ಜಿಲ್ಲೆಗಳು

ಕಾಡಾಧ್ಯಕ್ಷರು ಮೊದಲು ಇಡಿ, ಐಟಿಗೆ ದೂರು ನೀಡಲಿ

 ಸುದ್ದಿಗೋಷ್ಠಿಯಲ್ಲಿ ಅರಕಲವಾಡಿ ಗುರುಸ್ವಾಮಿ ಸಲಹೆ

ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರ ವಿರುದ್ದ ಕಾಡಾಧ್ಯಕ್ಷರಾದ ನಿಜಗುಣರಾಜು ಮೊದಲು ಇಡಿ ಮತ್ತು ಐಟಿಗೆ ದೂರು ನೀಡಲಿ. ಶಾಸಕರು ದಾಖಲೆಗಳನ್ನು ಒದಗಿಸಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕಲವಾಡಿ ಗುರುಸ್ವಾಮಿ ತಿಳಿಸಿದರು.
ನಿಜಗುಣರಾಜು ಅವರು ಮೊದಲು ದೂರು ನೀಡಿ ನಂತರ ಶಾಸಕರ ವಿರುದ್ಧ ಆರೋಪ ಮಾಡಬೇಕಿತ್ತು. ಆದರೆ, ಅವರು ದೂರು ನೀಡುವುದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಶಾಸಕರು ತೆರಕಣಾಂಬಿ ಬಳಿ ಕಪ್ಪುಕಲ್ಲು ಕ್ವಾರಿ ಖರೀದಿಸುವಾಗ ಕ್ವಾರಿ ಮಾಲೀಕರುಗಳಿ ೯ ಕೋಟಿ ರೂ. ನಗದು ನೀಡಿದ್ದಾಗಿ ಹೇಳಿದ್ದಾರೆ. ಆ ಹಣ ಯಾವುದು ಎಂಬುದನ್ನು ಶಾಸಕರು ಸಂಬAಧಿಸಿದವರಿಗೆ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.
ಕಪ್ಪು ಕಲ್ಲಿಗೆ ಅಂತರಾಷ್ಟಿçÃಯ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆಯಿದ್ದು, ಬೆಲೆಯು ಕೂಡ ಆಗಾಗ್ಗೆ ದುಬಾರಿಯಾಗಿ ಅಧಿಕ ಲಾಭಾಂಶ ಬರುತ್ತದೆ. ಈ ಬಗ್ಗೆ ನಿಜಗುಣರಾಜು ಅವರು ಅರಿತುಕೊಳ್ಳಬೇಕು. ಜನಪ್ರತಿನಿಧಿಯೊಬ್ಬರು ಕಾನೂನುಬದ್ದವಾಗಿ ಆಸ್ತಿ ಸಂಪಾದನೆ ಮಾಡಬಾರದು ಎಂಬ ಯಾವುದಾದರೂ ಕಾನೂನು ಇದೆಯೇ ಎಂದು ಪ್ರಶ್ನಿಸಿದರು.
ನಿಜಗುಣರಾಜು ಅವರಿಗೆ ಕಪ್ಪು ಕಲ್ಲಿನ ವಹಿವಾಟು ಬಗ್ಗೆ ಅರಿವಿಲ್ಲದೆ ಶಾಸಕರ ವಿರುದ್ದ ಆರೋಪ ಮಾಡಿದ್ದಾರೆ. ಪುಟ್ಟರಂಗಶೆಟ್ಟಿ ಅವರು ಶಾಸಕರಾಗುವುದಕ್ಕೂ ಮೊದಲು ಕಪ್ಪುಕಲ್ಲು ಗಣಿ ವ್ಯವಹಾರವನ್ನು ಕಾನೂನು ಬದ್ದವಾಗಿ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಶಾಸಕರು ಗಣಿಗಾರಿಕೆ ಮಾಡಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪವನ್ನು ಮಾಡಿದ್ದಾರೆ. ಪುಟ್ಟರಂಗಶೆಟ್ಟಿ ಅವರಿಗೆ ೩೧ ಎಕರೆ ತೋಟವಿದೆ ಎಂಬುದು ನಿಜಗುಣರಾಜು ಅವರಿಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದ ಅವರು, ಶಾಸಕರು ನಿಯಮಿತವಾಗಿ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಬ್ಯಾಂಕ್‌ನಿಂದ ಕೋಟ್ಯಂತರ ರೂ. ಸಾಲ ದೊರಕುತ್ತದೆ ಎಂದರು.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

5 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

6 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

6 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

7 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

8 hours ago