ಮುರುಕನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಅವಘಡ
ಕೆ.ಆರ್.ಪೇಟೆ: ಸಾರಿಗೆ ಬಸ್ಸೊಂದು ಶುಕ್ರವಾರ ಬೆಳಿಗ್ಗೆ ೬ ಗಂಟೆಯ ವೇಳೆ ತಾಲ್ಲೂಕಿನ ಮುರುಕನಹಳ್ಳಿ ಸೇತುವೆಯ ತಿರುವಿನಲ್ಲಿ ಮಗುಚಿ ಬಿದ್ದು ಸುಮಾರು ೩೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಸಂಭವಿಸಿದೆ.
ಕೆ.ಆರ್.ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮುರುಕನಹಳ್ಳಿ ಗ್ರಾಮದ ಬಳಿ ಸಾರುಗೆ ಬಸ್(ಕೆಎ-೦೯ ಇ-೫೨೮೨) ಗದಗದಿಂದ-ಮೈಸೂರಿನ ಕಡೆಗೆ ಹೋಗುತ್ತಿದ್ದಾಗ ಮರುಕನಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು, ಚಾಲಕ, ನಿರ್ವಾಹಕ ಸೇರಿದಂತೆ ಸುಮಾರು ೩೦ ಮಂದಿಗೆ ಸಣ್ಣಪುಟ್ಡ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಸ್ವರೂಪದ ಗಾಯಗಳಾಗಿಲ್ಲ. ಗಾಯಗೊಂಡವರನ್ನು ಕೆ.ಆರ್.ಪೇಟೆಯ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯ ವಿಚಾರ ತಿಳಿದ ತಕ್ಷಣ ಗ್ರಾಮಾಂತರ ಠಾಣೆಯ ಎಸ್ಐ ಪ್ರಮೋದ್ ಸ್ಥಳಕ್ಕೆ ತೆರಳಿ ಮಹಜರು ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪದೇ ಪದೇ ಅಪಘಾತ:
ಸದರಿ ಸ್ಥಳವು ಹೆಚ್ಚು ಅಪಾಯಕಾರಿಯಾದ ತಿರುವಿನಿಂದ ಕೂಡಿದ ಸ್ಥಳವಾಗಿದೆ. ಇಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸುರಕ್ಷ ಗೋಡೆಯನ್ನು ನಿರ್ಮಿಸುವ ಮೂಲಕ ಅಪಘಾತ ಹಾಗೂ ಅಮೂಲ್ಯ ಜೀವಗಳನ್ನು ಉಳಿಸಬೇಕು ಎಂದು ತಾಲ್ಲೂಕು ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಸೋಮಶೇಖರ್ ಹಾಗೂ ಕಾರ್ಯಾಧ್ಯಕ್ಷ ಎಸ್.ರವಿ ಅವರುಗಳು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…