ಜಿಲ್ಲೆಗಳು

ಅರ್ಥಪೂರ್ಣವಾಗಿ ಜಯಂತಿಗಳ ಆಚರಣೆ ಮಾಡಲಾಗುವುದು : ಅಪರ ಜಿಲ್ಲಾಧಿಕಾರಿ ಆರ್. ಲೋಕನಾಥ್

ಮೈಸೂರು: ಜಿಲ್ಲಾಮಟ್ಟದ ವಿಶ್ವ ಮಾನವ ದಿನಾಚರಣೆ ಹಾಗೂ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಆರ್ ಲೋಕನಾಥ್ ಅವರು ತಿಳಿಸಿದರು.

ಇಂದು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಡಿಸೆಂಬರ್ 29 ರಂದು ಬೆಳಿಗ್ಗೆ 11:30ಕ್ಕೆ ವಿಶ್ವಮಾನವ ದಿನಾಚರಣೆಯನ್ನು ಆಚರಿಸಲಾಗುವುದು.

2024 ರ ಜನವರಿ 1 ರಂದು ಬೆಳಗ್ಗೆ 11:30ಕ್ಕೆ, ಕರ್ನಾಟಕ ಕಲಾಮಂದಿರದ ಆವರಣದಲ್ಲಿರುವ ಕಿರುರಂಗ ಮಂದಿರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲಾಡಳಿತದ ಶಿಷ್ಟಾಚಾರದಂತೆ ಕಾರ್ಯಕ್ರಮವನ್ನು ಆಯೋಜಿಸಲಿದ್ದು, ಜಯಂತಿ ಕಾರ್ಯಕ್ರಮ ನಡೆಯುವ ಸ್ಥಳದ ಸ್ವಚ್ಛತೆ, ತಳಿರು ತೋರಣ, ಕುಡಿಯುವ ನೀರಿನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವ್ಯವಸ್ಥೆ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಸಮಿತಿಯವರು ಅಮರಶಿಲ್ಪಿ ಜಕಣಾಚಾರಿಯವರ ಹೆಸರಿನಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಸಾಧಕರಿಗೆ ನೀಡುವಂತೆ ಮನವಿ ಮಾಡಿದರು. ಈ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸೋಮಶೇಖರ್ ಜಿ.ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಜೆ. ಗೋವಿಂದರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್, ಕನ್ನಡ ಚಳುವಳಿ ನಾಯಕರಾದ ತಾಯೂರು ವಿಠಲ ಮೂರ್ತಿ, ಮೋಹನ್ ಕುಮಾರ್ ಗೌಡ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

andolanait

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

23 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago