ಜಿಲ್ಲೆಗಳು

ಹಳ್ಳಕ್ಕೆ ಉರುಳಿದ ಸಾರಿಗೆ ಬಸ್: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ಮುರುಕನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಅವಘಡ 

ಕೆ.ಆರ್.ಪೇಟೆ: ಸಾರಿಗೆ ಬಸ್ಸೊಂದು ಶುಕ್ರವಾರ ಬೆಳಿಗ್ಗೆ ೬ ಗಂಟೆಯ ವೇಳೆ ತಾಲ್ಲೂಕಿನ ಮುರುಕನಹಳ್ಳಿ ಸೇತುವೆಯ ತಿರುವಿನಲ್ಲಿ ಮಗುಚಿ ಬಿದ್ದು ಸುಮಾರು ೩೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಸಂಭವಿಸಿದೆ.
ಕೆ.ಆರ್.ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮುರುಕನಹಳ್ಳಿ ಗ್ರಾಮದ ಬಳಿ ಸಾರುಗೆ ಬಸ್(ಕೆಎ-೦೯ ಇ-೫೨೮೨) ಗದಗದಿಂದ-ಮೈಸೂರಿನ ಕಡೆಗೆ ಹೋಗುತ್ತಿದ್ದಾಗ ಮರುಕನಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು, ಚಾಲಕ, ನಿರ್ವಾಹಕ ಸೇರಿದಂತೆ ಸುಮಾರು ೩೦ ಮಂದಿಗೆ ಸಣ್ಣಪುಟ್ಡ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಸ್ವರೂಪದ ಗಾಯಗಳಾಗಿಲ್ಲ. ಗಾಯಗೊಂಡವರನ್ನು ಕೆ.ಆರ್.ಪೇಟೆಯ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯ ವಿಚಾರ ತಿಳಿದ ತಕ್ಷಣ ಗ್ರಾಮಾಂತರ ಠಾಣೆಯ ಎಸ್‌ಐ ಪ್ರಮೋದ್ ಸ್ಥಳಕ್ಕೆ ತೆರಳಿ ಮಹಜರು ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪದೇ ಪದೇ ಅಪಘಾತ:
ಸದರಿ ಸ್ಥಳವು ಹೆಚ್ಚು ಅಪಾಯಕಾರಿಯಾದ ತಿರುವಿನಿಂದ ಕೂಡಿದ ಸ್ಥಳವಾಗಿದೆ. ಇಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸುರಕ್ಷ ಗೋಡೆಯನ್ನು ನಿರ್ಮಿಸುವ ಮೂಲಕ ಅಪಘಾತ ಹಾಗೂ ಅಮೂಲ್ಯ ಜೀವಗಳನ್ನು ಉಳಿಸಬೇಕು ಎಂದು ತಾಲ್ಲೂಕು ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಸೋಮಶೇಖರ್ ಹಾಗೂ ಕಾರ್ಯಾಧ್ಯಕ್ಷ ಎಸ್.ರವಿ ಅವರುಗಳು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

 

andolanait

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

4 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

4 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

4 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

5 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

8 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

9 hours ago