ಚಾಮರಾಜನಗರ : ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯು ಈ ಭಾಗದ ಜನರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ ಎಂದು ಮಾಜಿ ಶಾಸಕಿ ಪರಿಮಳಾ ನಾಗಪ್ಪ ಹೇಳಿದರು.
ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಕಾಮಗೆರೆಯಲ್ಲಿರುವ ಹೋಲಿಕ್ರಾಸ್ ನರ್ಸಿಂಗ್ ಕಾಲೇಜಿನ ರಜತಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹಾವು ಕಚ್ಚುವ ಪ್ರಕರಣ, ಅಪಘಾತ ಸೇರಿದಂತೆ ಯಾವುದೇ ಪ್ರಕರಣ ನಡೆದರೂ ಮೊದಲು ಜನ ಹೋಲಿಕ್ರಾಸ್ ಆಸ್ಪತ್ರೆಯೆಡೆಗೆ ಬರುತ್ತಾರೆ. ಇಲ್ಲಿನ ಸಿಬ್ಬಂದಿ ಸೇವಾ ಮನೋಭಾವದಿಂದಲೇ ನೋಡುತ್ತಾರೆ. ಇದರಿಂದಲೇ ಈ ಸಂಸ್ಥೆ ಬಗ್ಗೆ ಜನರಲ್ಲೂ ಸದಾಭಿಪ್ರಾಯವಿದೆ ಎಂದು ನುಡಿದರು.
ಮಕ್ಕಳ ತಜ್ಞ ಡಾ.ಶಿವು ಮಾತನಾಡಿ, ಈ ಭಾಗದಲ್ಲಿ ನಾನು ಕೆಲಸ ಮಾಡಿದ್ದೇನೆ. ಚಿಕಿತ್ಸೆ ವಿಚಾರದಲ್ಲಿ ಹೋಲಿಕ್ರಾಸ್ ಸಂಸ್ಥೆಯ ಸಿಬ್ಬಂದಿ ಸೇವೆ ಸ್ಮರಣೀಯ. ಇಂಥ ಮನೋಭಾವದಿಂದಲೇ ಯಾವುದೇ ಸಂಸ್ಥೆ ಬೆಳೆಯಲು ಸಾಧ್ಯ ಎಂದು ಹೇಳಿದರು.
ಕೊಳ್ಳೇಗಾಲ ಪಿಎಸ್ಐ ಬಿ.ಸಿ.ಮಂಜುನಾಥ್ ಮಾತನಾಡಿ, ಗ್ರಾಮಾಂತರ ವ್ಯಾಪ್ತಿಯಲ್ಲಿ ಯಾವುದೇ ತುರ್ತು ಪ್ರಕರಣವಿದ್ದಾಗ ನಾವು ಹೋಲಿಕ್ರಾಸ್ ಸಂಸ್ಥೆ ಸಂಪರ್ಕಿಸುತ್ತೇವೆ. ಮೊದಲು ಇಲ್ಲಿ ಸೇವೆ ಪಡೆದವರು ನಂತರ ಬೇರೆ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆ ಹೋಗುತ್ತಾರೆ. ಪೊಲೀಸ್ ಇಲಾಖೆಯ ಹೆಚ್ಚಿನ ಪ್ರಕರಣಗಳಿಗೆ ಇಲ್ಲಿಯೇ ಚಿಕಿತ್ಸೆ ಸಿಗುವುದನ್ನು ನಾನೇ ನೋಡಿದ್ದೇನೆ ಎಂದು ಶ್ಲಾಘಿಸಿದರ
ಕಾರ್ಯಕ್ರಮದಲ್ಲಿ ಮೈಸೂರು ಬಿಷಪ್ ಥಾಮಸ್ ವಾಜಪಿಳ್ಳೈ, ಆರೋಗ್ಯ ವಿವಿ ಸೆನೆಟ್ ಸದಸ್ಯರಾದ ಡಾ.ಬಿಂದು ಮ್ಯಾಥ್ಯು, ಕಾಂಗ್ರೆಸ್ ಮುಖಂಡ ಪುಟ್ಟರಾಜು, ಶಿನಿಜೋಸ್, ಫಾದರ್ ಶಾಂತರಾಜ್, ಪ್ರಾಂಶುಪಾಲರಾದ ಲೂಸಿ ಜಾನ್ ಮತ್ತಿತರರು ಹಾಜರಿದ್ದರು.
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…
ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…
ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…