ಚಾಮರಾಜನಗರ : ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯು ಈ ಭಾಗದ ಜನರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ ಎಂದು ಮಾಜಿ ಶಾಸಕಿ ಪರಿಮಳಾ ನಾಗಪ್ಪ ಹೇಳಿದರು.
ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಕಾಮಗೆರೆಯಲ್ಲಿರುವ ಹೋಲಿಕ್ರಾಸ್ ನರ್ಸಿಂಗ್ ಕಾಲೇಜಿನ ರಜತಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹಾವು ಕಚ್ಚುವ ಪ್ರಕರಣ, ಅಪಘಾತ ಸೇರಿದಂತೆ ಯಾವುದೇ ಪ್ರಕರಣ ನಡೆದರೂ ಮೊದಲು ಜನ ಹೋಲಿಕ್ರಾಸ್ ಆಸ್ಪತ್ರೆಯೆಡೆಗೆ ಬರುತ್ತಾರೆ. ಇಲ್ಲಿನ ಸಿಬ್ಬಂದಿ ಸೇವಾ ಮನೋಭಾವದಿಂದಲೇ ನೋಡುತ್ತಾರೆ. ಇದರಿಂದಲೇ ಈ ಸಂಸ್ಥೆ ಬಗ್ಗೆ ಜನರಲ್ಲೂ ಸದಾಭಿಪ್ರಾಯವಿದೆ ಎಂದು ನುಡಿದರು.
ಮಕ್ಕಳ ತಜ್ಞ ಡಾ.ಶಿವು ಮಾತನಾಡಿ, ಈ ಭಾಗದಲ್ಲಿ ನಾನು ಕೆಲಸ ಮಾಡಿದ್ದೇನೆ. ಚಿಕಿತ್ಸೆ ವಿಚಾರದಲ್ಲಿ ಹೋಲಿಕ್ರಾಸ್ ಸಂಸ್ಥೆಯ ಸಿಬ್ಬಂದಿ ಸೇವೆ ಸ್ಮರಣೀಯ. ಇಂಥ ಮನೋಭಾವದಿಂದಲೇ ಯಾವುದೇ ಸಂಸ್ಥೆ ಬೆಳೆಯಲು ಸಾಧ್ಯ ಎಂದು ಹೇಳಿದರು.
ಕೊಳ್ಳೇಗಾಲ ಪಿಎಸ್ಐ ಬಿ.ಸಿ.ಮಂಜುನಾಥ್ ಮಾತನಾಡಿ, ಗ್ರಾಮಾಂತರ ವ್ಯಾಪ್ತಿಯಲ್ಲಿ ಯಾವುದೇ ತುರ್ತು ಪ್ರಕರಣವಿದ್ದಾಗ ನಾವು ಹೋಲಿಕ್ರಾಸ್ ಸಂಸ್ಥೆ ಸಂಪರ್ಕಿಸುತ್ತೇವೆ. ಮೊದಲು ಇಲ್ಲಿ ಸೇವೆ ಪಡೆದವರು ನಂತರ ಬೇರೆ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆ ಹೋಗುತ್ತಾರೆ. ಪೊಲೀಸ್ ಇಲಾಖೆಯ ಹೆಚ್ಚಿನ ಪ್ರಕರಣಗಳಿಗೆ ಇಲ್ಲಿಯೇ ಚಿಕಿತ್ಸೆ ಸಿಗುವುದನ್ನು ನಾನೇ ನೋಡಿದ್ದೇನೆ ಎಂದು ಶ್ಲಾಘಿಸಿದರ
ಕಾರ್ಯಕ್ರಮದಲ್ಲಿ ಮೈಸೂರು ಬಿಷಪ್ ಥಾಮಸ್ ವಾಜಪಿಳ್ಳೈ, ಆರೋಗ್ಯ ವಿವಿ ಸೆನೆಟ್ ಸದಸ್ಯರಾದ ಡಾ.ಬಿಂದು ಮ್ಯಾಥ್ಯು, ಕಾಂಗ್ರೆಸ್ ಮುಖಂಡ ಪುಟ್ಟರಾಜು, ಶಿನಿಜೋಸ್, ಫಾದರ್ ಶಾಂತರಾಜ್, ಪ್ರಾಂಶುಪಾಲರಾದ ಲೂಸಿ ಜಾನ್ ಮತ್ತಿತರರು ಹಾಜರಿದ್ದರು.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…