ಜಿಲ್ಲೆಗಳು

ಕಾಡಾಧ್ಯಕ್ಷರು ಮೊದಲು ಇಡಿ, ಐಟಿಗೆ ದೂರು ನೀಡಲಿ

 ಸುದ್ದಿಗೋಷ್ಠಿಯಲ್ಲಿ ಅರಕಲವಾಡಿ ಗುರುಸ್ವಾಮಿ ಸಲಹೆ

ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರ ವಿರುದ್ದ ಕಾಡಾಧ್ಯಕ್ಷರಾದ ನಿಜಗುಣರಾಜು ಮೊದಲು ಇಡಿ ಮತ್ತು ಐಟಿಗೆ ದೂರು ನೀಡಲಿ. ಶಾಸಕರು ದಾಖಲೆಗಳನ್ನು ಒದಗಿಸಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕಲವಾಡಿ ಗುರುಸ್ವಾಮಿ ತಿಳಿಸಿದರು.
ನಿಜಗುಣರಾಜು ಅವರು ಮೊದಲು ದೂರು ನೀಡಿ ನಂತರ ಶಾಸಕರ ವಿರುದ್ಧ ಆರೋಪ ಮಾಡಬೇಕಿತ್ತು. ಆದರೆ, ಅವರು ದೂರು ನೀಡುವುದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಶಾಸಕರು ತೆರಕಣಾಂಬಿ ಬಳಿ ಕಪ್ಪುಕಲ್ಲು ಕ್ವಾರಿ ಖರೀದಿಸುವಾಗ ಕ್ವಾರಿ ಮಾಲೀಕರುಗಳಿ ೯ ಕೋಟಿ ರೂ. ನಗದು ನೀಡಿದ್ದಾಗಿ ಹೇಳಿದ್ದಾರೆ. ಆ ಹಣ ಯಾವುದು ಎಂಬುದನ್ನು ಶಾಸಕರು ಸಂಬAಧಿಸಿದವರಿಗೆ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.
ಕಪ್ಪು ಕಲ್ಲಿಗೆ ಅಂತರಾಷ್ಟಿçÃಯ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆಯಿದ್ದು, ಬೆಲೆಯು ಕೂಡ ಆಗಾಗ್ಗೆ ದುಬಾರಿಯಾಗಿ ಅಧಿಕ ಲಾಭಾಂಶ ಬರುತ್ತದೆ. ಈ ಬಗ್ಗೆ ನಿಜಗುಣರಾಜು ಅವರು ಅರಿತುಕೊಳ್ಳಬೇಕು. ಜನಪ್ರತಿನಿಧಿಯೊಬ್ಬರು ಕಾನೂನುಬದ್ದವಾಗಿ ಆಸ್ತಿ ಸಂಪಾದನೆ ಮಾಡಬಾರದು ಎಂಬ ಯಾವುದಾದರೂ ಕಾನೂನು ಇದೆಯೇ ಎಂದು ಪ್ರಶ್ನಿಸಿದರು.
ನಿಜಗುಣರಾಜು ಅವರಿಗೆ ಕಪ್ಪು ಕಲ್ಲಿನ ವಹಿವಾಟು ಬಗ್ಗೆ ಅರಿವಿಲ್ಲದೆ ಶಾಸಕರ ವಿರುದ್ದ ಆರೋಪ ಮಾಡಿದ್ದಾರೆ. ಪುಟ್ಟರಂಗಶೆಟ್ಟಿ ಅವರು ಶಾಸಕರಾಗುವುದಕ್ಕೂ ಮೊದಲು ಕಪ್ಪುಕಲ್ಲು ಗಣಿ ವ್ಯವಹಾರವನ್ನು ಕಾನೂನು ಬದ್ದವಾಗಿ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಶಾಸಕರು ಗಣಿಗಾರಿಕೆ ಮಾಡಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪವನ್ನು ಮಾಡಿದ್ದಾರೆ. ಪುಟ್ಟರಂಗಶೆಟ್ಟಿ ಅವರಿಗೆ ೩೧ ಎಕರೆ ತೋಟವಿದೆ ಎಂಬುದು ನಿಜಗುಣರಾಜು ಅವರಿಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದ ಅವರು, ಶಾಸಕರು ನಿಯಮಿತವಾಗಿ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಬ್ಯಾಂಕ್‌ನಿಂದ ಕೋಟ್ಯಂತರ ರೂ. ಸಾಲ ದೊರಕುತ್ತದೆ ಎಂದರು.

andolanait

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

4 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

11 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

11 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

11 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

11 hours ago