 hours ago