ಸುದ್ದಿಗೋಷ್ಠಿಯಲ್ಲಿ ಅರಕಲವಾಡಿ ಗುರುಸ್ವಾಮಿ ಸಲಹೆ
ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರ ವಿರುದ್ದ ಕಾಡಾಧ್ಯಕ್ಷರಾದ ನಿಜಗುಣರಾಜು ಮೊದಲು ಇಡಿ ಮತ್ತು ಐಟಿಗೆ ದೂರು ನೀಡಲಿ. ಶಾಸಕರು ದಾಖಲೆಗಳನ್ನು ಒದಗಿಸಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕಲವಾಡಿ ಗುರುಸ್ವಾಮಿ ತಿಳಿಸಿದರು.
ನಿಜಗುಣರಾಜು ಅವರು ಮೊದಲು ದೂರು ನೀಡಿ ನಂತರ ಶಾಸಕರ ವಿರುದ್ಧ ಆರೋಪ ಮಾಡಬೇಕಿತ್ತು. ಆದರೆ, ಅವರು ದೂರು ನೀಡುವುದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಶಾಸಕರು ತೆರಕಣಾಂಬಿ ಬಳಿ ಕಪ್ಪುಕಲ್ಲು ಕ್ವಾರಿ ಖರೀದಿಸುವಾಗ ಕ್ವಾರಿ ಮಾಲೀಕರುಗಳಿ ೯ ಕೋಟಿ ರೂ. ನಗದು ನೀಡಿದ್ದಾಗಿ ಹೇಳಿದ್ದಾರೆ. ಆ ಹಣ ಯಾವುದು ಎಂಬುದನ್ನು ಶಾಸಕರು ಸಂಬAಧಿಸಿದವರಿಗೆ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.
ಕಪ್ಪು ಕಲ್ಲಿಗೆ ಅಂತರಾಷ್ಟಿçÃಯ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆಯಿದ್ದು, ಬೆಲೆಯು ಕೂಡ ಆಗಾಗ್ಗೆ ದುಬಾರಿಯಾಗಿ ಅಧಿಕ ಲಾಭಾಂಶ ಬರುತ್ತದೆ. ಈ ಬಗ್ಗೆ ನಿಜಗುಣರಾಜು ಅವರು ಅರಿತುಕೊಳ್ಳಬೇಕು. ಜನಪ್ರತಿನಿಧಿಯೊಬ್ಬರು ಕಾನೂನುಬದ್ದವಾಗಿ ಆಸ್ತಿ ಸಂಪಾದನೆ ಮಾಡಬಾರದು ಎಂಬ ಯಾವುದಾದರೂ ಕಾನೂನು ಇದೆಯೇ ಎಂದು ಪ್ರಶ್ನಿಸಿದರು.
ನಿಜಗುಣರಾಜು ಅವರಿಗೆ ಕಪ್ಪು ಕಲ್ಲಿನ ವಹಿವಾಟು ಬಗ್ಗೆ ಅರಿವಿಲ್ಲದೆ ಶಾಸಕರ ವಿರುದ್ದ ಆರೋಪ ಮಾಡಿದ್ದಾರೆ. ಪುಟ್ಟರಂಗಶೆಟ್ಟಿ ಅವರು ಶಾಸಕರಾಗುವುದಕ್ಕೂ ಮೊದಲು ಕಪ್ಪುಕಲ್ಲು ಗಣಿ ವ್ಯವಹಾರವನ್ನು ಕಾನೂನು ಬದ್ದವಾಗಿ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಶಾಸಕರು ಗಣಿಗಾರಿಕೆ ಮಾಡಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪವನ್ನು ಮಾಡಿದ್ದಾರೆ. ಪುಟ್ಟರಂಗಶೆಟ್ಟಿ ಅವರಿಗೆ ೩೧ ಎಕರೆ ತೋಟವಿದೆ ಎಂಬುದು ನಿಜಗುಣರಾಜು ಅವರಿಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದ ಅವರು, ಶಾಸಕರು ನಿಯಮಿತವಾಗಿ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಬ್ಯಾಂಕ್ನಿಂದ ಕೋಟ್ಯಂತರ ರೂ. ಸಾಲ ದೊರಕುತ್ತದೆ ಎಂದರು.
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…
ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…