ಜಿಲ್ಲೆಗಳು

ಕಾಡಾಧ್ಯಕ್ಷರು ಮೊದಲು ಇಡಿ, ಐಟಿಗೆ ದೂರು ನೀಡಲಿ

 ಸುದ್ದಿಗೋಷ್ಠಿಯಲ್ಲಿ ಅರಕಲವಾಡಿ ಗುರುಸ್ವಾಮಿ ಸಲಹೆ

ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರ ವಿರುದ್ದ ಕಾಡಾಧ್ಯಕ್ಷರಾದ ನಿಜಗುಣರಾಜು ಮೊದಲು ಇಡಿ ಮತ್ತು ಐಟಿಗೆ ದೂರು ನೀಡಲಿ. ಶಾಸಕರು ದಾಖಲೆಗಳನ್ನು ಒದಗಿಸಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕಲವಾಡಿ ಗುರುಸ್ವಾಮಿ ತಿಳಿಸಿದರು.
ನಿಜಗುಣರಾಜು ಅವರು ಮೊದಲು ದೂರು ನೀಡಿ ನಂತರ ಶಾಸಕರ ವಿರುದ್ಧ ಆರೋಪ ಮಾಡಬೇಕಿತ್ತು. ಆದರೆ, ಅವರು ದೂರು ನೀಡುವುದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಶಾಸಕರು ತೆರಕಣಾಂಬಿ ಬಳಿ ಕಪ್ಪುಕಲ್ಲು ಕ್ವಾರಿ ಖರೀದಿಸುವಾಗ ಕ್ವಾರಿ ಮಾಲೀಕರುಗಳಿ ೯ ಕೋಟಿ ರೂ. ನಗದು ನೀಡಿದ್ದಾಗಿ ಹೇಳಿದ್ದಾರೆ. ಆ ಹಣ ಯಾವುದು ಎಂಬುದನ್ನು ಶಾಸಕರು ಸಂಬAಧಿಸಿದವರಿಗೆ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.
ಕಪ್ಪು ಕಲ್ಲಿಗೆ ಅಂತರಾಷ್ಟಿçÃಯ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆಯಿದ್ದು, ಬೆಲೆಯು ಕೂಡ ಆಗಾಗ್ಗೆ ದುಬಾರಿಯಾಗಿ ಅಧಿಕ ಲಾಭಾಂಶ ಬರುತ್ತದೆ. ಈ ಬಗ್ಗೆ ನಿಜಗುಣರಾಜು ಅವರು ಅರಿತುಕೊಳ್ಳಬೇಕು. ಜನಪ್ರತಿನಿಧಿಯೊಬ್ಬರು ಕಾನೂನುಬದ್ದವಾಗಿ ಆಸ್ತಿ ಸಂಪಾದನೆ ಮಾಡಬಾರದು ಎಂಬ ಯಾವುದಾದರೂ ಕಾನೂನು ಇದೆಯೇ ಎಂದು ಪ್ರಶ್ನಿಸಿದರು.
ನಿಜಗುಣರಾಜು ಅವರಿಗೆ ಕಪ್ಪು ಕಲ್ಲಿನ ವಹಿವಾಟು ಬಗ್ಗೆ ಅರಿವಿಲ್ಲದೆ ಶಾಸಕರ ವಿರುದ್ದ ಆರೋಪ ಮಾಡಿದ್ದಾರೆ. ಪುಟ್ಟರಂಗಶೆಟ್ಟಿ ಅವರು ಶಾಸಕರಾಗುವುದಕ್ಕೂ ಮೊದಲು ಕಪ್ಪುಕಲ್ಲು ಗಣಿ ವ್ಯವಹಾರವನ್ನು ಕಾನೂನು ಬದ್ದವಾಗಿ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಶಾಸಕರು ಗಣಿಗಾರಿಕೆ ಮಾಡಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪವನ್ನು ಮಾಡಿದ್ದಾರೆ. ಪುಟ್ಟರಂಗಶೆಟ್ಟಿ ಅವರಿಗೆ ೩೧ ಎಕರೆ ತೋಟವಿದೆ ಎಂಬುದು ನಿಜಗುಣರಾಜು ಅವರಿಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದ ಅವರು, ಶಾಸಕರು ನಿಯಮಿತವಾಗಿ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಬ್ಯಾಂಕ್‌ನಿಂದ ಕೋಟ್ಯಂತರ ರೂ. ಸಾಲ ದೊರಕುತ್ತದೆ ಎಂದರು.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

45 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

49 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

54 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

59 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

1 hour ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago