ಜಿಲ್ಲೆಗಳು

ಕಾಡಾಧ್ಯಕ್ಷರು ಮೊದಲು ಇಡಿ, ಐಟಿಗೆ ದೂರು ನೀಡಲಿ

 ಸುದ್ದಿಗೋಷ್ಠಿಯಲ್ಲಿ ಅರಕಲವಾಡಿ ಗುರುಸ್ವಾಮಿ ಸಲಹೆ

ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರ ವಿರುದ್ದ ಕಾಡಾಧ್ಯಕ್ಷರಾದ ನಿಜಗುಣರಾಜು ಮೊದಲು ಇಡಿ ಮತ್ತು ಐಟಿಗೆ ದೂರು ನೀಡಲಿ. ಶಾಸಕರು ದಾಖಲೆಗಳನ್ನು ಒದಗಿಸಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕಲವಾಡಿ ಗುರುಸ್ವಾಮಿ ತಿಳಿಸಿದರು.
ನಿಜಗುಣರಾಜು ಅವರು ಮೊದಲು ದೂರು ನೀಡಿ ನಂತರ ಶಾಸಕರ ವಿರುದ್ಧ ಆರೋಪ ಮಾಡಬೇಕಿತ್ತು. ಆದರೆ, ಅವರು ದೂರು ನೀಡುವುದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಶಾಸಕರು ತೆರಕಣಾಂಬಿ ಬಳಿ ಕಪ್ಪುಕಲ್ಲು ಕ್ವಾರಿ ಖರೀದಿಸುವಾಗ ಕ್ವಾರಿ ಮಾಲೀಕರುಗಳಿ ೯ ಕೋಟಿ ರೂ. ನಗದು ನೀಡಿದ್ದಾಗಿ ಹೇಳಿದ್ದಾರೆ. ಆ ಹಣ ಯಾವುದು ಎಂಬುದನ್ನು ಶಾಸಕರು ಸಂಬAಧಿಸಿದವರಿಗೆ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.
ಕಪ್ಪು ಕಲ್ಲಿಗೆ ಅಂತರಾಷ್ಟಿçÃಯ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆಯಿದ್ದು, ಬೆಲೆಯು ಕೂಡ ಆಗಾಗ್ಗೆ ದುಬಾರಿಯಾಗಿ ಅಧಿಕ ಲಾಭಾಂಶ ಬರುತ್ತದೆ. ಈ ಬಗ್ಗೆ ನಿಜಗುಣರಾಜು ಅವರು ಅರಿತುಕೊಳ್ಳಬೇಕು. ಜನಪ್ರತಿನಿಧಿಯೊಬ್ಬರು ಕಾನೂನುಬದ್ದವಾಗಿ ಆಸ್ತಿ ಸಂಪಾದನೆ ಮಾಡಬಾರದು ಎಂಬ ಯಾವುದಾದರೂ ಕಾನೂನು ಇದೆಯೇ ಎಂದು ಪ್ರಶ್ನಿಸಿದರು.
ನಿಜಗುಣರಾಜು ಅವರಿಗೆ ಕಪ್ಪು ಕಲ್ಲಿನ ವಹಿವಾಟು ಬಗ್ಗೆ ಅರಿವಿಲ್ಲದೆ ಶಾಸಕರ ವಿರುದ್ದ ಆರೋಪ ಮಾಡಿದ್ದಾರೆ. ಪುಟ್ಟರಂಗಶೆಟ್ಟಿ ಅವರು ಶಾಸಕರಾಗುವುದಕ್ಕೂ ಮೊದಲು ಕಪ್ಪುಕಲ್ಲು ಗಣಿ ವ್ಯವಹಾರವನ್ನು ಕಾನೂನು ಬದ್ದವಾಗಿ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಶಾಸಕರು ಗಣಿಗಾರಿಕೆ ಮಾಡಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪವನ್ನು ಮಾಡಿದ್ದಾರೆ. ಪುಟ್ಟರಂಗಶೆಟ್ಟಿ ಅವರಿಗೆ ೩೧ ಎಕರೆ ತೋಟವಿದೆ ಎಂಬುದು ನಿಜಗುಣರಾಜು ಅವರಿಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದ ಅವರು, ಶಾಸಕರು ನಿಯಮಿತವಾಗಿ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಬ್ಯಾಂಕ್‌ನಿಂದ ಕೋಟ್ಯಂತರ ರೂ. ಸಾಲ ದೊರಕುತ್ತದೆ ಎಂದರು.

andolanait

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

12 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

12 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

12 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

12 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

13 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

13 hours ago